Homeಚಳವಳಿಮುಂದುವರೆದ ರೈತ ಹೋರಾಟ - ಲಕ್ಷಾಂತರ ಜನಗಳು, ಸಾವಿರಾರು ವಾಹನಗಳು!

ಮುಂದುವರೆದ ರೈತ ಹೋರಾಟ – ಲಕ್ಷಾಂತರ ಜನಗಳು, ಸಾವಿರಾರು ವಾಹನಗಳು!

"ರೈತರ ಮರಣ ಶಾಸನ ಬರೆಯುವ ಮೂರು ಕರಾಳ ಶಾಸನ ರದ್ದಾಗುವವರೆಗೂ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು 541 ಸಂಘಟನೆಗಳ ಒಕ್ಕೂಟದ ಕಿಸಾನ್ ಏಕ್ತಾ ಮೋರ್ಚಾ ತೀರ್ಮಾನಿಸಿದೆ"

- Advertisement -
- Advertisement -

ರೈತರ ಮರಣ ಶಾಸನ ಬರೆಯುವ ಮೂರು ಕರಾಳ ಶಾಸನ ರದ್ದಾಗುವವರೆಗೂ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು 541 ಸಂಘಟನೆಗಳ ಒಕ್ಕೂಟದ ಕಿಸಾನ್ ಏಕ್ತಾ ಮೋರ್ಚಾ ತೀರ್ಮಾನಿಸಿದೆ. ಲಕ್ಷಾಂತರ ಜನರು, ಸಾವಿರಾರು ವಾಹನಗಳು ಈ ಹೋರಾಟದಲ್ಲಿ ಭಾಗಿಯಾಗಿವೆ.

ರೈತ ಹೋರಾಟವನ್ನು ಬೆಂಬಲಿಸಲು ಕರ್ನಾಟಕದಿಂದ ಆಗಮಿಸಿದ್ದ ನಿಯೋಗವು ಇಂದು ದಿಲ್ಲಿಯ ಪಂಜಾಬ್ ಹರಿಯಾಣ ಗಡಿ ಭಾಗವಾದ ಟಿಕ್ರಿಗೆ ಭೇಟಿ ನೀಡಿತು. ಕರ್ನಾಟಕದ ನಿಯೋಗವನ್ನು ಟಿಕ್ರಿ ಗಡಿಯಲ್ಲಿ ಬಿಕೆಯು ಸಂಘಟನೆಯ ಗೆಳೆಯರು ನೂರಾರು ಕಾರ್ಯಕರ್ತರೊಂದಿಗೆ ಬಹದ್ದೂರ್‌ ಘಡ್ ವೃತ್ತದಲ್ಲಿ ಸ್ವಾಗತ ಮಾಡಿದರು. ಬಹದ್ದೂರ್ ಘಡ್ ವೃತ್ತದಿಂದ ಕರ್ನಾಟಕದ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದ ಪ್ರಮುಖರೊಂದಿಗೆ, ಈ ಸಂಘಟನೆಯ ಪ್ರಮುಖರು ಮತ್ತು ನೂರಾರು ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆ ಹಾಕುತ್ತಾ ಕಿ.ಮೀ.ಗಟ್ಟಲೆ ಮೆರವಣಿಗೆ ಹೊರಟು ಪ್ರತಿಭಟನೆಯ ಪ್ರಮುಖ ವೇದಿಕೆಗೆ ತಲುಪಿದೆವು.

ಇಂದು ನಡೆದ ವೇದಿಕೆಯ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 250 ಕ್ಕೂ ಹೆಚ್ಚಿನ ಸಂಘಟನೆಯ ಪ್ರಮುಖರು ಮಾತನಾಡಿದರು. ಮಾತನಾಡಿದ ಎಲ್ಲ ಸಂಘಟನೆಗಳ ಪ್ರಮುಖರು ಮೋದಿ ಸರ್ಕಾರದ ರೈತ-ಕಾರ್ಮಿಕ-ದಲಿತ ವಿರೋಧಿ ನೀತಿಗಳನ್ನು ಖಂಡಿಸಿದರು.

ಇದನ್ನೂ ಓದಿ: 24 ದಲಿತ ಕುಟುಂಬಗಳಿಗೆ ಬಹಿಷ್ಕಾರ – ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ!

“ಜಾರಿಗೆ ತಂದಿರುವ ಕರಾಳ ಕಾನೂನು ರದ್ದು ಮಾಡುವವರೆಗೂ ಹೋರಾಟ ನಿಲ್ಲದು. ಬದಲಿಗೆ ಹೋರಾಟವನ್ನು ಇನ್ನಷ್ಟು ಚುರುಕುಗೊಳಿಸಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಸಿದರು. ಸಂಘಟನೆಯ ಪ್ರಮುಖರು ರೈತರ ಸಮಸ್ಯೆಯ ಜೊತೆಗೆ ದಲಿತ ಕಾರ್ಮಿಕ ಸಮಸ್ಯೆಗಳ ಪರಿಹಾರಕ್ಕೂ ಗಂಭೀರ ಹೋರಾಟ ರೂಪಿಸಲಾಗುವುದು ಎಂದರು.

ವೇದಿಕೆಯಲ್ಲಿ ಕರ್ನಾಟಕ ನಿಯೋಗದ ಪ್ರಮುಖರಲ್ಲಿ ಒಬ್ಬರಾದ ದಲಿತ ಸಂಘಟನೆಯ ಪ್ರಮುಖರಾದ ಗುರುಪ್ರಸಾದ್ ಕೆರೆಗೋಡು ಮಾತನಾಡಿ, “ಉತ್ತರ ಭಾರತದಲ್ಲಿ ರೈತರ ಬೆಳೆ ಮತ್ತು ಬೆಲೆಯನ್ನು ಕಿತ್ತುಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ಬೆಳೆ ಬೆಲೆಯ ಜೊತೆಗೆ ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದಾರೆ. ದೇಶಕ್ಕೆ ಮಾದರಿಯಾದ ದೇವರಾಜು ಅರಸು ಅವರು ಜಾರಿಗೆ ತಂದ ಭೂಸುಧಾರಣಾ ಕಾನೂನು ದೇಶಕ್ಕೆ ಮಾದರಿಯಾಗಿತ್ತು. ಹಾಲಿ ಈ ಕಾನೂನಿಗೆ ತಿದ್ದುಪಡಿತಂದು, ರೈತರಿಂದ ಕಿತ್ತು ಕಾರ್ಪೊರೇಟ್ ಕುಳಗಳಿಗೆ ಹಂಚುತ್ತಿದ್ದಾರೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕದ ಮುಖ್ಯಮಂತ್ರಿ ರೈತ ದ್ರೋಹಿಯಾಗಿದ್ದಾರೆ. ಕರ್ನಾಟಕದಲ್ಲಿ ಈಗಾಗಲೆ ಐಕ್ಯ ಹೋರಾಟದ ಅಡಿಯಲ್ಲಿ ರೈತ ದಲಿತ ಕಾರ್ಮಿಕರಿಗೆ ಸರ್ಕಾರ ಮಾಡುತ್ತಿರುವ ದ್ರೋಹದ ವಿರುದ್ದ ಹೋರಾಟ ರೂಪಿಸಿ ನಿರಂತರವಾಗಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟವು ನಿಮ್ಮೊಂದಿಗೆ ಇನ್ನಷ್ಟು ಸಂಘಟನಾತ್ಮವಾಗಿ ಸಾಥ್ ನೀಡಲಿದೆ” ಎಂದರು.

ಇವರ ಕನ್ನಡ ಭಾಷಣವನ್ನು ರೈತಸಂಘದ ಹಿರಿಯ ಉಪಾಧ್ಯಕ್ಷ ಜಿ.ಟಿ.ರಾಮಸ್ವಾಮಿ ಕನ್ನಡದಿಂದ ಹಿಂದಿಗೆ ಭಾಷಾಂತರ ಮಾಡಿದರು.


ಇದನ್ನೂ ಓದಿ: ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ – ತಮ್ಮ ನಿಲುವು ಸ್ಪಷ್ಟಪಡಿಸಿದ ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...