Homeಮುಖಪುಟಸಿಎಎ ವಿರೋಧಿಗಳ ಬೇಟೆ ಮುಂದುವರಿಕೆ; ಇಬ್ಬರು JNU ವಿದ್ಯಾರ್ಥಿನಿಯರ ಬಂಧನ

ಸಿಎಎ ವಿರೋಧಿಗಳ ಬೇಟೆ ಮುಂದುವರಿಕೆ; ಇಬ್ಬರು JNU ವಿದ್ಯಾರ್ಥಿನಿಯರ ಬಂಧನ

- Advertisement -
- Advertisement -

ಫೆಬ್ರವರಿಯಲ್ಲಿ ನಡೆದ ಪೌರತ್ವ ವಿರೋಧಿ ಕಾನೂನು ಪ್ರತಿಭಟನೆಯಲ್ಲಿ ಭಾಗವಹಿಸಿದ ಇಬ್ಬರು ಜವಾಹಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು)ದ ವಿದ್ಯಾರ್ಥಿನಿಯರನ್ನು ಬಂಧಿಸಲಾಗಿದೆ.

ದೆಹಲಿಯ ಜಾಫ್ರಾಬಾದ್‌ನಲ್ಲಿ ಸಿಎಎ ವಿರೋಧಿ ಧರಣಿಯಲ್ಲಿ ಭಾಗವಹಿಸಿದ್ದ ಜೆಎನ್‌ಯು ದ ಇಬ್ಬರು ವಿದ್ಯಾರ್ಥಿನಿಯರನ್ನು ಬಂಧಿಸಲಾಯಿತು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದದ ಪ್ರತಿಭಟನೆಯ ನಂತರ ನಡೆದ 50 ಕ್ಕೂ ಹೆಚ್ಚು ಜನರು ಹತ್ಯೆಗೊಳಗಾದ ಘರ್ಷಣೆಯ ಮೂರು ತಿಂಗಳ ನಂತರ ಈ ಬಂಧನ ನಡೆದಿದೆ.

ಫೆಬ್ರವರಿ 23 ರಂದು ಈಶಾನ್ಯ ದೆಹಲಿಯ ಜಾಫ್ರಾಬಾದ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯ ನಂತರ ಬಿಜೆಪಿಯ ಕಪಿಲ್ ಮಿಶ್ರಾ ಅವರಿಂದ ಪೌರತ್ವ ತಿದ್ದುಪಡಿ ಕಾನೂನಿನ ಪರ ಮೆರವಣಿಗೆ ನಡೆದು ಅಲ್ಲಿ ಕಪಿಲ್ ಮಿಶ್ರ ಗಲಭೆಗೆ ಪ್ರೇರೇಪಿಸುವ ಭಾಷಣವನ್ನು ಪೊಲೀಸರ ಸಮ್ಮುಖದಲ್ಲಿ ಮಾಡಿದ್ದರು. ಇದಾಗಿ ಒಂದು ದಿನದ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಘರ್ಷಣೆಗಳು ನಡೆದವು.

ಬಂಧನಕ್ಕೊಳಗಾದ ಇಬ್ಬರು ವಿದ್ಯಾರ್ಥಿನಿಯರನ್ನು ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಎಂದು ಗುರುತಿಸಲಾಗಿದೆ. ಇವರು ದೆಹಲಿ ಮೂಲದ ಪಿಂಜ್ರಾ ಟೋಡ್ ಗುಂಪಿಗೆ ಸೇರಿದವರಾಗಿದ್ದು, ಈ ಗುಂಪು ಕಾಲೇಜು ವಿದ್ಯಾರ್ಥಿನಿಯರ ಹಕ್ಕುಗಳಿಗಾಗಿ ಕೆಲಸ ಮಾಡುತ್ತದೆ.

ಐಪಿಸಿ  ಸೆಕ್ಷನ್ 186 ಮತ್ತು 353 ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಫೆಬ್ರವರಿಯಲ್ಲಿ ಅವರು ಜಾಫ್ರಾಬಾದ್ ಮೆಟ್ರೋ ನಿಲ್ದಾಣದಲ್ಲಿ ನಡೆದ ಸಿಎಎ ವಿರುದ್ದದ ಮಹಿಳಾ ಪ್ರತಿಭಟನಾಕಾರರ ಸಭೆಯಲ್ಲಿ ಇವರು ಭಾಗವಹಿಸಿದ್ದರು ಎನ್ನಲಾಗಿದೆ.

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ದೆಹಲಿ ಹಿಂಸಾಚಾರದಲ್ಲಿ ಸಂಚು ರೂಪಿಸಿದ್ದಾರೆ ಎಂದು ಆರೊಪಿಸಿ ಹಲವಾರು ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಕಳೆದ ಒಂದು ತಿಂಗಳಲ್ಲಿ ದೆಹಲಿ ಪೊಲೀಸರು ಬಂಧಿಸುತ್ತಿದ್ದಾರೆ.

ಪೌರತ್ವ ತಿದ್ದುಪಡಿ ಕಾನೂನು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಯಿತು, ಆದರೆ ಕೊರೊನಾ ವೈರಸ್ ಕಾರಣದಿಂದಾಗಿ ಈ ಎಲ್ಲಾ ಆಂದೋಲನ ಸ್ಥಳಗಳನ್ನು ತೆರವುಗೊಳಿಸಲಾಯಿತು. ಸಿಎಎ ವಿರೋಧಿ ಪ್ರತಿಭಟನೆಯ ಹೃದಯವೆಂದು ಕರೆಯುತ್ತಿದ್ದ ದೆಹಲಿಯ ಶಾಹೀನ್ ಬಾಗ್ ಅನ್ನು ಮಾರ್ಚ್ 24 ರಂದು 101 ದಿನಗಳ ನಂತರ ತೆರವುಗೊಳಿಸಲಾಯಿತು.


ಓದಿ: ಆನಂದ್‌ ತೇಲ್‌ತುಂಬ್ಡೆ; ಬಂಧನದಲ್ಲಿ ಅಂಬೇಡ್ಕರ್ ಆತ್ಮಬಂಧು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...