Homeಕರ್ನಾಟಕರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

- Advertisement -
- Advertisement -

ರಾಜ್ಯದಲ್ಲಿ “ಪ್ಲಾಸ್ಮಾ ಥೆರಪಿ” ಪ್ರಯೋಗ ಯಶಸ್ವಿಯಾಗಿರುವುದರಿಂದ ಅದನ್ನು ಮುಂದುವರೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ “ಕೊರೊನಾ ರೋಗಿಗಳು ಪ್ಲಾಸ್ಮಾ ಥೆರಪಿಯಿಂದ ಗುಣಮುಖರಾಗುತ್ತಿದ್ದಾರೆ. ಇದರ ಸಾಧಕ, ಬಾಧಕ ಗಮನಿಸಿ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು” ಎಂದರು.

“ಕೊರೊನಾ ಪರೀಕ್ಷೆಯನ್ನು ಸರಳವಾಗಿ ನಡೆಸಲು ವೈದ್ಯಕೀಯ ಸಿಬ್ಬಂದಿಯೊಂದಿಗೆ ಆಂಬುಲೆನ್ಸ್‌ನಲ್ಲಿ ಶಂಕಿತರ ಮನೆಗೆ ತೆರಳಿ ಗಂಟಲು ದ್ರವ ಮಾದರಿ ಸಂಗ್ರಹಿಸಿಕೊಂಡು ಬರುವ ವ್ಯವಸ್ಥೆ ಮಾಡುವ ಬಗ್ಗೆ ತಜ್ಞರು ಸಲಹೆ ನೀಡಿದ್ದರು, ಅದನ್ನು ಕಾರ್ಯಗತಗೊಳಿಸಲಾಗುವುದು” ಎಂದು ಸಚಿವರು ಹೇಳಿದರು.

“ರಾಜ್ಯದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಖಾಲಿಯಾಗಿರುವ ಕಾರಣ ರಕ್ತ ಸಂಗ್ರಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ದಾನಿಗಳಿಗೆ ತೊಂದರೆ ಆಗಬಾರದೆಂಬ ಉದ್ದೇಶದಿಂದ ಟೋಲ್‌ ಫ್ರೀ ನಂಬರ್‌ಗೆ ಕರೆ ಮಾಡಿದರೆ, ವಾಹನದಲ್ಲಿ ಕರೆತಂದು ವಾಪಸ್‌ ಬಿಡುವ ವ್ಯವಸ್ಥೆಯನ್ನು ಜಿಲ್ಲಾಡಳಿತವೇ ಮಾಡಲಿದೆ” ಎಂದರು.

ರಾಜ್ಯದಲ್ಲಿ ಮೊದಲ ಭಾರಿಗೆ ಪ್ಲಾಸ್ಮಾ ಥೆರಪಿ ಎಪ್ರಿಲ್ 26 ರಂದು ಪ್ರಾರಂಭಿಸಲಾಗಿತ್ತು. ದೇಶದ ಮೊದಲ ಪ್ಲಾಸ್ಮಾ ಥೆರಪಿ ದೆಹಲಿಯ ಗಂಭೀರ ಸ್ಥಿತಿಯಲ್ಲಿರುವ ನಾಲ್ಕು ಕೊರೊನಾ ರೋಗಿಗಳ ಮೇಲೆ ನಡೆಸಿದ್ದರಿಂದ ಚಿಕಿತ್ಸೆಯು ಫಲ ನೀಡಿ ಅವರು ಗುಣಮುಖರಾಗಿದ್ದಾರೆ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೆಂದರ್‌ ಜೈನ್ ಈ ಹಿಂದೆ‌ ತಿಳಿಸಿದ್ದರು.

ಏನಿದು ಪ್ಲಾಸ್ಮಾಥೆರಪಿ?

ಈಗಾಗಲೇ ಕೊರೊನಾ ಸೋಂಕು ತಗುಲಿ ಗುಣಮುಖರಾದವರ (ಅವರ ದೇಹದಲ್ಲಿ ಕೊರೊನಾ ವೈರಸ್‌ ಇಲ್ಲ ಎಂಬುದು ಎರಡು ಸಾರಿ ಖಾತ್ರಿಯಾದ ನಂತರ) ರಕ್ತದಲ್ಲಿನ ರೋಗನಿರೋಧಕ ಪ್ಲಾಸ್ಮಾ ಕಣಗಳನ್ನು ತೆಗೆದುಕೊಂಡು ಹಾಲಿ ಸೋಂಕಿತರಿಗೆ ನೀಡುವುದೇ ಪ್ಲಾಸ್ಮಾ ಥೆರಪಿಯಾಗಿದೆ. ಕೊರೊನಾದಿಂದ ಗುಣಮುಖರಾದವರಲ್ಲಿ ಹೆಚ್ಚಿನ ರೋಗ ನಿರೋಧಕ ಶಕ್ತಿ ಬೆಳೆದಿರುವುದರಿಂದ ಸೋಂಕಿತರಿಗೆ ಅದನ್ನು ಬಳಸುವ ಪ್ರಯೋಗ ಈಗ ಆರಂಭಗೊಂಡಿದೆ.

ಐಸಿಎಂಆರ್‌ ಈ ರೀತಿಯ ಪ್ಲಾಸ್ಮಾಥೆರಪಿಯನ್ನು ಹಲವು ಆಸ್ಪತ್ರೆಗಳು ಮಾಡಬಹುದು ಎಂದು ಕರೆ ನೀಡಿದೆ. ಈ ಪ್ರಯೋಗವನ್ನು ತುಂಬಾ ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರ ಮೇಲೆ ನಡೆಸಲಾಗುತ್ತದೆ. ಇದು ಈಗಾಗಲೇ ಚೈನಾ ಮತ್ತು ಅಮೆರಿಕಾದಲ್ಲಿ ನಡೆದಿದ್ದು ಭಾರತದಲ್ಲಿ ಇತ್ತೀಚೆಗೆ ಆರಂಭಗೊಂಡಿದೆ.


ವಿಡಿಯೋ ನೋಡಿ: ಏನಿದು ಪ್ಲಾಸ್ಮಾ ಚಿಕಿತ್ಸೆ? ಕೊರೊನಾಗೆ ಇದು ಚಿಕಿತ್ಸೆಯೆ?


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ ತಬ್ಲೀಘಿ ಜಮಾಅತ್ ಸದಸ್ಯರು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...