Homeಮುಖಪುಟಬಿಜೆಪಿ ಸರ್ಕಾರ ಅಭಿವೃದ್ದಿ ಕಾರ್ಯ ಮಾಡುತ್ತಿಲ್ಲ: ಜೆ.ಪಿ.ನಡ್ಡಾಗೆ BJP ಶಾಸಕನ ಪತ್ರ

ಬಿಜೆಪಿ ಸರ್ಕಾರ ಅಭಿವೃದ್ದಿ ಕಾರ್ಯ ಮಾಡುತ್ತಿಲ್ಲ: ಜೆ.ಪಿ.ನಡ್ಡಾಗೆ BJP ಶಾಸಕನ ಪತ್ರ

ಸಿಎಂ ರಾವತ್ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಅಸ್ಪಷ್ಟವಾಗಿದೆ ಎಂಬುದು ಈಗ ಬಿಜೆಪಿ ಶಾಸಕರಿಗೂ ಸ್ಪಷ್ಟವಾಗಿದೆ ಎಂದು ವಿಪಕ್ಷ ನಾಯಕಿ ಇಂದಿರಾ ಹೃದಯೇಶ್ ಹೇಳಿದ್ದಾರೆ.

- Advertisement -
- Advertisement -

ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಮ್ಮ ಕ್ಷೇತ್ರವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆಡಳಿತ ಪಕ್ಷ ಭಾರತೀಯ ಜನತಾ ಪಕ್ಷದ (ಬಿಜೆಪಿ) ಉತ್ತರಾಖಂಡದ ಶಾಸಕರಾದ ಉಮೇಶ್ ಶರ್ಮಾ ಕೌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಉತ್ತರಾಖಂಡ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಬಯಲಾಗಿದೆ. ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ವಿರುದ್ಧ ಹಲವರು ಪತ್ರ ಸಮರ ನಡೆಸುತ್ತಿದ್ದಾರೆ. ಈ ಸಾಲಿಗೆ ಈಗ ಮತ್ತೊಬ್ಬ ಶಾಸಕ ಸೇರಿದ್ದಾರೆ.

ಉತ್ತರಾಖಂಡದ ವಿಧಾನಸಭೆಯಲ್ಲಿ ಡೆಹ್ರಾಡೂನ್ ಜಿಲ್ಲೆಯ ರಾಯಪುರ ಕ್ಷೇತ್ರವನ್ನು ಪ್ರತಿನಿಧಿಸುವ ಉಮೇಶ್ ಶರ್ಮಾ ಕೌ, ಕಳೆದ ಕೆಲವು ವರ್ಷಗಳಿಂದ ತಮ್ಮ ವಿಧಾನಸಭಾ ವಿಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆರೋಪಿಸಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಇದೇ ರೀತಿ ಚುನಾಯಿತ ಶಾಸಕರನ್ನು ಅಧಿಕಾರಶಾಹಿಗಳು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಪಕ್ಷದ ಮತ್ತೊಬ್ಬ ಶಾಸಕ ಮತ್ತು ಉತ್ತರಾಖಂಡದ ಮಾಜಿ ಬಿಜೆಪಿ ಮುಖ್ಯಸ್ಥ ಬಿಶನ್ ಸಿಂಗ್ ಚುಫಾಲ್ ಕೂಡ  ಅವರ ಕುಂದುಕೊರತೆಗಳಿಗೆ ಪರಿಹಾರ ಕೋರಿ ನಡ್ಡಾ ಅವರನ್ನು ಭೇಟಿಯಾಗಿದ್ದರು.

ಇನ್ನು ತಮ್ಮ ಕ್ಷೇತ್ರದ ತೊಂದರೆಗಳ ಬಗ್ಗೆ ವಿವರವಾಗಿ ತಿಳಿಸುವ ಉದ್ದೇಶದಿಂದ ನಡ್ಡಾ ಅವರೊಂದಿಗೆ ಸಮಯ ಕೋರಿದ್ದು, ರಾಯ್‌ಪುರದ ನಿರ್ಲಕ್ಷ್ಯದ ಬಗ್ಗೆ ಅವರ ಪಕ್ಷದ ಕಾರ್ಯಕರ್ತರು ತೀವ್ರವಾಗಿ ದುಖಿಃತರಾಗಿದ್ದಾರೆ ಎಂದು ಒತ್ತಿಹೇಳಿದ್ದಾರೆ. ಜೊತೆಗೆ ಸಾರ್ವಜನಿಕರಿಗೆ ಅಭಿವೃದ್ಧಿ ಕೆಲಸ ಮಾಡದ ರಾಜ್ಯ ಸರ್ಕಾರದ ಬಗ್ಗೆ ಬೇಸರವಿದೆ ಎಂದು ತಮ್ಮ ಪತ್ರದಲ್ಲಿ ಉಮೇಶ್ ಶರ್ಮಾ ಕೌ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಪತ್ರದ ಸಾರಾಂಶ ಹಂಚಿಕೊಂಡ ಶಾಸಕ ನಾನು ನನ್ನ ಪತ್ರವನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ಇಮೇಲ್ ಮೂಲಕ ಕಳುಹಿಸಿದ್ದೇನೆ. ಇದು ನಮ್ಮ ಕುಟುಂಬದ ವಿಷಯ. ನಾನು ಮಾಧ್ಯಮದಲ್ಲಿ ಇದರ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ ಮಾತಾಡಿದ್ದಾರೆ.

ವಿಶೇಷವಾಗಿ ರಸ್ತೆಗಳು ಮತ್ತು ಮೊಬೈಲ್ ಫೋನ್ ಸಂಪರ್ಕದ ಬಗ್ಗೆ ನಡ್ಡಾ ಅವರೊಂದಿಗೆ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ಚುಫಲ್ ಹೇಳಿದರು. ನಡ್ಡಾ ಅವರು ನನ್ನ ಮಾತುಗಳನ್ನು ಕೇಳಿಸಿಕೊಂಡಿದ್ದಾರೆ. 2022 ರ ಉತ್ತರಾಖಂಡ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಎಲ್ಲಾ ಸದಸ್ಯರು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜ್ಯ ಸರ್ಕಾರದಲ್ಲಿ ಸದ್ಯ ಮೂರು ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಬಗ್ಗೆ ಸಿಎಂ ತಿಳಿಸಿದ್ದರು. ಕೌ ಕೂಡ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಆರೋಪವಿದೆ.

ಇದನ್ನೂ ಓದಿ: ಪ್ರಜಾತಂತ್ರದ ವಿಸ್ತರಣೆ ಮತ್ತು ಧ್ರುವೀಕರಣ: ಚಳವಳಿಗಳ ಗೆಲುವು ಮತ್ತು ಸೋಲು

“ನಾನು ಕ್ಯಾಬಿನೆಟ್‌ನಲ್ಲಿ ಸೇರ್ಪಡೆಗೊಳ್ಳಲು ಬಯಸಿದರೆ, 2017 ರಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾನು ಧ್ವನಿ ಎತ್ತುತ್ತಿದ್ದೆ. ನಾನು ಈಗ ಅದನ್ನು ಏಕೆ ಬಯಸಬೇಕು? ನಾನು ರಾಜ್ಯ ಅಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಬಗೆಗಳಲ್ಲಿ ಪಕ್ಷಕ್ಕೆ ಕೊಡುಗೆ ನೀಡಿದ್ದೇನೆ” ಎಂದು ಹೇಳಿದರು.

ನಾನು ನನ್ನ ಕ್ಷೇತ್ರದ ಸಮಸ್ಯೆಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ತಿಳಿಸಿದ್ದೇನೆ. ಇದನ್ನು ನಾನು ಮುಖ್ಯಮಂತ್ರಿಯ ವಿರುದ್ಧದ ಷಡ್ಯಂತ್ರ ಅಥವಾ ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಲು ನಾನು ಒತ್ತಡ ಹೇರುತ್ತಿದ್ದೇನೆ ಎಂದು ನೋಡಬಾರದು ಎಂದಿದ್ದಾರೆ.

ಇತ್ತ ಚಂಪಾವತ್ ಜಿಲ್ಲೆಯ ಲೋಹಘಾಟ್‌ನ ಮತ್ತೊಬ್ಬ ಬಿಜೆಪಿ ಶಾಸಕ ಪುರಾನ್ ಸಿಂಗ್ ಫರ್ತ್ಯಾಲ್ ಕೂಡ ರಾಜ್ಯ ಸರ್ಕಾರದ ವಿರುದ್ಧ ಕೆಲವು ವಾರಗಳ ಹಿಂದೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ಪತ್ರ ಬರೆದಿದ್ದರು.

ಆದರೆ ಉತ್ತರಾಖಂಡ ರಾಜ್ಯ ಸರ್ಕಾರ ಮಾತ್ರ ಪತ್ರ ವ್ಯವಹಾರವನ್ನು ಕಡೆಗಣಿಸಿದಂತೆ ನಾಟಕವಾಡುತ್ತಾ, ಪಕ್ಷದಲ್ಲಿ ಎಲ್ಲವೂ ಚೆನ್ನಾಗಿದೆ. ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಮತ್ತು ರಾವತ್ ನಾಯಕತ್ವವನ್ನು ಯಾರು ಪ್ರಶ್ನಿಸಿಲ್ಲ ಎಂದು ರಾಜ್ಯ ಉಪಾಧ್ಯಕ್ಷ  ದೇವೇಂದ್ರ ಭಾಸಿನ್ ಹೇಳಿದ್ದಾರೆ.

ಕೆಲ ಕೆಲವು ಶಾಸಕರು ನಡ್ಡಾ ಅವರನ್ನು ಭೇಟಿ ಮಾಡಿದರೆ ಅಥವಾ ತಮ್ಮ ಕ್ಷೇತ್ರಗಳಲ್ಲಿನ ಕೆಲವು ಸಮಸ್ಯೆಗಳ ಬಗ್ಗೆ ಅವರಿಗೆ ಪತ್ರ ಬರೆದಿದ್ದರೆ ಅದನ್ನು ಬೇರೆ ರೀತಿಯಲ್ಲಿ ವ್ಯಾಖ್ಯಾನಿಸಬಾರದು. ಶಾಸಕರು ರಾಷ್ಟ್ರೀಯ ಪಕ್ಷದ ಅಧ್ಯಕ್ಷರೊಂದಿಗೆ ಸಂವಹನ ನಡೆಸಲು ಸ್ವಾತಂತ್ರ್ಯ ಹೊಂದಿದ್ದಾರೆ. ಅದರಲ್ಲಿ ಏನು ತಪ್ಪಾಗಿದೆ?  ಎಂದು ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು,  ಸಾರ್ವಜನಿಕರ ಆಕಾಂಕ್ಷೆಗಳನ್ನು ಈಡೇರಿಸುವಲ್ಲಿ ಮತ್ತು ತನ್ನದೇ ಪಕ್ಷದ ಶಾಸಕರನ್ನು ಸಮಾಧಾನಪಡಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದೆ.

ವಿಪಕ್ಷ ನಾಯಕಿ ಇಂದಿರಾ ಹೃದಯೇಶ್,  ಸಿಎಂ ರಾವತ್ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಅಸ್ಪಷ್ಟವಾಗಿದೆ ಎಂಬುದು ಈಗ ಬಿಜೆಪಿ ಶಾಸಕರಿಗೂ ಸ್ಪಷ್ಟವಾಗಿದೆ  ಎಂದಿದ್ದಾರೆ. ವಿಧಾನಸಭಾ ಚುನಾವಣೆಗೆ ಕೇವಲ ಎರಡು ವರ್ಷಗಳು ಮಾತ್ರ ಇರುವುದರಿಂದ ಅವರು ಚುನಾವಣೆಯಲ್ಲಿ ಸೋಲುವ ಸಾಧ್ಯತೆ ಇದೆ ಎಂದು ಹಲವಾರು ಶಾಸಕರು ಆತಂಕಗೊಳಗಾಗಿದ್ದಾರೆ. ಹಾಗಾಗಿ ಶಾಸಕರು ನಿದ್ರೆಯಿಂದ ಎಚ್ಚರಗೊಂಡಿದ್ದಾರೆ ಮತ್ತು ರಾಜ್ಯ ಸರ್ಕಾರದ ನಿರಾಸಕ್ತಿ ಮತ್ತು ನಿರ್ದಯತೆಗೆ ವಿರುದ್ಧ ಧ್ವನಿ ಎತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ:ABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...