Homeಚಳವಳಿಮುಂದುವರೆದ ರೈತ ಹೋರಾಟ - ಲಕ್ಷಾಂತರ ಜನಗಳು, ಸಾವಿರಾರು ವಾಹನಗಳು!

ಮುಂದುವರೆದ ರೈತ ಹೋರಾಟ – ಲಕ್ಷಾಂತರ ಜನಗಳು, ಸಾವಿರಾರು ವಾಹನಗಳು!

"ರೈತರ ಮರಣ ಶಾಸನ ಬರೆಯುವ ಮೂರು ಕರಾಳ ಶಾಸನ ರದ್ದಾಗುವವರೆಗೂ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು 541 ಸಂಘಟನೆಗಳ ಒಕ್ಕೂಟದ ಕಿಸಾನ್ ಏಕ್ತಾ ಮೋರ್ಚಾ ತೀರ್ಮಾನಿಸಿದೆ"

- Advertisement -
- Advertisement -

ರೈತರ ಮರಣ ಶಾಸನ ಬರೆಯುವ ಮೂರು ಕರಾಳ ಶಾಸನ ರದ್ದಾಗುವವರೆಗೂ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು 541 ಸಂಘಟನೆಗಳ ಒಕ್ಕೂಟದ ಕಿಸಾನ್ ಏಕ್ತಾ ಮೋರ್ಚಾ ತೀರ್ಮಾನಿಸಿದೆ. ಲಕ್ಷಾಂತರ ಜನರು, ಸಾವಿರಾರು ವಾಹನಗಳು ಈ ಹೋರಾಟದಲ್ಲಿ ಭಾಗಿಯಾಗಿವೆ.

ರೈತ ಹೋರಾಟವನ್ನು ಬೆಂಬಲಿಸಲು ಕರ್ನಾಟಕದಿಂದ ಆಗಮಿಸಿದ್ದ ನಿಯೋಗವು ಇಂದು ದಿಲ್ಲಿಯ ಪಂಜಾಬ್ ಹರಿಯಾಣ ಗಡಿ ಭಾಗವಾದ ಟಿಕ್ರಿಗೆ ಭೇಟಿ ನೀಡಿತು. ಕರ್ನಾಟಕದ ನಿಯೋಗವನ್ನು ಟಿಕ್ರಿ ಗಡಿಯಲ್ಲಿ ಬಿಕೆಯು ಸಂಘಟನೆಯ ಗೆಳೆಯರು ನೂರಾರು ಕಾರ್ಯಕರ್ತರೊಂದಿಗೆ ಬಹದ್ದೂರ್‌ ಘಡ್ ವೃತ್ತದಲ್ಲಿ ಸ್ವಾಗತ ಮಾಡಿದರು. ಬಹದ್ದೂರ್ ಘಡ್ ವೃತ್ತದಿಂದ ಕರ್ನಾಟಕದ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದ ಪ್ರಮುಖರೊಂದಿಗೆ, ಈ ಸಂಘಟನೆಯ ಪ್ರಮುಖರು ಮತ್ತು ನೂರಾರು ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆ ಹಾಕುತ್ತಾ ಕಿ.ಮೀ.ಗಟ್ಟಲೆ ಮೆರವಣಿಗೆ ಹೊರಟು ಪ್ರತಿಭಟನೆಯ ಪ್ರಮುಖ ವೇದಿಕೆಗೆ ತಲುಪಿದೆವು.

ಇಂದು ನಡೆದ ವೇದಿಕೆಯ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 250 ಕ್ಕೂ ಹೆಚ್ಚಿನ ಸಂಘಟನೆಯ ಪ್ರಮುಖರು ಮಾತನಾಡಿದರು. ಮಾತನಾಡಿದ ಎಲ್ಲ ಸಂಘಟನೆಗಳ ಪ್ರಮುಖರು ಮೋದಿ ಸರ್ಕಾರದ ರೈತ-ಕಾರ್ಮಿಕ-ದಲಿತ ವಿರೋಧಿ ನೀತಿಗಳನ್ನು ಖಂಡಿಸಿದರು.

ಇದನ್ನೂ ಓದಿ: 24 ದಲಿತ ಕುಟುಂಬಗಳಿಗೆ ಬಹಿಷ್ಕಾರ – ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ!

“ಜಾರಿಗೆ ತಂದಿರುವ ಕರಾಳ ಕಾನೂನು ರದ್ದು ಮಾಡುವವರೆಗೂ ಹೋರಾಟ ನಿಲ್ಲದು. ಬದಲಿಗೆ ಹೋರಾಟವನ್ನು ಇನ್ನಷ್ಟು ಚುರುಕುಗೊಳಿಸಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಸಿದರು. ಸಂಘಟನೆಯ ಪ್ರಮುಖರು ರೈತರ ಸಮಸ್ಯೆಯ ಜೊತೆಗೆ ದಲಿತ ಕಾರ್ಮಿಕ ಸಮಸ್ಯೆಗಳ ಪರಿಹಾರಕ್ಕೂ ಗಂಭೀರ ಹೋರಾಟ ರೂಪಿಸಲಾಗುವುದು ಎಂದರು.

ವೇದಿಕೆಯಲ್ಲಿ ಕರ್ನಾಟಕ ನಿಯೋಗದ ಪ್ರಮುಖರಲ್ಲಿ ಒಬ್ಬರಾದ ದಲಿತ ಸಂಘಟನೆಯ ಪ್ರಮುಖರಾದ ಗುರುಪ್ರಸಾದ್ ಕೆರೆಗೋಡು ಮಾತನಾಡಿ, “ಉತ್ತರ ಭಾರತದಲ್ಲಿ ರೈತರ ಬೆಳೆ ಮತ್ತು ಬೆಲೆಯನ್ನು ಕಿತ್ತುಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ಬೆಳೆ ಬೆಲೆಯ ಜೊತೆಗೆ ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದಾರೆ. ದೇಶಕ್ಕೆ ಮಾದರಿಯಾದ ದೇವರಾಜು ಅರಸು ಅವರು ಜಾರಿಗೆ ತಂದ ಭೂಸುಧಾರಣಾ ಕಾನೂನು ದೇಶಕ್ಕೆ ಮಾದರಿಯಾಗಿತ್ತು. ಹಾಲಿ ಈ ಕಾನೂನಿಗೆ ತಿದ್ದುಪಡಿತಂದು, ರೈತರಿಂದ ಕಿತ್ತು ಕಾರ್ಪೊರೇಟ್ ಕುಳಗಳಿಗೆ ಹಂಚುತ್ತಿದ್ದಾರೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕದ ಮುಖ್ಯಮಂತ್ರಿ ರೈತ ದ್ರೋಹಿಯಾಗಿದ್ದಾರೆ. ಕರ್ನಾಟಕದಲ್ಲಿ ಈಗಾಗಲೆ ಐಕ್ಯ ಹೋರಾಟದ ಅಡಿಯಲ್ಲಿ ರೈತ ದಲಿತ ಕಾರ್ಮಿಕರಿಗೆ ಸರ್ಕಾರ ಮಾಡುತ್ತಿರುವ ದ್ರೋಹದ ವಿರುದ್ದ ಹೋರಾಟ ರೂಪಿಸಿ ನಿರಂತರವಾಗಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟವು ನಿಮ್ಮೊಂದಿಗೆ ಇನ್ನಷ್ಟು ಸಂಘಟನಾತ್ಮವಾಗಿ ಸಾಥ್ ನೀಡಲಿದೆ” ಎಂದರು.

ಇವರ ಕನ್ನಡ ಭಾಷಣವನ್ನು ರೈತಸಂಘದ ಹಿರಿಯ ಉಪಾಧ್ಯಕ್ಷ ಜಿ.ಟಿ.ರಾಮಸ್ವಾಮಿ ಕನ್ನಡದಿಂದ ಹಿಂದಿಗೆ ಭಾಷಾಂತರ ಮಾಡಿದರು.


ಇದನ್ನೂ ಓದಿ: ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ – ತಮ್ಮ ನಿಲುವು ಸ್ಪಷ್ಟಪಡಿಸಿದ ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...