Homeಮುಖಪುಟಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; 'ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ' ಎಂದ...

ಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; ‘ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ’ ಎಂದ ಯುಪಿ ಸಿಎಂ

- Advertisement -
- Advertisement -

ಸಂಪತ್ತು ಮರು ಹಂಚಿಕೆ ಕುರಿತು ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ‘ಷರಿಯಾ ಕಾನೂನನ್ನು’ ಜಾರಿಗೊಳಿಸುವ ಮತ್ತು ಜನರ ಆಸ್ತಿಯನ್ನು ಮರುಹಂಚಿಕೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದೆ’ ಎಂದು ಹೇಳಿದ್ದಾರೆ.

ಅಮ್ರೋಹಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, “ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ ಮತ್ತು ಮತ್ತೊಮ್ಮೆ ತಮ್ಮ ಸುಳ್ಳು ಪ್ರಣಾಳಿಕೆಯೊಂದಿಗೆ ನಿಮ್ಮ ಬಳಿಗೆ ಬಂದಿವೆ. ನೀವು ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ನೋಡಿದರೆ, ಅವರು ಸರ್ಕಾರ ರಚಿಸಿದರೆ, ನಾವು ಷರಿಯಾ ಕಾನೂನನ್ನು ಜಾರಿಗೆ ತರುತ್ತೇವೆ ಎಂದಿದ್ದಾರೆ. ನೀವು ಹೇಳಿ, ಈ ದೇಶವನ್ನು ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ನಡೆಸುತ್ತದೆಯೇ ಅಥವಾ ಶರಿಯತ್ ಮೂಲಕ ನಡೆಸುತ್ತದೆಯೇ” ಎಂದಿದ್ದಾರೆ.

“ಕಾಂಗ್ರೆಸ್ ಜನರು ತಮ್ಮ ಪ್ರಣಾಳಿಕೆಯಲ್ಲಿ ‘ವ್ಯಕ್ತಿಗಾತ್ ಕಾನೂನ್’ (ವೈಯಕ್ತಿಕ ಕಾನೂನುಗಳನ್ನು ಜಾರಿಗೆ ತರುವುದಾಗಿ ಹೇಳುತ್ತಾರೆ) ಅಂದರೆ, ಮೋದಿಯವರು ತ್ರಿವಳಿ ತಲಾಖ್ ಪದ್ಧತಿಯನ್ನು ನಿಲ್ಲಿಸಿದ ಕಾರಣ ಷರಿಯಾ ಕಾನೂನನ್ನು ಜಾರಿಗೆ ತರಲಾಗುವುದು” ಎಂದು ಆದಿತ್ಯನಾಥ್ ಹೇಳಿದರು.

“ನಾವು ಮತ್ತೆ ವೈಯಕ್ತಿಕ ಕಾನೂನನ್ನು ಮರುಸ್ಥಾಪಿಸುತ್ತೇವೆ ಎಂದು ಅವರು ಹೇಳುತ್ತಾರೆ. ಈ ಜನರು ಷರಿಯಾ ಕಾನೂನನ್ನು ಜಾರಿಗೊಳಿಸುತ್ತಾರೆ” ಎಂದು ಆದಿತ್ಯನಾಥ್ ದಾರಿತಪ್ಪಿಸುವ ಹೇಳಿಕೆ ನೀಡಿದ್ದಾರೆ.

“ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನರ ಆಸ್ತಿಯನ್ನು ತೆಗೆದುಕೊಂಡು ಹಂಚುತ್ತೇವೆ ಎಂದು ಹೇಳಲಾಗಿದೆ. ನಿಮ್ಮ ಆಸ್ತಿಯನ್ನು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಕ್ಕೆ ಲೂಟಿ ಮಾಡಲು ನೀವು ಅನುಮತಿಸುತ್ತೀರಾ? ಈ ನಾಚಿಕೆಯಿಲ್ಲದವರ ಸ್ಥಿತಿ ನೋಡಿ, ಒಂದು ಕಡೆ ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟು, ಮತ್ತೊಂದೆಡೆ ಮಾಫಿಯಾ ಮತ್ತು ಕ್ರಿಮಿನಲ್‌ಗಳನ್ನು ತಮ್ಮ ಹಾರವನ್ನಾಗಿ ಮಾಡಿಕೊಂಡು, ಅವರ ಹೆಸರಿನಲ್ಲಿ ಫಾತಿಹಾ ಓದುತ್ತಿದ್ದಾರೆ” ಎಂದು ಅವರು ಹೇಳಿದರು.

2006ರಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೇಳಿದ್ದಾರೆ ಎನ್ನಲಾದ ಮಾತುಗಳನ್ನು ಉಲ್ಲೇಖಿಸಿದ ಯೋಗಿ ಆದಿತ್ಯನಾಥ್, “ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಹೇಳಿದ್ದರು… ಹಾಗಾದರೆ, ಎಲ್ಲಿ ನಮ್ಮ ದಲಿತರು, ಹಿಂದುಳಿದವರು, ಖರಗವಂಶಿಗಳು, ಬಡವರು ಮತ್ತು ರೈತರು ಎಲ್ಲಿಗೆ ಹೋಗುತ್ತಾರೆ, ತಾಯಂದಿರು ಮತ್ತು ಸಹೋದರಿಯರು ಎಲ್ಲಿಗೆ ಹೋಗುತ್ತಾರೆ” ಎಂದು ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಭಯೋತ್ಪಾದನೆ ಅಂತ್ಯಗೊಂಡಿದೆ ಎಂದು ಹೇಳಿದ ಅವರು, “10 ವರ್ಷಗಳ ಹಿಂದೆ ದೇಶದಲ್ಲಿ ಭಯ ಮತ್ತು ಭಯೋತ್ಪಾದನೆಯ ವಾತಾವರಣವಿತ್ತು, ಜನರು ಭಯಭೀತರಾಗಿದ್ದರು, 2014 ರ ನಂತರ ಭಯೋತ್ಪಾದನೆಯನ್ನು ನಿಯಂತ್ರಿಸಲಾಯಿತು. 2019 ರ ಹೊತ್ತಿಗೆ ಭಯೋತ್ಪಾದನೆಯ ಮೂಲ ಜಮ್ಮು ಕಾಶ್ಮೀರದ 370 ನೇ ವಿಧಿಯನ್ನು ರದ್ದುಪಡಿಸುವಂಥ ಕೆಲಸವನ್ನು ಮೋದಿಜಿ ಮಾಡಿದರು. ಇಂದು ಭಾರತದಲ್ಲಿ ಭಯೋತ್ಪಾದನೆ ನಾಶವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...