Homeಮುಖಪುಟಬಿಜೆಪಿ ಸರ್ಕಾರ ಅಭಿವೃದ್ದಿ ಕಾರ್ಯ ಮಾಡುತ್ತಿಲ್ಲ: ಜೆ.ಪಿ.ನಡ್ಡಾಗೆ BJP ಶಾಸಕನ ಪತ್ರ

ಬಿಜೆಪಿ ಸರ್ಕಾರ ಅಭಿವೃದ್ದಿ ಕಾರ್ಯ ಮಾಡುತ್ತಿಲ್ಲ: ಜೆ.ಪಿ.ನಡ್ಡಾಗೆ BJP ಶಾಸಕನ ಪತ್ರ

ಸಿಎಂ ರಾವತ್ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಅಸ್ಪಷ್ಟವಾಗಿದೆ ಎಂಬುದು ಈಗ ಬಿಜೆಪಿ ಶಾಸಕರಿಗೂ ಸ್ಪಷ್ಟವಾಗಿದೆ ಎಂದು ವಿಪಕ್ಷ ನಾಯಕಿ ಇಂದಿರಾ ಹೃದಯೇಶ್ ಹೇಳಿದ್ದಾರೆ.

- Advertisement -
- Advertisement -

ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಮ್ಮ ಕ್ಷೇತ್ರವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆಡಳಿತ ಪಕ್ಷ ಭಾರತೀಯ ಜನತಾ ಪಕ್ಷದ (ಬಿಜೆಪಿ) ಉತ್ತರಾಖಂಡದ ಶಾಸಕರಾದ ಉಮೇಶ್ ಶರ್ಮಾ ಕೌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಉತ್ತರಾಖಂಡ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಬಯಲಾಗಿದೆ. ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ವಿರುದ್ಧ ಹಲವರು ಪತ್ರ ಸಮರ ನಡೆಸುತ್ತಿದ್ದಾರೆ. ಈ ಸಾಲಿಗೆ ಈಗ ಮತ್ತೊಬ್ಬ ಶಾಸಕ ಸೇರಿದ್ದಾರೆ.

ಉತ್ತರಾಖಂಡದ ವಿಧಾನಸಭೆಯಲ್ಲಿ ಡೆಹ್ರಾಡೂನ್ ಜಿಲ್ಲೆಯ ರಾಯಪುರ ಕ್ಷೇತ್ರವನ್ನು ಪ್ರತಿನಿಧಿಸುವ ಉಮೇಶ್ ಶರ್ಮಾ ಕೌ, ಕಳೆದ ಕೆಲವು ವರ್ಷಗಳಿಂದ ತಮ್ಮ ವಿಧಾನಸಭಾ ವಿಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆರೋಪಿಸಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಇದೇ ರೀತಿ ಚುನಾಯಿತ ಶಾಸಕರನ್ನು ಅಧಿಕಾರಶಾಹಿಗಳು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಪಕ್ಷದ ಮತ್ತೊಬ್ಬ ಶಾಸಕ ಮತ್ತು ಉತ್ತರಾಖಂಡದ ಮಾಜಿ ಬಿಜೆಪಿ ಮುಖ್ಯಸ್ಥ ಬಿಶನ್ ಸಿಂಗ್ ಚುಫಾಲ್ ಕೂಡ  ಅವರ ಕುಂದುಕೊರತೆಗಳಿಗೆ ಪರಿಹಾರ ಕೋರಿ ನಡ್ಡಾ ಅವರನ್ನು ಭೇಟಿಯಾಗಿದ್ದರು.

ಇನ್ನು ತಮ್ಮ ಕ್ಷೇತ್ರದ ತೊಂದರೆಗಳ ಬಗ್ಗೆ ವಿವರವಾಗಿ ತಿಳಿಸುವ ಉದ್ದೇಶದಿಂದ ನಡ್ಡಾ ಅವರೊಂದಿಗೆ ಸಮಯ ಕೋರಿದ್ದು, ರಾಯ್‌ಪುರದ ನಿರ್ಲಕ್ಷ್ಯದ ಬಗ್ಗೆ ಅವರ ಪಕ್ಷದ ಕಾರ್ಯಕರ್ತರು ತೀವ್ರವಾಗಿ ದುಖಿಃತರಾಗಿದ್ದಾರೆ ಎಂದು ಒತ್ತಿಹೇಳಿದ್ದಾರೆ. ಜೊತೆಗೆ ಸಾರ್ವಜನಿಕರಿಗೆ ಅಭಿವೃದ್ಧಿ ಕೆಲಸ ಮಾಡದ ರಾಜ್ಯ ಸರ್ಕಾರದ ಬಗ್ಗೆ ಬೇಸರವಿದೆ ಎಂದು ತಮ್ಮ ಪತ್ರದಲ್ಲಿ ಉಮೇಶ್ ಶರ್ಮಾ ಕೌ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಪತ್ರದ ಸಾರಾಂಶ ಹಂಚಿಕೊಂಡ ಶಾಸಕ ನಾನು ನನ್ನ ಪತ್ರವನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ಇಮೇಲ್ ಮೂಲಕ ಕಳುಹಿಸಿದ್ದೇನೆ. ಇದು ನಮ್ಮ ಕುಟುಂಬದ ವಿಷಯ. ನಾನು ಮಾಧ್ಯಮದಲ್ಲಿ ಇದರ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ ಮಾತಾಡಿದ್ದಾರೆ.

ವಿಶೇಷವಾಗಿ ರಸ್ತೆಗಳು ಮತ್ತು ಮೊಬೈಲ್ ಫೋನ್ ಸಂಪರ್ಕದ ಬಗ್ಗೆ ನಡ್ಡಾ ಅವರೊಂದಿಗೆ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ಚುಫಲ್ ಹೇಳಿದರು. ನಡ್ಡಾ ಅವರು ನನ್ನ ಮಾತುಗಳನ್ನು ಕೇಳಿಸಿಕೊಂಡಿದ್ದಾರೆ. 2022 ರ ಉತ್ತರಾಖಂಡ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಎಲ್ಲಾ ಸದಸ್ಯರು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜ್ಯ ಸರ್ಕಾರದಲ್ಲಿ ಸದ್ಯ ಮೂರು ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಬಗ್ಗೆ ಸಿಎಂ ತಿಳಿಸಿದ್ದರು. ಕೌ ಕೂಡ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಆರೋಪವಿದೆ.

ಇದನ್ನೂ ಓದಿ: ಪ್ರಜಾತಂತ್ರದ ವಿಸ್ತರಣೆ ಮತ್ತು ಧ್ರುವೀಕರಣ: ಚಳವಳಿಗಳ ಗೆಲುವು ಮತ್ತು ಸೋಲು

“ನಾನು ಕ್ಯಾಬಿನೆಟ್‌ನಲ್ಲಿ ಸೇರ್ಪಡೆಗೊಳ್ಳಲು ಬಯಸಿದರೆ, 2017 ರಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾನು ಧ್ವನಿ ಎತ್ತುತ್ತಿದ್ದೆ. ನಾನು ಈಗ ಅದನ್ನು ಏಕೆ ಬಯಸಬೇಕು? ನಾನು ರಾಜ್ಯ ಅಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಬಗೆಗಳಲ್ಲಿ ಪಕ್ಷಕ್ಕೆ ಕೊಡುಗೆ ನೀಡಿದ್ದೇನೆ” ಎಂದು ಹೇಳಿದರು.

ನಾನು ನನ್ನ ಕ್ಷೇತ್ರದ ಸಮಸ್ಯೆಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ತಿಳಿಸಿದ್ದೇನೆ. ಇದನ್ನು ನಾನು ಮುಖ್ಯಮಂತ್ರಿಯ ವಿರುದ್ಧದ ಷಡ್ಯಂತ್ರ ಅಥವಾ ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಲು ನಾನು ಒತ್ತಡ ಹೇರುತ್ತಿದ್ದೇನೆ ಎಂದು ನೋಡಬಾರದು ಎಂದಿದ್ದಾರೆ.

ಇತ್ತ ಚಂಪಾವತ್ ಜಿಲ್ಲೆಯ ಲೋಹಘಾಟ್‌ನ ಮತ್ತೊಬ್ಬ ಬಿಜೆಪಿ ಶಾಸಕ ಪುರಾನ್ ಸಿಂಗ್ ಫರ್ತ್ಯಾಲ್ ಕೂಡ ರಾಜ್ಯ ಸರ್ಕಾರದ ವಿರುದ್ಧ ಕೆಲವು ವಾರಗಳ ಹಿಂದೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ಪತ್ರ ಬರೆದಿದ್ದರು.

ಆದರೆ ಉತ್ತರಾಖಂಡ ರಾಜ್ಯ ಸರ್ಕಾರ ಮಾತ್ರ ಪತ್ರ ವ್ಯವಹಾರವನ್ನು ಕಡೆಗಣಿಸಿದಂತೆ ನಾಟಕವಾಡುತ್ತಾ, ಪಕ್ಷದಲ್ಲಿ ಎಲ್ಲವೂ ಚೆನ್ನಾಗಿದೆ. ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಮತ್ತು ರಾವತ್ ನಾಯಕತ್ವವನ್ನು ಯಾರು ಪ್ರಶ್ನಿಸಿಲ್ಲ ಎಂದು ರಾಜ್ಯ ಉಪಾಧ್ಯಕ್ಷ  ದೇವೇಂದ್ರ ಭಾಸಿನ್ ಹೇಳಿದ್ದಾರೆ.

ಕೆಲ ಕೆಲವು ಶಾಸಕರು ನಡ್ಡಾ ಅವರನ್ನು ಭೇಟಿ ಮಾಡಿದರೆ ಅಥವಾ ತಮ್ಮ ಕ್ಷೇತ್ರಗಳಲ್ಲಿನ ಕೆಲವು ಸಮಸ್ಯೆಗಳ ಬಗ್ಗೆ ಅವರಿಗೆ ಪತ್ರ ಬರೆದಿದ್ದರೆ ಅದನ್ನು ಬೇರೆ ರೀತಿಯಲ್ಲಿ ವ್ಯಾಖ್ಯಾನಿಸಬಾರದು. ಶಾಸಕರು ರಾಷ್ಟ್ರೀಯ ಪಕ್ಷದ ಅಧ್ಯಕ್ಷರೊಂದಿಗೆ ಸಂವಹನ ನಡೆಸಲು ಸ್ವಾತಂತ್ರ್ಯ ಹೊಂದಿದ್ದಾರೆ. ಅದರಲ್ಲಿ ಏನು ತಪ್ಪಾಗಿದೆ?  ಎಂದು ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು,  ಸಾರ್ವಜನಿಕರ ಆಕಾಂಕ್ಷೆಗಳನ್ನು ಈಡೇರಿಸುವಲ್ಲಿ ಮತ್ತು ತನ್ನದೇ ಪಕ್ಷದ ಶಾಸಕರನ್ನು ಸಮಾಧಾನಪಡಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದೆ.

ವಿಪಕ್ಷ ನಾಯಕಿ ಇಂದಿರಾ ಹೃದಯೇಶ್,  ಸಿಎಂ ರಾವತ್ ಆಳ್ವಿಕೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಅಸ್ಪಷ್ಟವಾಗಿದೆ ಎಂಬುದು ಈಗ ಬಿಜೆಪಿ ಶಾಸಕರಿಗೂ ಸ್ಪಷ್ಟವಾಗಿದೆ  ಎಂದಿದ್ದಾರೆ. ವಿಧಾನಸಭಾ ಚುನಾವಣೆಗೆ ಕೇವಲ ಎರಡು ವರ್ಷಗಳು ಮಾತ್ರ ಇರುವುದರಿಂದ ಅವರು ಚುನಾವಣೆಯಲ್ಲಿ ಸೋಲುವ ಸಾಧ್ಯತೆ ಇದೆ ಎಂದು ಹಲವಾರು ಶಾಸಕರು ಆತಂಕಗೊಳಗಾಗಿದ್ದಾರೆ. ಹಾಗಾಗಿ ಶಾಸಕರು ನಿದ್ರೆಯಿಂದ ಎಚ್ಚರಗೊಂಡಿದ್ದಾರೆ ಮತ್ತು ರಾಜ್ಯ ಸರ್ಕಾರದ ನಿರಾಸಕ್ತಿ ಮತ್ತು ನಿರ್ದಯತೆಗೆ ವಿರುದ್ಧ ಧ್ವನಿ ಎತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ:ABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...