Homeಮುಖಪುಟಸಿಎಎ ವಿರೋಧಿಗಳ ಬೇಟೆ ಮುಂದುವರಿಕೆ; ಇಬ್ಬರು JNU ವಿದ್ಯಾರ್ಥಿನಿಯರ ಬಂಧನ

ಸಿಎಎ ವಿರೋಧಿಗಳ ಬೇಟೆ ಮುಂದುವರಿಕೆ; ಇಬ್ಬರು JNU ವಿದ್ಯಾರ್ಥಿನಿಯರ ಬಂಧನ

- Advertisement -
- Advertisement -

ಫೆಬ್ರವರಿಯಲ್ಲಿ ನಡೆದ ಪೌರತ್ವ ವಿರೋಧಿ ಕಾನೂನು ಪ್ರತಿಭಟನೆಯಲ್ಲಿ ಭಾಗವಹಿಸಿದ ಇಬ್ಬರು ಜವಾಹಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು)ದ ವಿದ್ಯಾರ್ಥಿನಿಯರನ್ನು ಬಂಧಿಸಲಾಗಿದೆ.

ದೆಹಲಿಯ ಜಾಫ್ರಾಬಾದ್‌ನಲ್ಲಿ ಸಿಎಎ ವಿರೋಧಿ ಧರಣಿಯಲ್ಲಿ ಭಾಗವಹಿಸಿದ್ದ ಜೆಎನ್‌ಯು ದ ಇಬ್ಬರು ವಿದ್ಯಾರ್ಥಿನಿಯರನ್ನು ಬಂಧಿಸಲಾಯಿತು. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದದ ಪ್ರತಿಭಟನೆಯ ನಂತರ ನಡೆದ 50 ಕ್ಕೂ ಹೆಚ್ಚು ಜನರು ಹತ್ಯೆಗೊಳಗಾದ ಘರ್ಷಣೆಯ ಮೂರು ತಿಂಗಳ ನಂತರ ಈ ಬಂಧನ ನಡೆದಿದೆ.

ಫೆಬ್ರವರಿ 23 ರಂದು ಈಶಾನ್ಯ ದೆಹಲಿಯ ಜಾಫ್ರಾಬಾದ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯ ನಂತರ ಬಿಜೆಪಿಯ ಕಪಿಲ್ ಮಿಶ್ರಾ ಅವರಿಂದ ಪೌರತ್ವ ತಿದ್ದುಪಡಿ ಕಾನೂನಿನ ಪರ ಮೆರವಣಿಗೆ ನಡೆದು ಅಲ್ಲಿ ಕಪಿಲ್ ಮಿಶ್ರ ಗಲಭೆಗೆ ಪ್ರೇರೇಪಿಸುವ ಭಾಷಣವನ್ನು ಪೊಲೀಸರ ಸಮ್ಮುಖದಲ್ಲಿ ಮಾಡಿದ್ದರು. ಇದಾಗಿ ಒಂದು ದಿನದ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಘರ್ಷಣೆಗಳು ನಡೆದವು.

ಬಂಧನಕ್ಕೊಳಗಾದ ಇಬ್ಬರು ವಿದ್ಯಾರ್ಥಿನಿಯರನ್ನು ದೇವಂಗನಾ ಕಾಳಿತಾ ಮತ್ತು ನತಾಶಾ ನರ್ವಾಲ್ ಎಂದು ಗುರುತಿಸಲಾಗಿದೆ. ಇವರು ದೆಹಲಿ ಮೂಲದ ಪಿಂಜ್ರಾ ಟೋಡ್ ಗುಂಪಿಗೆ ಸೇರಿದವರಾಗಿದ್ದು, ಈ ಗುಂಪು ಕಾಲೇಜು ವಿದ್ಯಾರ್ಥಿನಿಯರ ಹಕ್ಕುಗಳಿಗಾಗಿ ಕೆಲಸ ಮಾಡುತ್ತದೆ.

ಐಪಿಸಿ  ಸೆಕ್ಷನ್ 186 ಮತ್ತು 353 ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಫೆಬ್ರವರಿಯಲ್ಲಿ ಅವರು ಜಾಫ್ರಾಬಾದ್ ಮೆಟ್ರೋ ನಿಲ್ದಾಣದಲ್ಲಿ ನಡೆದ ಸಿಎಎ ವಿರುದ್ದದ ಮಹಿಳಾ ಪ್ರತಿಭಟನಾಕಾರರ ಸಭೆಯಲ್ಲಿ ಇವರು ಭಾಗವಹಿಸಿದ್ದರು ಎನ್ನಲಾಗಿದೆ.

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ದೆಹಲಿ ಹಿಂಸಾಚಾರದಲ್ಲಿ ಸಂಚು ರೂಪಿಸಿದ್ದಾರೆ ಎಂದು ಆರೊಪಿಸಿ ಹಲವಾರು ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಕಳೆದ ಒಂದು ತಿಂಗಳಲ್ಲಿ ದೆಹಲಿ ಪೊಲೀಸರು ಬಂಧಿಸುತ್ತಿದ್ದಾರೆ.

ಪೌರತ್ವ ತಿದ್ದುಪಡಿ ಕಾನೂನು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಯಿತು, ಆದರೆ ಕೊರೊನಾ ವೈರಸ್ ಕಾರಣದಿಂದಾಗಿ ಈ ಎಲ್ಲಾ ಆಂದೋಲನ ಸ್ಥಳಗಳನ್ನು ತೆರವುಗೊಳಿಸಲಾಯಿತು. ಸಿಎಎ ವಿರೋಧಿ ಪ್ರತಿಭಟನೆಯ ಹೃದಯವೆಂದು ಕರೆಯುತ್ತಿದ್ದ ದೆಹಲಿಯ ಶಾಹೀನ್ ಬಾಗ್ ಅನ್ನು ಮಾರ್ಚ್ 24 ರಂದು 101 ದಿನಗಳ ನಂತರ ತೆರವುಗೊಳಿಸಲಾಯಿತು.


ಓದಿ: ಆನಂದ್‌ ತೇಲ್‌ತುಂಬ್ಡೆ; ಬಂಧನದಲ್ಲಿ ಅಂಬೇಡ್ಕರ್ ಆತ್ಮಬಂಧು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...