Homeಕರ್ನಾಟಕಕೆಎಫ್‌ಸಿ ವಿರುದ್ಧ ಮುಂದುವರಿದ ಹೋರಾಟ; ಕನ್ನಡಿಗರ ಜೊತೆ ನಿಂತ ತಮಿಳರು

ಕೆಎಫ್‌ಸಿ ವಿರುದ್ಧ ಮುಂದುವರಿದ ಹೋರಾಟ; ಕನ್ನಡಿಗರ ಜೊತೆ ನಿಂತ ತಮಿಳರು

‘ನಮ್ಮ ರಾಷ್ಟ್ರಭಾಷೆ ಹಿಂದಿ, ನಮ್ಮ ಮಳಿಗೆಯಲ್ಲಿ ಕನ್ನಡದ ಹಾಡು ಹಾಕುವುದಿಲ್ಲ, ಹಿಂದಿಯನ್ನೇ ಹಾಕುತ್ತೇವೆ. ನೀವು ಏನೂ‌ ಮಾಡಿಕೊಳ್ಳಲು ಆಗುವುದಿಲ್ಲ’ ಎಂದು ದುರಹಂಕಾರ ಮೆರೆದ ಕೆಎಫ್‌ಸಿ; ಆರೋಪ

- Advertisement -
- Advertisement -

ಕೆಎಫ್‌ಸಿ ಸಂಸ್ಥೆ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಕನ್ನಡಿಗರು ನಡೆಸುತ್ತಿರುವ ಅಭಿಯಾನ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಮಂಗಳವಾರ ಹುಬ್ಬಳ್ಳಿಯ ಕೆಎಫ್‌ಸಿ ಮಳಿಗೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಿಗ್ಬಂಧನ ಹೂಡಿದರು.

ಕರವೇ ರಾಜ್ಯ ಕಾರ್ಯದರ್ಶಿ ಹನುಮಂತ ಅಬ್ಬಿಗೇರಿ, ಧಾರವಾಡ ಜಿಲ್ಲಾಧ್ಯಕ್ಷ ರುದ್ರೇಶ್ ಹಳವದ ಅವರ ನೇತೃತ್ವದಲ್ಲಿ ಕರವೇ ಪದಾಧಿಕಾರಿಗಳು ಕೆಎಫ್‌ಸಿ ಮಳಿಗೆಗೆ ಮುತ್ತಿಗೆ ಹಾಕಿ, ಅಲ್ಲಿನ ಸಿಬ್ಬಂದಿಗೆ ಕನ್ನಡದ ಪಾಠ ಹೇಳಿದರು.

ಕೆಎಫ್‌ಸಿ ಮಳಿಗೆಗಳಲ್ಲಿ ಸಂಪೂರ್ಣ ಕನ್ನಡವನ್ನೇ ಬಳಸಬೇಕು, ಕನ್ನಡದಲ್ಲೇ ವ್ಯವಹರಿಸಬೇಕು, ಎಲ್ಲ ನಾಮಫಲಕಗಳೂ ಕನ್ನಡದಲ್ಲಿ ಇರಬೇಕು, ಕನ್ನಡದ ಹಾಡುಗಳನ್ನು ಹಾಕಬೇಕು. ಇದಕ್ಕಾಗಿ ಒಂದು ವಾರದ ಗಡುವು ನೀಡುತ್ತಿದ್ದೇವೆ ಎಂದು ಕರವೇ ರಾಜ್ಯ ಕಾರ್ಯದರ್ಶಿ ಹನುಮಂತ ಅಬ್ಬಿಗೇರಿ ಎಚ್ಚರಿಕೆ ನೀಡಿದರು.

ರಾಜ್ಯೋತ್ಸವಕ್ಕೆ ಮುನ್ನ ಕೆಎಫ್‌ಸಿ ಕನ್ನಡೀಕರಣವಾಗಬೇಕು. ಬೆಂಗಳೂರಿನ ಇಂದಿರಾನಗರ ಕೆಎಫ್‌ಸಿ ಮಾಲ್‌ನಲ್ಲಿ ಕನ್ನಡಿಗರ ವಿರುದ್ಧ ಮಾತಾಡಿದ್ದಕ್ಕೆ ಸಂಸ್ಥೆ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಕರವೇ ಉಗ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ. ಆಗ ಆಗುವ ಅನಾಹುತಗಳಿಗೆ ಕೆಎಫ್‌ಸಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಕರವೇ ಧಾರವಾಡ ಜಿಲ್ಲಾಧ್ಯಕ್ಷ ರುದ್ರೇಶ ಹಳವದ ಎಚ್ಚರಿಕೆ ನೀಡಿದರು.

ಕನ್ನಡವನ್ನು ಅಪಮಾನಿಸಿದ ಕೆಎಫ್‌ಸಿ ವಿರುದ್ಧ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು ಭಾನುವಾರ #RejectKFC #KFCಕನ್ನಡಬೇಕು ಎಂಬ ಹ್ಯಾಶ್ ಟ್ಯಾಗ್‌ಗಳು ರಾಷ್ಟ್ರಮಟ್ಟದಲ್ಲಿ ಟ್ರೆಂಡ್ ಆಗಿದ್ದವು. ಸೋಮವಾರ ದಾವಣಗೆರೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಎಂ.ಎಸ್.ರಾಮೇಗೌಡರ ನೇತೃತ್ವದಲ್ಲಿ ಕೆಎಫ್‌ಸಿ ಮುಂಭಾಗ ಪ್ರತಿಭಟನೆ ನಡೆದಿತ್ತು.

ಇದನ್ನೂ ಓದಿರಿ: ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ಮಂಗಳವಾರ ಕರವೇ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಹುಬ್ಬಳ್ಳಿ ಗೋಕುಲ ರೋಡ್ ಕೆ.ಎಫ್.ಸಿ ಮಳಿಗೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಕರವೇ ರಾಜ್ಯ ಸಂಚಾಲಕರಾದ ಹನುಮಂತಪ್ಪ ಮೇಟಿ, ಕರವೇ ರಾಜ್ಯ ಪದವೀಧರ ಘಟಕದ ಕಾರ್ಯದರ್ಶಿ ಪ್ರಭುಗೌಡ ಸಖ್ಯಾಗೌಡಶಾನಿ, ಯುವ ಘಟಕ ಜಿಲ್ಲಾ ಧ್ಯಕ್ಷರಾದ ಸಾಗರ್ ಗಾಯಕವಾಡ, ರೈತ ಘಟಕ ಜಿಲ್ಲಾಧ್ಯಕ್ಷರಾದ ಪಾಪು ಧಾರೆ, ಹುಬ್ಬಳ್ಳಿ ತಾಲೂಕು ಅಧ್ಯಕ್ಷರಾದ ಗುರಪ್ಪ ಹಳ್ಯಾಳ, ಹುಬ್ಬಳ್ಳಿ ತಾಲೂಕ ಯುವ ಘಟಕ ಅಧ್ಯಕ್ಷರಾದ ಗಂಗು ಪಾಟೀಲ್, ಧಾರವಾಡ ನಗರ ಘಟಕ ಅಧ್ಯಕ್ಷರಾದ ಮಲಿಕರೀಯಾಜ ಕಂಬಾರಗಣವಿ, ಧಾರವಾಡ ತಾಲ್ಲೂಕ ಉಪಾಧ್ಯಕ್ಷರಾದ ಕಲ್ಮೇಶ ಸಾಲಿ ಇನ್ನಿತರರು ಪಾಲ್ಗೊಂಡರು.

ಕೆಎಫ್‌ಸಿ ತಿರಸ್ಕರಿಸಿ ಅಭಿಯಾನಕ್ಕೆ ತಮಿಳಿಗರ ಬೆಂಬಲ

“ನಮ್ಮ ರಾಷ್ಟ್ರಭಾಷೆ ಹಿಂದಿ, ನಮ್ಮ ಮಳಿಗೆಯಲ್ಲಿ ಕನ್ನಡದ ಹಾಡು ಹಾಕುವುದಿಲ್ಲ, ಹಿಂದಿಯನ್ನೇ ಹಾಕುತ್ತೇವೆ. ನೀವು ಏನೂ‌ ಮಾಡಿಕೊಳ್ಳಲು ಆಗುವುದಿಲ್ಲ” ಎಂದು ದುರಹಂಕಾರ ಮೆರೆದ ಕೆಎಫ್‌ಸಿ ಸಂಸ್ಥೆ ವಿರುದ್ಧ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದು, ಕಳೆದ ಮೂರು ದಿನಗಳಿಂದ ನಡೆಯುತ್ತಿರುವ #RejectKFC ಅಭಿಯಾನಕ್ಕೆ ತಮಿಳುನಾಡಿನ ತಮಿಳು ಭಾಷಿಕರು ಭಾರಿ‌ ಬೆಂಬಲ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ತಮಿಳರು ಭಾನುವಾರದಿಂದ #RejectKFC ಹ್ಯಾಶ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡುತ್ತಿದ್ದು, ಕೆಎಫ್‌‌ಸಿಯಂಥ ಸಂಸ್ಥೆಗಳು ಆಯಾ ರಾಜ್ಯದ ಭಾಷೆ, ಸಂಸ್ಕೃತಿಯನ್ನು ಗೌರವಿಸಬೇಕು, ಇಲ್ಲವಾದಲ್ಲಿ ಅಂಥವುಗಳನ್ನು ನಾವೇ ಧಿಕ್ಕರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಕನ್ನಡಿಗರ ಹೋರಾಟಕ್ಕೆ ಬೆಂಬಲ‌ ನೀಡುತ್ತಿದ್ದಾರೆ.

ಸಣ್ಣಪುಟ್ಟ ವಿಷಯಗಳಿಗೆ ಸ್ಪಂದಿಸಿ ಉತ್ತರ ನೀಡುವ ಕೆಎಫ್‌ಸಿ, ಇದುವರೆಗೆ ಕನ್ನಡಿಗರ ಅಭಿಯಾನದ ಕುರಿತು ಮಾತನಾಡದೇ ಇರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಈಗಾಗಲೇ ಒಂದು‌ವಾರದ ಗಡುವು ನೀಡಿದ್ದು, ಉಗ್ರ ಸ್ವರೂಪದ ಹೋರಾಟದ ಎಚ್ಚರಿಕೆ ನೀಡಿದೆ.

ಮಂಗಳವಾರ ಬೆಂಗಳೂರಿನ ರಾಜಾಜಿನಗರದ ಕೆಎಫ್‌ಸಿ ಮಳಿಗೆಗೆ ಕರವೇ ಬೆಂಗಳೂರು ನಗರ ಉಪಾಧ್ಯಕ್ಷ ಕೆ.ಪಿ.ನರಸಿಂಹ ಅವರ ನೇತೃತ್ವದ ತಂಡ ಭೇಟಿ ನೀಡಿ, ಅಲ್ಲಿನ‌ ಮೇಲ್ವಿಚಾರಕರಿಗೆ ಎಚ್ಚರಿಕೆಯ ಪತ್ರ ನೀಡಿತು.

ವಾರದ ಒಳಗೆ ಕೆಎಫ್‌ಸಿ ನಾಮಫಲಕಗಳು ಕನ್ನಡೀಕರಣಗೊಳ್ಳಬೇಕು, ಕನ್ನಡಿಗರಿಗೆ ಉದ್ಯೋಗ ನೀಡಬೇಕು, ಗ್ರಾಹಕರೊಂದಿಗೆ ಕನ್ನಡದಲ್ಲೇ ವ್ಯವಹರಿಸಬೇಕು, ಇಲ್ಲವಾದಲ್ಲಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗುತ್ತೀರಿ ಎಂದು ಕೆ.ಪಿ.ನರಸಿಂಹ ಎಚ್ಚರಿಸಿದರು.

ಕರವೇ ರಾಜಾಜಿನಗರ ಕ್ಷೇತ್ರ ಅಧ್ಯಕ್ಷರಾದ ಮಂಜುನಾಥ್, ಬಸವೇಶ್ವರನಗರ ಕ್ಷೇತ್ರ ಅಧ್ಯಕ್ಷರಾದ ಸಿದ್ಧರಾಜು, ಪ್ರಕಾಶನಗರ ವಾರ್ಡ್ ಉಪಾಧ್ಯಕ್ಷ ರವಿ, ಮುಖಂಡರಾದ ಗಂಗಣ್ಣ, ನಿರ್ಮೋಹ, ಲಕ್ಷ್ಮಿನಾರಾಯಣಪುರ ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವ: ಅತ್ಯುತ್ತಮ LGBTQI+ ಚಿತ್ರ ಪ್ರಶಸ್ತಿ ಪಡೆದ ಕನ್ನಡದ ‘ನಾನು ಲೇಡಿಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...