Homeಮುಖಪುಟ`ಮಹಾ' ಸರ್ಕಾರ ರಚನೆ ಸರ್ಕಸ್‌: ಸಿಎಂ ಹುದ್ದೆ ಶಿವಸೇನೆಗೆ ಎಂದ ಎನ್‌ಸಿಪಿ..!

`ಮಹಾ’ ಸರ್ಕಾರ ರಚನೆ ಸರ್ಕಸ್‌: ಸಿಎಂ ಹುದ್ದೆ ಶಿವಸೇನೆಗೆ ಎಂದ ಎನ್‌ಸಿಪಿ..!

- Advertisement -
- Advertisement -

ಮಹಾರಾಷ್ಟ್ರದಲ್ಲಿ ಈಗಾಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ. ಈ ಮಧ್ಯೆ ಶಿವಸೇನೆ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದ್ದು, ಶತಪ್ರಯತ್ನ ನಡೆಸುತ್ತಿದೆ. ಈಗ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ಪಕ್ಷಗಳು ಒಂದುಗೂಡಿ ಸರ್ಕಾರ ರಚಿಸುವ ಸಾಧ್ಯತೆ ದಟ್ಟವಾಗಿದೆ.

ಈಗಾಗಲೇ ಮೂರು ಪಕ್ಷಗಳು ಸಾಮಾನ್ಯ ಕನಿಷ್ಠ ನೀತಿ ( common minimum programme- cmp)ಗಳನ್ನು ರೂಪಿಸಿದ್ದು, ಶೀಘ್ರದಲ್ಲೇ ಅಂತಿಮಗೊಳ್ಳಲಿದೆ ಎಂದು ಎನ್‌ಸಿಪಿ ಹೇಳಿದೆ. ಮುಂದಿನ ಸಿಎಂ ಶಿವಸೇನೆ ಪಕ್ಷದಿಂದಲೇ ಆಗಲಿದ್ದಾರೆ. ಹೇಳಿದಂತೆ ನಡೆದುಕೊಳ್ಳುವುದು ಪಕ್ಷದ ಗೌರವ. ಸಿಎಂ ಸ್ಥಾನವನ್ನು ಶಿವಸೇನೆಗೆ ಬಿಟ್ಟು ಕೊಡಲಾಗುವುದು ಎಂದು ಎನ್‌ಸಿಪಿಯ ಮುಂಬೈ ಪ್ರದೇಶ ಅಧ್ಯಕ್ಷ ನವಾಬ್‌ ಮಲಿಕ್‌ ಹೇಳಿದ್ದಾರೆ.

`ಕಾಂಗ್ರೆಸ್‌ ಎರಡೂ ಪಕ್ಷಗಳಜತೆ ಸೇರಿ ಮೈತ್ರಿ ರಚಿಸುತ್ತದೆಯೋ ಅಥವಾ ಹೊರಗಿದ್ದುಕೊಂಡೇ ಬೆಂಬಲ ಸೂಚಿಸುತ್ತದೆಯೋ ಎಂಬುದು ಶೀಘ್ರದಲ್ಲೇ ನಿರ್ಧಾರವಾಗಲಿದೆ. ಇನ್ನೊಮ್ಮೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ದೆಹಲಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ’ ಎಂದವರು ತಿಳಿಸಿದ್ದಾರೆ.

ಮೈತ್ರಿಗೂ ಮೊದಲು ಅಧಿಕಾರ ಹಂಚಿಕೆಯ ಕುರಿತ ಸೂತ್ರ ಮತ್ತು ನಿಯಮಾವಳಿಗಳನ್ನು ಅಂತಿಮಗೊಳಿಸಬೇಕು. ಉದ್ಧವ್‌ ಠಾಕ್ರೆ ಅವರ ಜತೆ ಮಾತುಕತೆಯ ನಂತರ ಸೋನಿಯಾ ಗಾಂಧಿ ಮತ್ತು ಶರದ್‌ ಪವಾರ್‌ ಅವರು ಭೇಟಿಯಾಗಲಿದ್ದಾರೆ.

ಭಾನುವಾರದ ನಂತರ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗೆದರಲಿವೆ. ಯಾಕಂದ್ರೆ ಸೋಮವಾರದೊಳಗೆ ಮೂರು ಪಕ್ಷಗಳು ನಿರ್ಧಾರ ತೆಗೆದುಕೊಳ್ಳಲಿದ್ದು, ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ. ಸಾಮಾನ್ಯ ಕನಿಷ್ಠ ನೀತಿಯ ಫಾರ್ಮೂಲಾವನ್ನು ಮೂರು ಪಕ್ಷಗಳ ನಾಯಕರಿಗೆ ರವಾನಿಸಲಾಗಿದ್ದು, ಮುಂದೆ ಆಗುವ ಸಾಧ್ಯಾಸಾಧ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಲಾಗುವುದು ಎಂದು ಎನ್‌ಸಿಪಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...

ವಿದ್ಯಾರ್ಥಿ ದಂಗೆ ಬಳಿಕ ಬಾಂಗ್ಲಾದಲ್ಲಿ ಇಂದು ಮೊದಲ ಮತದಾನ

ಬಾಂಗ್ಲಾದೇಶದಲ್ಲಿ ಇಂದು (ಫೆ. 12, 2026) ಸಾರ್ವತ್ರಿಕ ಚುನಾವಣೆಯ ಮತದಾನ ನಡೆಯುತ್ತಿದೆ. ಶೇಖ್ ಹಸೀನಾ ಅವರ ಪದಚ್ಯುತಿಯ ನಂತರ ನಡೆಯುತ್ತಿರುವ ಮೊದಲ ಪ್ರಮುಖ ಚುನಾವಣೆ ಇದಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 7:30ಕ್ಕೆ ಆರಂಭವಾದ ಮತದಾನವು...

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...