ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ನಿಭಾಯಿಸುವುದರ ಕುರಿತು ಅಧಿಕಾರಿಗಳು ಮತ್ತು ಸಚಿವರೊಂದಿಗೆ ದಿಢೀರ್ ಸಭೆ ನಡೆಸಿದ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿನ ರಾತ್ರಿ ಕರ್ಫ್ಯೂ ಮುಂದುವರೆಸುವುದಾಗಿ ತಿಳಿಸಿದ್ದಾರೆ.
ಅವರು ಇಂದು ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಮುಖ್ಯಮಂತ್ರಿ @BSYBJP ರವರು ಇಂದು ತಮ್ಮ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.
ಆರೋಗ್ಯ ಸಚಿವ @mla_sudhakar, ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/XpNPmzQG1j
— CM of Karnataka (@CMofKarnataka) April 16, 2021
“ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಮಿತಿ ಮೀರುತ್ತಿರುವುದರಿಂದ ಅಧಿಕಾರಿಗಳಿಂದ ರಾಜ್ಯದ ಪರಿಸ್ಥಿತಿಯ ಬಗ್ಗೆ ಪೂರ್ಣ ಮಾಹಿತಿ ಪಡೆದಿದ್ದೇನೆ. ಇನ್ನು ಯಾವ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಹೇರಬೇಕೆಂದು ಯೋಚಿಸುತ್ತೇವೆ. ಸದ್ಯಕ್ಕೆ ಯಾವುದೇ ಮಹತ್ವದ ಬದಲಾವಣೆಗಳಿರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಸಲಹೆ ಮತ್ತು ಇತರ ರಾಜ್ಯಗಳ ನಡೆ ಅನುಸರಿಸಿ ಏಪ್ರಿಲ್ 20 ರಂದು ಸಭೆ ಸೇರಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ” ಎಂದಿದ್ದಾರೆ.
ದೆಹಲಿ ಮತ್ತು ಮಹಾರಾಷ್ಟ್ರದ ಕ್ರಮಗಳ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮ ರಾಜ್ಯವನ್ನು ಇತರ ರಾಜ್ಯಗಳೊಂದಿಗೆ ಹೋಲಿಸಬೇಡಿ. ಪರಿಸ್ಥಿತಿಗಳು ವಿಭಿನ್ನವಾಗಿವೆ. ನಮ್ಮ ರಾಜ್ಯದಲ್ಲಿ ನಮ್ಮದೇಯಾದ ಕಾರಣಗಳಿವೆ. ಹಾಗಾಗಿ ಏಪ್ರಿಲ್ 20ರವರೆಗೆ ಯಾವುದೇ ಬದಲಾವಣೆಗಳಿಲ್ಲ” ಎಂದು ತಿಳಿಸಿದ್ದಾರೆ.
"Depending on what PM @narendramodi suggests & other States do we will take a call after this week on what measures need to be taken further. For now night curfew in few districts will continue. No other decisions taken today," says @CMofKarnataka @BSYBJP post emergency meeting pic.twitter.com/C3VUIBee4s
— Anusha Ravi Sood (@anusharavi10) April 16, 2021
ಇದನ್ನೂ ಓದಿ: ನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ