Homeಕರ್ನಾಟಕಕೆಎಫ್‌ಸಿ ವಿರುದ್ಧ ಮುಂದುವರಿದ ಹೋರಾಟ; ಕನ್ನಡಿಗರ ಜೊತೆ ನಿಂತ ತಮಿಳರು

ಕೆಎಫ್‌ಸಿ ವಿರುದ್ಧ ಮುಂದುವರಿದ ಹೋರಾಟ; ಕನ್ನಡಿಗರ ಜೊತೆ ನಿಂತ ತಮಿಳರು

‘ನಮ್ಮ ರಾಷ್ಟ್ರಭಾಷೆ ಹಿಂದಿ, ನಮ್ಮ ಮಳಿಗೆಯಲ್ಲಿ ಕನ್ನಡದ ಹಾಡು ಹಾಕುವುದಿಲ್ಲ, ಹಿಂದಿಯನ್ನೇ ಹಾಕುತ್ತೇವೆ. ನೀವು ಏನೂ‌ ಮಾಡಿಕೊಳ್ಳಲು ಆಗುವುದಿಲ್ಲ’ ಎಂದು ದುರಹಂಕಾರ ಮೆರೆದ ಕೆಎಫ್‌ಸಿ; ಆರೋಪ

- Advertisement -
- Advertisement -

ಕೆಎಫ್‌ಸಿ ಸಂಸ್ಥೆ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಕನ್ನಡಿಗರು ನಡೆಸುತ್ತಿರುವ ಅಭಿಯಾನ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಮಂಗಳವಾರ ಹುಬ್ಬಳ್ಳಿಯ ಕೆಎಫ್‌ಸಿ ಮಳಿಗೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದಿಗ್ಬಂಧನ ಹೂಡಿದರು.

ಕರವೇ ರಾಜ್ಯ ಕಾರ್ಯದರ್ಶಿ ಹನುಮಂತ ಅಬ್ಬಿಗೇರಿ, ಧಾರವಾಡ ಜಿಲ್ಲಾಧ್ಯಕ್ಷ ರುದ್ರೇಶ್ ಹಳವದ ಅವರ ನೇತೃತ್ವದಲ್ಲಿ ಕರವೇ ಪದಾಧಿಕಾರಿಗಳು ಕೆಎಫ್‌ಸಿ ಮಳಿಗೆಗೆ ಮುತ್ತಿಗೆ ಹಾಕಿ, ಅಲ್ಲಿನ ಸಿಬ್ಬಂದಿಗೆ ಕನ್ನಡದ ಪಾಠ ಹೇಳಿದರು.

ಕೆಎಫ್‌ಸಿ ಮಳಿಗೆಗಳಲ್ಲಿ ಸಂಪೂರ್ಣ ಕನ್ನಡವನ್ನೇ ಬಳಸಬೇಕು, ಕನ್ನಡದಲ್ಲೇ ವ್ಯವಹರಿಸಬೇಕು, ಎಲ್ಲ ನಾಮಫಲಕಗಳೂ ಕನ್ನಡದಲ್ಲಿ ಇರಬೇಕು, ಕನ್ನಡದ ಹಾಡುಗಳನ್ನು ಹಾಕಬೇಕು. ಇದಕ್ಕಾಗಿ ಒಂದು ವಾರದ ಗಡುವು ನೀಡುತ್ತಿದ್ದೇವೆ ಎಂದು ಕರವೇ ರಾಜ್ಯ ಕಾರ್ಯದರ್ಶಿ ಹನುಮಂತ ಅಬ್ಬಿಗೇರಿ ಎಚ್ಚರಿಕೆ ನೀಡಿದರು.

ರಾಜ್ಯೋತ್ಸವಕ್ಕೆ ಮುನ್ನ ಕೆಎಫ್‌ಸಿ ಕನ್ನಡೀಕರಣವಾಗಬೇಕು. ಬೆಂಗಳೂರಿನ ಇಂದಿರಾನಗರ ಕೆಎಫ್‌ಸಿ ಮಾಲ್‌ನಲ್ಲಿ ಕನ್ನಡಿಗರ ವಿರುದ್ಧ ಮಾತಾಡಿದ್ದಕ್ಕೆ ಸಂಸ್ಥೆ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಕರವೇ ಉಗ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ. ಆಗ ಆಗುವ ಅನಾಹುತಗಳಿಗೆ ಕೆಎಫ್‌ಸಿಯೇ ಹೊಣೆ ಹೊರಬೇಕಾಗುತ್ತದೆ ಎಂದು ಕರವೇ ಧಾರವಾಡ ಜಿಲ್ಲಾಧ್ಯಕ್ಷ ರುದ್ರೇಶ ಹಳವದ ಎಚ್ಚರಿಕೆ ನೀಡಿದರು.

ಕನ್ನಡವನ್ನು ಅಪಮಾನಿಸಿದ ಕೆಎಫ್‌ಸಿ ವಿರುದ್ಧ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು ಭಾನುವಾರ #RejectKFC #KFCಕನ್ನಡಬೇಕು ಎಂಬ ಹ್ಯಾಶ್ ಟ್ಯಾಗ್‌ಗಳು ರಾಷ್ಟ್ರಮಟ್ಟದಲ್ಲಿ ಟ್ರೆಂಡ್ ಆಗಿದ್ದವು. ಸೋಮವಾರ ದಾವಣಗೆರೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಎಂ.ಎಸ್.ರಾಮೇಗೌಡರ ನೇತೃತ್ವದಲ್ಲಿ ಕೆಎಫ್‌ಸಿ ಮುಂಭಾಗ ಪ್ರತಿಭಟನೆ ನಡೆದಿತ್ತು.

ಇದನ್ನೂ ಓದಿರಿ: ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

ಮಂಗಳವಾರ ಕರವೇ ಧಾರವಾಡ ಜಿಲ್ಲಾ ಘಟಕದ ವತಿಯಿಂದ ಹುಬ್ಬಳ್ಳಿ ಗೋಕುಲ ರೋಡ್ ಕೆ.ಎಫ್.ಸಿ ಮಳಿಗೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಕರವೇ ರಾಜ್ಯ ಸಂಚಾಲಕರಾದ ಹನುಮಂತಪ್ಪ ಮೇಟಿ, ಕರವೇ ರಾಜ್ಯ ಪದವೀಧರ ಘಟಕದ ಕಾರ್ಯದರ್ಶಿ ಪ್ರಭುಗೌಡ ಸಖ್ಯಾಗೌಡಶಾನಿ, ಯುವ ಘಟಕ ಜಿಲ್ಲಾ ಧ್ಯಕ್ಷರಾದ ಸಾಗರ್ ಗಾಯಕವಾಡ, ರೈತ ಘಟಕ ಜಿಲ್ಲಾಧ್ಯಕ್ಷರಾದ ಪಾಪು ಧಾರೆ, ಹುಬ್ಬಳ್ಳಿ ತಾಲೂಕು ಅಧ್ಯಕ್ಷರಾದ ಗುರಪ್ಪ ಹಳ್ಯಾಳ, ಹುಬ್ಬಳ್ಳಿ ತಾಲೂಕ ಯುವ ಘಟಕ ಅಧ್ಯಕ್ಷರಾದ ಗಂಗು ಪಾಟೀಲ್, ಧಾರವಾಡ ನಗರ ಘಟಕ ಅಧ್ಯಕ್ಷರಾದ ಮಲಿಕರೀಯಾಜ ಕಂಬಾರಗಣವಿ, ಧಾರವಾಡ ತಾಲ್ಲೂಕ ಉಪಾಧ್ಯಕ್ಷರಾದ ಕಲ್ಮೇಶ ಸಾಲಿ ಇನ್ನಿತರರು ಪಾಲ್ಗೊಂಡರು.

ಕೆಎಫ್‌ಸಿ ತಿರಸ್ಕರಿಸಿ ಅಭಿಯಾನಕ್ಕೆ ತಮಿಳಿಗರ ಬೆಂಬಲ

“ನಮ್ಮ ರಾಷ್ಟ್ರಭಾಷೆ ಹಿಂದಿ, ನಮ್ಮ ಮಳಿಗೆಯಲ್ಲಿ ಕನ್ನಡದ ಹಾಡು ಹಾಕುವುದಿಲ್ಲ, ಹಿಂದಿಯನ್ನೇ ಹಾಕುತ್ತೇವೆ. ನೀವು ಏನೂ‌ ಮಾಡಿಕೊಳ್ಳಲು ಆಗುವುದಿಲ್ಲ” ಎಂದು ದುರಹಂಕಾರ ಮೆರೆದ ಕೆಎಫ್‌ಸಿ ಸಂಸ್ಥೆ ವಿರುದ್ಧ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದು, ಕಳೆದ ಮೂರು ದಿನಗಳಿಂದ ನಡೆಯುತ್ತಿರುವ #RejectKFC ಅಭಿಯಾನಕ್ಕೆ ತಮಿಳುನಾಡಿನ ತಮಿಳು ಭಾಷಿಕರು ಭಾರಿ‌ ಬೆಂಬಲ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ತಮಿಳರು ಭಾನುವಾರದಿಂದ #RejectKFC ಹ್ಯಾಶ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡುತ್ತಿದ್ದು, ಕೆಎಫ್‌‌ಸಿಯಂಥ ಸಂಸ್ಥೆಗಳು ಆಯಾ ರಾಜ್ಯದ ಭಾಷೆ, ಸಂಸ್ಕೃತಿಯನ್ನು ಗೌರವಿಸಬೇಕು, ಇಲ್ಲವಾದಲ್ಲಿ ಅಂಥವುಗಳನ್ನು ನಾವೇ ಧಿಕ್ಕರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಕನ್ನಡಿಗರ ಹೋರಾಟಕ್ಕೆ ಬೆಂಬಲ‌ ನೀಡುತ್ತಿದ್ದಾರೆ.

ಸಣ್ಣಪುಟ್ಟ ವಿಷಯಗಳಿಗೆ ಸ್ಪಂದಿಸಿ ಉತ್ತರ ನೀಡುವ ಕೆಎಫ್‌ಸಿ, ಇದುವರೆಗೆ ಕನ್ನಡಿಗರ ಅಭಿಯಾನದ ಕುರಿತು ಮಾತನಾಡದೇ ಇರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಈಗಾಗಲೇ ಒಂದು‌ವಾರದ ಗಡುವು ನೀಡಿದ್ದು, ಉಗ್ರ ಸ್ವರೂಪದ ಹೋರಾಟದ ಎಚ್ಚರಿಕೆ ನೀಡಿದೆ.

ಮಂಗಳವಾರ ಬೆಂಗಳೂರಿನ ರಾಜಾಜಿನಗರದ ಕೆಎಫ್‌ಸಿ ಮಳಿಗೆಗೆ ಕರವೇ ಬೆಂಗಳೂರು ನಗರ ಉಪಾಧ್ಯಕ್ಷ ಕೆ.ಪಿ.ನರಸಿಂಹ ಅವರ ನೇತೃತ್ವದ ತಂಡ ಭೇಟಿ ನೀಡಿ, ಅಲ್ಲಿನ‌ ಮೇಲ್ವಿಚಾರಕರಿಗೆ ಎಚ್ಚರಿಕೆಯ ಪತ್ರ ನೀಡಿತು.

ವಾರದ ಒಳಗೆ ಕೆಎಫ್‌ಸಿ ನಾಮಫಲಕಗಳು ಕನ್ನಡೀಕರಣಗೊಳ್ಳಬೇಕು, ಕನ್ನಡಿಗರಿಗೆ ಉದ್ಯೋಗ ನೀಡಬೇಕು, ಗ್ರಾಹಕರೊಂದಿಗೆ ಕನ್ನಡದಲ್ಲೇ ವ್ಯವಹರಿಸಬೇಕು, ಇಲ್ಲವಾದಲ್ಲಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗುತ್ತೀರಿ ಎಂದು ಕೆ.ಪಿ.ನರಸಿಂಹ ಎಚ್ಚರಿಸಿದರು.

ಕರವೇ ರಾಜಾಜಿನಗರ ಕ್ಷೇತ್ರ ಅಧ್ಯಕ್ಷರಾದ ಮಂಜುನಾಥ್, ಬಸವೇಶ್ವರನಗರ ಕ್ಷೇತ್ರ ಅಧ್ಯಕ್ಷರಾದ ಸಿದ್ಧರಾಜು, ಪ್ರಕಾಶನಗರ ವಾರ್ಡ್ ಉಪಾಧ್ಯಕ್ಷ ರವಿ, ಮುಖಂಡರಾದ ಗಂಗಣ್ಣ, ನಿರ್ಮೋಹ, ಲಕ್ಷ್ಮಿನಾರಾಯಣಪುರ ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.

ಇದನ್ನೂ ಓದಿರಿ: ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವ: ಅತ್ಯುತ್ತಮ LGBTQI+ ಚಿತ್ರ ಪ್ರಶಸ್ತಿ ಪಡೆದ ಕನ್ನಡದ ‘ನಾನು ಲೇಡಿಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....