Homeಚಳವಳಿಮುಂದುವರೆದ ರೈತ ಹೋರಾಟ - ಲಕ್ಷಾಂತರ ಜನಗಳು, ಸಾವಿರಾರು ವಾಹನಗಳು!

ಮುಂದುವರೆದ ರೈತ ಹೋರಾಟ – ಲಕ್ಷಾಂತರ ಜನಗಳು, ಸಾವಿರಾರು ವಾಹನಗಳು!

"ರೈತರ ಮರಣ ಶಾಸನ ಬರೆಯುವ ಮೂರು ಕರಾಳ ಶಾಸನ ರದ್ದಾಗುವವರೆಗೂ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು 541 ಸಂಘಟನೆಗಳ ಒಕ್ಕೂಟದ ಕಿಸಾನ್ ಏಕ್ತಾ ಮೋರ್ಚಾ ತೀರ್ಮಾನಿಸಿದೆ"

- Advertisement -
- Advertisement -

ರೈತರ ಮರಣ ಶಾಸನ ಬರೆಯುವ ಮೂರು ಕರಾಳ ಶಾಸನ ರದ್ದಾಗುವವರೆಗೂ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು 541 ಸಂಘಟನೆಗಳ ಒಕ್ಕೂಟದ ಕಿಸಾನ್ ಏಕ್ತಾ ಮೋರ್ಚಾ ತೀರ್ಮಾನಿಸಿದೆ. ಲಕ್ಷಾಂತರ ಜನರು, ಸಾವಿರಾರು ವಾಹನಗಳು ಈ ಹೋರಾಟದಲ್ಲಿ ಭಾಗಿಯಾಗಿವೆ.

ರೈತ ಹೋರಾಟವನ್ನು ಬೆಂಬಲಿಸಲು ಕರ್ನಾಟಕದಿಂದ ಆಗಮಿಸಿದ್ದ ನಿಯೋಗವು ಇಂದು ದಿಲ್ಲಿಯ ಪಂಜಾಬ್ ಹರಿಯಾಣ ಗಡಿ ಭಾಗವಾದ ಟಿಕ್ರಿಗೆ ಭೇಟಿ ನೀಡಿತು. ಕರ್ನಾಟಕದ ನಿಯೋಗವನ್ನು ಟಿಕ್ರಿ ಗಡಿಯಲ್ಲಿ ಬಿಕೆಯು ಸಂಘಟನೆಯ ಗೆಳೆಯರು ನೂರಾರು ಕಾರ್ಯಕರ್ತರೊಂದಿಗೆ ಬಹದ್ದೂರ್‌ ಘಡ್ ವೃತ್ತದಲ್ಲಿ ಸ್ವಾಗತ ಮಾಡಿದರು. ಬಹದ್ದೂರ್ ಘಡ್ ವೃತ್ತದಿಂದ ಕರ್ನಾಟಕದ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದ ಪ್ರಮುಖರೊಂದಿಗೆ, ಈ ಸಂಘಟನೆಯ ಪ್ರಮುಖರು ಮತ್ತು ನೂರಾರು ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆ ಹಾಕುತ್ತಾ ಕಿ.ಮೀ.ಗಟ್ಟಲೆ ಮೆರವಣಿಗೆ ಹೊರಟು ಪ್ರತಿಭಟನೆಯ ಪ್ರಮುಖ ವೇದಿಕೆಗೆ ತಲುಪಿದೆವು.

ಇಂದು ನಡೆದ ವೇದಿಕೆಯ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 250 ಕ್ಕೂ ಹೆಚ್ಚಿನ ಸಂಘಟನೆಯ ಪ್ರಮುಖರು ಮಾತನಾಡಿದರು. ಮಾತನಾಡಿದ ಎಲ್ಲ ಸಂಘಟನೆಗಳ ಪ್ರಮುಖರು ಮೋದಿ ಸರ್ಕಾರದ ರೈತ-ಕಾರ್ಮಿಕ-ದಲಿತ ವಿರೋಧಿ ನೀತಿಗಳನ್ನು ಖಂಡಿಸಿದರು.

ಇದನ್ನೂ ಓದಿ: 24 ದಲಿತ ಕುಟುಂಬಗಳಿಗೆ ಬಹಿಷ್ಕಾರ – ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ!

“ಜಾರಿಗೆ ತಂದಿರುವ ಕರಾಳ ಕಾನೂನು ರದ್ದು ಮಾಡುವವರೆಗೂ ಹೋರಾಟ ನಿಲ್ಲದು. ಬದಲಿಗೆ ಹೋರಾಟವನ್ನು ಇನ್ನಷ್ಟು ಚುರುಕುಗೊಳಿಸಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಸಿದರು. ಸಂಘಟನೆಯ ಪ್ರಮುಖರು ರೈತರ ಸಮಸ್ಯೆಯ ಜೊತೆಗೆ ದಲಿತ ಕಾರ್ಮಿಕ ಸಮಸ್ಯೆಗಳ ಪರಿಹಾರಕ್ಕೂ ಗಂಭೀರ ಹೋರಾಟ ರೂಪಿಸಲಾಗುವುದು ಎಂದರು.

ವೇದಿಕೆಯಲ್ಲಿ ಕರ್ನಾಟಕ ನಿಯೋಗದ ಪ್ರಮುಖರಲ್ಲಿ ಒಬ್ಬರಾದ ದಲಿತ ಸಂಘಟನೆಯ ಪ್ರಮುಖರಾದ ಗುರುಪ್ರಸಾದ್ ಕೆರೆಗೋಡು ಮಾತನಾಡಿ, “ಉತ್ತರ ಭಾರತದಲ್ಲಿ ರೈತರ ಬೆಳೆ ಮತ್ತು ಬೆಲೆಯನ್ನು ಕಿತ್ತುಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ಬೆಳೆ ಬೆಲೆಯ ಜೊತೆಗೆ ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದಾರೆ. ದೇಶಕ್ಕೆ ಮಾದರಿಯಾದ ದೇವರಾಜು ಅರಸು ಅವರು ಜಾರಿಗೆ ತಂದ ಭೂಸುಧಾರಣಾ ಕಾನೂನು ದೇಶಕ್ಕೆ ಮಾದರಿಯಾಗಿತ್ತು. ಹಾಲಿ ಈ ಕಾನೂನಿಗೆ ತಿದ್ದುಪಡಿತಂದು, ರೈತರಿಂದ ಕಿತ್ತು ಕಾರ್ಪೊರೇಟ್ ಕುಳಗಳಿಗೆ ಹಂಚುತ್ತಿದ್ದಾರೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕದ ಮುಖ್ಯಮಂತ್ರಿ ರೈತ ದ್ರೋಹಿಯಾಗಿದ್ದಾರೆ. ಕರ್ನಾಟಕದಲ್ಲಿ ಈಗಾಗಲೆ ಐಕ್ಯ ಹೋರಾಟದ ಅಡಿಯಲ್ಲಿ ರೈತ ದಲಿತ ಕಾರ್ಮಿಕರಿಗೆ ಸರ್ಕಾರ ಮಾಡುತ್ತಿರುವ ದ್ರೋಹದ ವಿರುದ್ದ ಹೋರಾಟ ರೂಪಿಸಿ ನಿರಂತರವಾಗಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟವು ನಿಮ್ಮೊಂದಿಗೆ ಇನ್ನಷ್ಟು ಸಂಘಟನಾತ್ಮವಾಗಿ ಸಾಥ್ ನೀಡಲಿದೆ” ಎಂದರು.

ಇವರ ಕನ್ನಡ ಭಾಷಣವನ್ನು ರೈತಸಂಘದ ಹಿರಿಯ ಉಪಾಧ್ಯಕ್ಷ ಜಿ.ಟಿ.ರಾಮಸ್ವಾಮಿ ಕನ್ನಡದಿಂದ ಹಿಂದಿಗೆ ಭಾಷಾಂತರ ಮಾಡಿದರು.


ಇದನ್ನೂ ಓದಿ: ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ – ತಮ್ಮ ನಿಲುವು ಸ್ಪಷ್ಟಪಡಿಸಿದ ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...