Homeಕರ್ನಾಟಕರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

- Advertisement -
- Advertisement -

ರಾಜ್ಯದಲ್ಲಿ “ಪ್ಲಾಸ್ಮಾ ಥೆರಪಿ” ಪ್ರಯೋಗ ಯಶಸ್ವಿಯಾಗಿರುವುದರಿಂದ ಅದನ್ನು ಮುಂದುವರೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ “ಕೊರೊನಾ ರೋಗಿಗಳು ಪ್ಲಾಸ್ಮಾ ಥೆರಪಿಯಿಂದ ಗುಣಮುಖರಾಗುತ್ತಿದ್ದಾರೆ. ಇದರ ಸಾಧಕ, ಬಾಧಕ ಗಮನಿಸಿ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು” ಎಂದರು.

“ಕೊರೊನಾ ಪರೀಕ್ಷೆಯನ್ನು ಸರಳವಾಗಿ ನಡೆಸಲು ವೈದ್ಯಕೀಯ ಸಿಬ್ಬಂದಿಯೊಂದಿಗೆ ಆಂಬುಲೆನ್ಸ್‌ನಲ್ಲಿ ಶಂಕಿತರ ಮನೆಗೆ ತೆರಳಿ ಗಂಟಲು ದ್ರವ ಮಾದರಿ ಸಂಗ್ರಹಿಸಿಕೊಂಡು ಬರುವ ವ್ಯವಸ್ಥೆ ಮಾಡುವ ಬಗ್ಗೆ ತಜ್ಞರು ಸಲಹೆ ನೀಡಿದ್ದರು, ಅದನ್ನು ಕಾರ್ಯಗತಗೊಳಿಸಲಾಗುವುದು” ಎಂದು ಸಚಿವರು ಹೇಳಿದರು.

“ರಾಜ್ಯದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಖಾಲಿಯಾಗಿರುವ ಕಾರಣ ರಕ್ತ ಸಂಗ್ರಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ದಾನಿಗಳಿಗೆ ತೊಂದರೆ ಆಗಬಾರದೆಂಬ ಉದ್ದೇಶದಿಂದ ಟೋಲ್‌ ಫ್ರೀ ನಂಬರ್‌ಗೆ ಕರೆ ಮಾಡಿದರೆ, ವಾಹನದಲ್ಲಿ ಕರೆತಂದು ವಾಪಸ್‌ ಬಿಡುವ ವ್ಯವಸ್ಥೆಯನ್ನು ಜಿಲ್ಲಾಡಳಿತವೇ ಮಾಡಲಿದೆ” ಎಂದರು.

ರಾಜ್ಯದಲ್ಲಿ ಮೊದಲ ಭಾರಿಗೆ ಪ್ಲಾಸ್ಮಾ ಥೆರಪಿ ಎಪ್ರಿಲ್ 26 ರಂದು ಪ್ರಾರಂಭಿಸಲಾಗಿತ್ತು. ದೇಶದ ಮೊದಲ ಪ್ಲಾಸ್ಮಾ ಥೆರಪಿ ದೆಹಲಿಯ ಗಂಭೀರ ಸ್ಥಿತಿಯಲ್ಲಿರುವ ನಾಲ್ಕು ಕೊರೊನಾ ರೋಗಿಗಳ ಮೇಲೆ ನಡೆಸಿದ್ದರಿಂದ ಚಿಕಿತ್ಸೆಯು ಫಲ ನೀಡಿ ಅವರು ಗುಣಮುಖರಾಗಿದ್ದಾರೆ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೆಂದರ್‌ ಜೈನ್ ಈ ಹಿಂದೆ‌ ತಿಳಿಸಿದ್ದರು.

ಏನಿದು ಪ್ಲಾಸ್ಮಾಥೆರಪಿ?

ಈಗಾಗಲೇ ಕೊರೊನಾ ಸೋಂಕು ತಗುಲಿ ಗುಣಮುಖರಾದವರ (ಅವರ ದೇಹದಲ್ಲಿ ಕೊರೊನಾ ವೈರಸ್‌ ಇಲ್ಲ ಎಂಬುದು ಎರಡು ಸಾರಿ ಖಾತ್ರಿಯಾದ ನಂತರ) ರಕ್ತದಲ್ಲಿನ ರೋಗನಿರೋಧಕ ಪ್ಲಾಸ್ಮಾ ಕಣಗಳನ್ನು ತೆಗೆದುಕೊಂಡು ಹಾಲಿ ಸೋಂಕಿತರಿಗೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಬೆಳೆದಿರುವುದರಿಂದ ಸೋಂಕಿತರಿಗೆ ಅದನ್ನು ಬಳಸುವ ಪ್ರಯೋಗ ಈಗ ಆರಂಭಗೊಂಡಿದೆ.

ಐಸಿಎಂಆರ್‌ ಈ ರೀತಿಯ ಪ್ಲಾಸ್ಮಾಥೆರಪಿಯನ್ನು ಹಲವು ಆಸ್ಪತ್ರೆಗಳು ಮಾಡಬಹುದು ಎಂದು ಕರೆ ನೀಡಿದೆ. ಈ ಪ್ರಯೋಗವನ್ನು ತುಂಬಾ ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಮೇಲೆ ನಡೆಸಲಾಗುತ್ತದೆ. ಇದು ಈಗಾಗಲೇ ಚೈನಾ ಮತ್ತು ಅಮೆರಿಕಾದಲ್ಲಿ ನಡೆದಿದ್ದು ಭಾರತದಲ್ಲಿ ಇತ್ತೀಚೆಗೆ ಆರಂಭಗೊಂಡಿದೆ.


ವಿಡಿಯೋ ನೋಡಿ: ಏನಿದು ಪ್ಲಾಸ್ಮಾ ಚಿಕಿತ್ಸೆ? ಕೊರೊನಾಗೆ ಇದು ಚಿಕಿತ್ಸೆಯೆ?


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ ತಬ್ಲೀಘಿ ಜಮಾಅತ್ ಸದಸ್ಯರು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....