Homeಮುಖಪುಟಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; 'ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ' ಎಂದ...

ಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; ‘ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ’ ಎಂದ ಯುಪಿ ಸಿಎಂ

- Advertisement -
- Advertisement -

ಸಂಪತ್ತು ಮರು ಹಂಚಿಕೆ ಕುರಿತು ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ‘ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ‘ಷರಿಯಾ ಕಾನೂನನ್ನು’ ಜಾರಿಗೊಳಿಸುವ ಮತ್ತು ಜನರ ಆಸ್ತಿಯನ್ನು ಮರುಹಂಚಿಕೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದೆ’ ಎಂದು ಹೇಳಿದ್ದಾರೆ.

ಅಮ್ರೋಹಾದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, “ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ ಮತ್ತು ಮತ್ತೊಮ್ಮೆ ತಮ್ಮ ಸುಳ್ಳು ಪ್ರಣಾಳಿಕೆಯೊಂದಿಗೆ ನಿಮ್ಮ ಬಳಿಗೆ ಬಂದಿವೆ. ನೀವು ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ನೋಡಿದರೆ, ಅವರು ಸರ್ಕಾರ ರಚಿಸಿದರೆ, ನಾವು ಷರಿಯಾ ಕಾನೂನನ್ನು ಜಾರಿಗೆ ತರುತ್ತೇವೆ ಎಂದಿದ್ದಾರೆ. ನೀವು ಹೇಳಿ, ಈ ದೇಶವನ್ನು ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ನಡೆಸುತ್ತದೆಯೇ ಅಥವಾ ಶರಿಯತ್ ಮೂಲಕ ನಡೆಸುತ್ತದೆಯೇ” ಎಂದಿದ್ದಾರೆ.

“ಕಾಂಗ್ರೆಸ್ ಜನರು ತಮ್ಮ ಪ್ರಣಾಳಿಕೆಯಲ್ಲಿ ‘ವ್ಯಕ್ತಿಗಾತ್ ಕಾನೂನ್’ (ವೈಯಕ್ತಿಕ ಕಾನೂನುಗಳನ್ನು ಜಾರಿಗೆ ತರುವುದಾಗಿ ಹೇಳುತ್ತಾರೆ) ಅಂದರೆ, ಮೋದಿಯವರು ತ್ರಿವಳಿ ತಲಾಖ್ ಪದ್ಧತಿಯನ್ನು ನಿಲ್ಲಿಸಿದ ಕಾರಣ ಷರಿಯಾ ಕಾನೂನನ್ನು ಜಾರಿಗೆ ತರಲಾಗುವುದು” ಎಂದು ಆದಿತ್ಯನಾಥ್ ಹೇಳಿದರು.

“ನಾವು ಮತ್ತೆ ವೈಯಕ್ತಿಕ ಕಾನೂನನ್ನು ಮರುಸ್ಥಾಪಿಸುತ್ತೇವೆ ಎಂದು ಅವರು ಹೇಳುತ್ತಾರೆ. ಈ ಜನರು ಷರಿಯಾ ಕಾನೂನನ್ನು ಜಾರಿಗೊಳಿಸುತ್ತಾರೆ” ಎಂದು ಆದಿತ್ಯನಾಥ್ ದಾರಿತಪ್ಪಿಸುವ ಹೇಳಿಕೆ ನೀಡಿದ್ದಾರೆ.

“ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನರ ಆಸ್ತಿಯನ್ನು ತೆಗೆದುಕೊಂಡು ಹಂಚುತ್ತೇವೆ ಎಂದು ಹೇಳಲಾಗಿದೆ. ನಿಮ್ಮ ಆಸ್ತಿಯನ್ನು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಕ್ಕೆ ಲೂಟಿ ಮಾಡಲು ನೀವು ಅನುಮತಿಸುತ್ತೀರಾ? ಈ ನಾಚಿಕೆಯಿಲ್ಲದವರ ಸ್ಥಿತಿ ನೋಡಿ, ಒಂದು ಕಡೆ ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟು, ಮತ್ತೊಂದೆಡೆ ಮಾಫಿಯಾ ಮತ್ತು ಕ್ರಿಮಿನಲ್‌ಗಳನ್ನು ತಮ್ಮ ಹಾರವನ್ನಾಗಿ ಮಾಡಿಕೊಂಡು, ಅವರ ಹೆಸರಿನಲ್ಲಿ ಫಾತಿಹಾ ಓದುತ್ತಿದ್ದಾರೆ” ಎಂದು ಅವರು ಹೇಳಿದರು.

2006ರಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೇಳಿದ್ದಾರೆ ಎನ್ನಲಾದ ಮಾತುಗಳನ್ನು ಉಲ್ಲೇಖಿಸಿದ ಯೋಗಿ ಆದಿತ್ಯನಾಥ್, “ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಹೇಳಿದ್ದರು… ಹಾಗಾದರೆ, ಎಲ್ಲಿ ನಮ್ಮ ದಲಿತರು, ಹಿಂದುಳಿದವರು, ಖರಗವಂಶಿಗಳು, ಬಡವರು ಮತ್ತು ರೈತರು ಎಲ್ಲಿಗೆ ಹೋಗುತ್ತಾರೆ, ತಾಯಂದಿರು ಮತ್ತು ಸಹೋದರಿಯರು ಎಲ್ಲಿಗೆ ಹೋಗುತ್ತಾರೆ” ಎಂದು ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಭಯೋತ್ಪಾದನೆ ಅಂತ್ಯಗೊಂಡಿದೆ ಎಂದು ಹೇಳಿದ ಅವರು, “10 ವರ್ಷಗಳ ಹಿಂದೆ ದೇಶದಲ್ಲಿ ಭಯ ಮತ್ತು ಭಯೋತ್ಪಾದನೆಯ ವಾತಾವರಣವಿತ್ತು, ಜನರು ಭಯಭೀತರಾಗಿದ್ದರು, 2014 ರ ನಂತರ ಭಯೋತ್ಪಾದನೆಯನ್ನು ನಿಯಂತ್ರಿಸಲಾಯಿತು. 2019 ರ ಹೊತ್ತಿಗೆ ಭಯೋತ್ಪಾದನೆಯ ಮೂಲ ಜಮ್ಮು ಕಾಶ್ಮೀರದ 370 ನೇ ವಿಧಿಯನ್ನು ರದ್ದುಪಡಿಸುವಂಥ ಕೆಲಸವನ್ನು ಮೋದಿಜಿ ಮಾಡಿದರು. ಇಂದು ಭಾರತದಲ್ಲಿ ಭಯೋತ್ಪಾದನೆ ನಾಶವಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; FACT CHECK: ‘ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸ್ಲಿಮರಿಗೆ’ ಎಂದು ಮನಮೋಹನ್ ಸಿಂಗ್ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...