Homeಮುಖಪುಟಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ; ಒಂದೇ ರಾತ್ರಿ 9 ಜನರ ಕಗ್ಗೊಲೆ

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ; ಒಂದೇ ರಾತ್ರಿ 9 ಜನರ ಕಗ್ಗೊಲೆ

- Advertisement -
- Advertisement -

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಮುಂದುವರಿದಿದ್ದು, ಮಂಗಳವಾರ ರಾತ್ರಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಐಗಿಜಾಂಗ್ ಗ್ರಾಮದಲ್ಲಿ ಗುಂಡಿನ ದಾಳಿ ಮತ್ತು ಬೆಂಕಿ ಹಚ್ಚಿದ ಘಟನೆಯ ಕಾರಣ ಈ ಸಾವುಗಳು ಸಂಭವಿಸಿದೆ.

‘ದಿ ಹಿಂದೂ’ ಪತ್ರಿಕೆಯ ವರದಿ ಪ್ರಕಾರ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

“ಮಂಗಳವಾರ ರಾತ್ರಿ 10:30ರ ಸುಮಾರಿಗೆ ಈ ಘಟನೆ ನಡೆದಿದೆ” ಎಂದು ಇಂಫಾಲ್ ಪೂರ್ವದ ಪೊಲೀಸ್ ಅಧೀಕ್ಷಕರು ತಿಳಿಸಿರುವುದಾಗಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಐಗಿಜಾಂಗ್ ಗ್ರಾಮವು ಕುಕಿ ಸಮುದಾಯದ ಬಾಹುಳ್ಯವನ್ನು ಹೊಂದಿದೆ. ಆದರೆ ವಶಪಡಿಸಿಕೊಂಡ ಒಂಬತ್ತು ಮೃತದೇಹಗಳು ಮೈತೇಯಿ ಸಮುದಾಯದ ಪುರುಷದ್ದಾಗಿವೆ ಎಂದು ವರದಿಯಾಗಿದೆ.

ಸಾವಿಗೀಡಾದವರು ‘ಸ್ಥಳೀಯ ಸ್ವಯಂಸೇವಕರು’ ಎಂದು ಪೊಲೀಸರು ಹೇಳಿದ್ದಾರೆ. ಐಗ್ಜಾಂಗ್ ಪ್ರದೇಶವು ಕಾಂಗ್ಕೋಪಿ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳ ಗಡಿಯಲ್ಲಿದೆ. ಕಳೆದ ಹಲವು ದಿನಗಳಿಂದ ಹಿಂಸಾಚಾರ ಮುಂದುವರಿದಂತೆ, ಈ ಗಡಿ ಪ್ರದೇಶದ ಮೈತೇಯಿ ಪ್ರಾಬಲ್ಯದ ಭಾಗಗಳನ್ನು ‘ರಕ್ಷಿಸಲು’ ಅನೇಕ ಮೈತೇಯಿ ಪುರುಷರು ಹತ್ತಿರದ ಪ್ರದೇಶಗಳಿಂದ ಇಲ್ಲಿಗೆ ಬಂದಿದ್ದಾರೆ ಎಂದು ವರದಿಯಾಗಿದೆ.

“ರಾತ್ರಿ 10:30ರ ಸುಮಾರಿಗೆ ಗ್ರಾಮದಲ್ಲಿ ಗುಂಡಿನ ದಾಳಿ ನಡೆಯಿತು. ಒಂಬತ್ತು ಜನರು ಸಾವನ್ನಪ್ಪಿದರು. 10 ಜನರು ಗಾಯಗೊಂಡರು. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ” ಎಂದು ಇಂಫಾಲ್ ಪೂರ್ವ ಪೊಲೀಸ್ ವರಿಷ್ಠಾಧಿಕಾರಿ ಕೆ. ಶಿವಕಾಂತ ಸಿಂಗ್ ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ಖಮೆನ್‌ಲೋಕ್‌ನಲ್ಲಿ ಕುಕಿ ಉಗ್ರಗಾಮಿಗಳು ಹಲವಾರು ಬಾಂಬ್‌ಗಳನ್ನು ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆಂದು ‘ದಿ ಹಿಂದೂ’ ವರದಿ ತಿಳಿಸಿದೆ.

ಇದನ್ನೂ ಓದಿರಿ: ಇ.ಡಿ. ವಶಕ್ಕೆ ತಮಿಳುನಾಡು ಸಚಿವ ಬಾಲಾಜಿ; ದುರುದ್ದೇಶಪೂರಿತ ಎಂದ ಡಿಎಂಕೆ, ಕಾಂಗ್ರೆಸ್

“ಕುಕಿ ಬುಡಕಟ್ಟು ಉಗ್ರಗಾಮಿಗಳು ಮತ್ತು ಬುಡಕಟ್ಟು ಅಲ್ಲದ ಮೈತೇಯಿಗಳಿಗೆ ಖಮೆನ್‌ಲೋಕ್ ಮುಖ್ಯ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಹಲವಾರು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಉಗ್ರಗಾಮಿ ಗುಂಪುಗಳೊಂದಿಗೆ ಕೆಲವು ದಿನಗಳಿಂದ ನಡೆಯುತ್ತಿರುವ ಘರ್ಷಣೆಯಲ್ಲಿ ಅನೇಕರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ” ಎಂದು ವರದಿ ತಿಳಿಸಿದೆ.

ಮಣಿಪುರದಲ್ಲಿ ಮೇ 3 ರಂದು ಪ್ರಾರಂಭವಾದ ಜನಾಂಗೀಯ ಹಿಂಸಾಚಾರದಿಂದಾಗಿ 115 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 40,000 ಜನರು ತಮ್ಮ ನಿವಾಸಗಳನ್ನು ತೊರೆದು ಸ್ಥಳಾಂತರಗೊಂಡಿದ್ದಾರೆ. ಬಹುಸಂಖ್ಯಾತ ಮೈತೇಯಿ ಸಮುದಾಯವು ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕೆ ಬೇಡಿಕೆ ಇಟ್ಟ ನಂತರ ರಾಜ್ಯದಲ್ಲಿ ಉದ್ವಿಗ್ನತೆ ಸೃಷ್ಟಿಯಾಯಿತು. ಗುಡ್ಡಗಾಡು ಬುಡಕಟ್ಟು ಸಮುದಾಯಗಳು, ಮುಖ್ಯವಾಗಿ ಕುಕಿಗಳು ಈ ಬೇಡಿಕೆಯನ್ನು ವಿರೋಧಿಸುತ್ತಾ ಬಂದಿದ್ದಾರೆ.

ಸೋಮವಾರದಂದು 22 ವರ್ಷದ ಮುಅನ್ಸಾಂಗ್ ನೌಲಕ್ ಎಂಬವರನ್ನು ಟೋರ್ಬಂಗ್‌ನ ಲೋಕಲೈಫೈ ಗ್ರಾಮದಲ್ಲಿ ಗುಂಪೊಂದು ಗುಂಡಿಕ್ಕಿ ಕೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...