Homeಮುಖಪುಟಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ; ಒಂದೇ ರಾತ್ರಿ 9 ಜನರ ಕಗ್ಗೊಲೆ

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ; ಒಂದೇ ರಾತ್ರಿ 9 ಜನರ ಕಗ್ಗೊಲೆ

- Advertisement -
- Advertisement -

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಮುಂದುವರಿದಿದ್ದು, ಮಂಗಳವಾರ ರಾತ್ರಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಐಗಿಜಾಂಗ್ ಗ್ರಾಮದಲ್ಲಿ ಗುಂಡಿನ ದಾಳಿ ಮತ್ತು ಬೆಂಕಿ ಹಚ್ಚಿದ ಘಟನೆಯ ಕಾರಣ ಈ ಸಾವುಗಳು ಸಂಭವಿಸಿದೆ.

‘ದಿ ಹಿಂದೂ’ ಪತ್ರಿಕೆಯ ವರದಿ ಪ್ರಕಾರ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

“ಮಂಗಳವಾರ ರಾತ್ರಿ 10:30ರ ಸುಮಾರಿಗೆ ಈ ಘಟನೆ ನಡೆದಿದೆ” ಎಂದು ಇಂಫಾಲ್ ಪೂರ್ವದ ಪೊಲೀಸ್ ಅಧೀಕ್ಷಕರು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಐಗಿಜಾಂಗ್ ಗ್ರಾಮವು ಕುಕಿ ಸಮುದಾಯದ ಬಾಹುಳ್ಯವನ್ನು ಹೊಂದಿದೆ. ಆದರೆ ವಶಪಡಿಸಿಕೊಂಡ ಒಂಬತ್ತು ಮೃತದೇಹಗಳು ಮೈತೇಯಿ ಸಮುದಾಯದ ಪುರುಷದ್ದಾಗಿವೆ ಎಂದು ವರದಿಯಾಗಿದೆ.

ಸಾವಿಗೀಡಾದವರು ‘ಸ್ಥಳೀಯ ಸ್ವಯಂಸೇವಕರು’ ಎಂದು ಪೊಲೀಸರು ಹೇಳಿದ್ದಾರೆ. ಐಗ್ಜಾಂಗ್ ಪ್ರದೇಶವು ಕಾಂಗ್ಕೋಪಿ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳ ಗಡಿಯಲ್ಲಿದೆ. ಕಳೆದ ಹಲವು ದಿನಗಳಿಂದ ಹಿಂಸಾಚಾರ ಮುಂದುವರಿದಂತೆ, ಈ ಗಡಿ ಪ್ರದೇಶದ ಮೈತೇಯಿ ಪ್ರಾಬಲ್ಯದ ಭಾಗಗಳನ್ನು ‘ರಕ್ಷಿಸಲು’ ಅನೇಕ ಮೈತೇಯಿ ಪುರುಷರು ಹತ್ತಿರದ ಪ್ರದೇಶಗಳಿಂದ ಇಲ್ಲಿಗೆ ಬಂದಿದ್ದಾರೆ ಎಂದು ವರದಿಯಾಗಿದೆ.

“ರಾತ್ರಿ 10:30ರ ಸುಮಾರಿಗೆ ಗ್ರಾಮದಲ್ಲಿ ಗುಂಡಿನ ದಾಳಿ ನಡೆಯಿತು. ಒಂಬತ್ತು ಜನರು ಸಾವನ್ನಪ್ಪಿದರು. 10 ಜನರು ಗಾಯಗೊಂಡರು. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ” ಎಂದು ಇಂಫಾಲ್ ಪೂರ್ವ ಪೊಲೀಸ್ ವರಿಷ್ಠಾಧಿಕಾರಿ ಕೆ. ಶಿವಕಾಂತ ಸಿಂಗ್ ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ಖಮೆನ್‌ಲೋಕ್‌ನಲ್ಲಿ ಕುಕಿ ಉಗ್ರಗಾಮಿಗಳು ಹಲವಾರು ಬಾಂಬ್‌ಗಳನ್ನು ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆಂದು ‘ದಿ ಹಿಂದೂ’ ವರದಿ ತಿಳಿಸಿದೆ.

ಇದನ್ನೂ ಓದಿರಿ: ಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

“ಕುಕಿ ಬುಡಕಟ್ಟು ಉಗ್ರಗಾಮಿಗಳು ಮತ್ತು ಬುಡಕಟ್ಟು ಅಲ್ಲದ ಮೈತೇಯಿಗಳಿಗೆ ಖಮೆನ್‌ಲೋಕ್ ಮುಖ್ಯ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಹಲವಾರು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಉಗ್ರಗಾಮಿ ಗುಂಪುಗಳೊಂದಿಗೆ ಕೆಲವು ದಿನಗಳಿಂದ ನಡೆಯುತ್ತಿರುವ ಘರ್ಷಣೆಯಲ್ಲಿ ಅನೇಕರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ” ಎಂದು ವರದಿ ತಿಳಿಸಿದೆ.

ಮಣಿಪುರದಲ್ಲಿ ಮೇ 3 ರಂದು ಪ್ರಾರಂಭವಾದ ಜನಾಂಗೀಯ ಹಿಂಸಾಚಾರದಿಂದಾಗಿ 115 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 40,000 ಜನರು ತಮ್ಮ ನಿವಾಸಗಳನ್ನು ತೊರೆದು ಸ್ಥಳಾಂತರಗೊಂಡಿದ್ದಾರೆ. ಬಹುಸಂಖ್ಯಾತ ಮೈತೇಯಿ ಸಮುದಾಯವು ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕೆ ಬೇಡಿಕೆ ಇಟ್ಟ ನಂತರ ರಾಜ್ಯದಲ್ಲಿ ಉದ್ವಿಗ್ನತೆ ಸೃಷ್ಟಿಯಾಯಿತು. ಗುಡ್ಡಗಾಡು ಬುಡಕಟ್ಟು ಸಮುದಾಯಗಳು, ಮುಖ್ಯವಾಗಿ ಕುಕಿಗಳು ಈ ಬೇಡಿಕೆಯನ್ನು ವಿರೋಧಿಸುತ್ತಾ ಬಂದಿದ್ದಾರೆ.

ಸೋಮವಾರದಂದು 22 ವರ್ಷದ ಮುಅನ್ಸಾಂಗ್ ನೌಲಕ್ ಎಂಬವರನ್ನು ಟೋರ್ಬಂಗ್‌ನ ಲೋಕಲೈಫೈ ಗ್ರಾಮದಲ್ಲಿ ಗುಂಪೊಂದು ಗುಂಡಿಕ್ಕಿ ಕೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...