Homeಚಳವಳಿಮುಂದುವರೆದ ರೈತ ಹೋರಾಟ - ಲಕ್ಷಾಂತರ ಜನಗಳು, ಸಾವಿರಾರು ವಾಹನಗಳು!

ಮುಂದುವರೆದ ರೈತ ಹೋರಾಟ – ಲಕ್ಷಾಂತರ ಜನಗಳು, ಸಾವಿರಾರು ವಾಹನಗಳು!

"ರೈತರ ಮರಣ ಶಾಸನ ಬರೆಯುವ ಮೂರು ಕರಾಳ ಶಾಸನ ರದ್ದಾಗುವವರೆಗೂ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು 541 ಸಂಘಟನೆಗಳ ಒಕ್ಕೂಟದ ಕಿಸಾನ್ ಏಕ್ತಾ ಮೋರ್ಚಾ ತೀರ್ಮಾನಿಸಿದೆ"

- Advertisement -
- Advertisement -

ರೈತರ ಮರಣ ಶಾಸನ ಬರೆಯುವ ಮೂರು ಕರಾಳ ಶಾಸನ ರದ್ದಾಗುವವರೆಗೂ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು 541 ಸಂಘಟನೆಗಳ ಒಕ್ಕೂಟದ ಕಿಸಾನ್ ಏಕ್ತಾ ಮೋರ್ಚಾ ತೀರ್ಮಾನಿಸಿದೆ. ಲಕ್ಷಾಂತರ ಜನರು, ಸಾವಿರಾರು ವಾಹನಗಳು ಈ ಹೋರಾಟದಲ್ಲಿ ಭಾಗಿಯಾಗಿವೆ.

ರೈತ ಹೋರಾಟವನ್ನು ಬೆಂಬಲಿಸಲು ಕರ್ನಾಟಕದಿಂದ ಆಗಮಿಸಿದ್ದ ನಿಯೋಗವು ಇಂದು ದಿಲ್ಲಿಯ ಪಂಜಾಬ್ ಹರಿಯಾಣ ಗಡಿ ಭಾಗವಾದ ಟಿಕ್ರಿಗೆ ಭೇಟಿ ನೀಡಿತು. ಕರ್ನಾಟಕದ ನಿಯೋಗವನ್ನು ಟಿಕ್ರಿ ಗಡಿಯಲ್ಲಿ ಬಿಕೆಯು ಸಂಘಟನೆಯ ಗೆಳೆಯರು ನೂರಾರು ಕಾರ್ಯಕರ್ತರೊಂದಿಗೆ ಬಹದ್ದೂರ್‌ ಘಡ್ ವೃತ್ತದಲ್ಲಿ ಸ್ವಾಗತ ಮಾಡಿದರು. ಬಹದ್ದೂರ್ ಘಡ್ ವೃತ್ತದಿಂದ ಕರ್ನಾಟಕದ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದ ಪ್ರಮುಖರೊಂದಿಗೆ, ಈ ಸಂಘಟನೆಯ ಪ್ರಮುಖರು ಮತ್ತು ನೂರಾರು ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆ ಹಾಕುತ್ತಾ ಕಿ.ಮೀ.ಗಟ್ಟಲೆ ಮೆರವಣಿಗೆ ಹೊರಟು ಪ್ರತಿಭಟನೆಯ ಪ್ರಮುಖ ವೇದಿಕೆಗೆ ತಲುಪಿದೆವು.

ಇಂದು ನಡೆದ ವೇದಿಕೆಯ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 250 ಕ್ಕೂ ಹೆಚ್ಚಿನ ಸಂಘಟನೆಯ ಪ್ರಮುಖರು ಮಾತನಾಡಿದರು. ಮಾತನಾಡಿದ ಎಲ್ಲ ಸಂಘಟನೆಗಳ ಪ್ರಮುಖರು ಮೋದಿ ಸರ್ಕಾರದ ರೈತ-ಕಾರ್ಮಿಕ-ದಲಿತ ವಿರೋಧಿ ನೀತಿಗಳನ್ನು ಖಂಡಿಸಿದರು.

ಇದನ್ನೂ ಓದಿ: 24 ದಲಿತ ಕುಟುಂಬಗಳಿಗೆ ಬಹಿಷ್ಕಾರ – ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರ ವಿರುದ್ಧ ಪ್ರಕರಣ!

“ಜಾರಿಗೆ ತಂದಿರುವ ಕರಾಳ ಕಾನೂನು ರದ್ದು ಮಾಡುವವರೆಗೂ ಹೋರಾಟ ನಿಲ್ಲದು. ಬದಲಿಗೆ ಹೋರಾಟವನ್ನು ಇನ್ನಷ್ಟು ಚುರುಕುಗೊಳಿಸಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಸಿದರು. ಸಂಘಟನೆಯ ಪ್ರಮುಖರು ರೈತರ ಸಮಸ್ಯೆಯ ಜೊತೆಗೆ ದಲಿತ ಕಾರ್ಮಿಕ ಸಮಸ್ಯೆಗಳ ಪರಿಹಾರಕ್ಕೂ ಗಂಭೀರ ಹೋರಾಟ ರೂಪಿಸಲಾಗುವುದು ಎಂದರು.

ವೇದಿಕೆಯಲ್ಲಿ ಕರ್ನಾಟಕ ನಿಯೋಗದ ಪ್ರಮುಖರಲ್ಲಿ ಒಬ್ಬರಾದ ದಲಿತ ಸಂಘಟನೆಯ ಪ್ರಮುಖರಾದ ಗುರುಪ್ರಸಾದ್ ಕೆರೆಗೋಡು ಮಾತನಾಡಿ, “ಉತ್ತರ ಭಾರತದಲ್ಲಿ ರೈತರ ಬೆಳೆ ಮತ್ತು ಬೆಲೆಯನ್ನು ಕಿತ್ತುಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ಬೆಳೆ ಬೆಲೆಯ ಜೊತೆಗೆ ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದಾರೆ. ದೇಶಕ್ಕೆ ಮಾದರಿಯಾದ ದೇವರಾಜು ಅರಸು ಅವರು ಜಾರಿಗೆ ತಂದ ಭೂಸುಧಾರಣಾ ಕಾನೂನು ದೇಶಕ್ಕೆ ಮಾದರಿಯಾಗಿತ್ತು. ಹಾಲಿ ಈ ಕಾನೂನಿಗೆ ತಿದ್ದುಪಡಿತಂದು, ರೈತರಿಂದ ಕಿತ್ತು ಕಾರ್ಪೊರೇಟ್ ಕುಳಗಳಿಗೆ ಹಂಚುತ್ತಿದ್ದಾರೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕದ ಮುಖ್ಯಮಂತ್ರಿ ರೈತ ದ್ರೋಹಿಯಾಗಿದ್ದಾರೆ. ಕರ್ನಾಟಕದಲ್ಲಿ ಈಗಾಗಲೆ ಐಕ್ಯ ಹೋರಾಟದ ಅಡಿಯಲ್ಲಿ ರೈತ ದಲಿತ ಕಾರ್ಮಿಕರಿಗೆ ಸರ್ಕಾರ ಮಾಡುತ್ತಿರುವ ದ್ರೋಹದ ವಿರುದ್ದ ಹೋರಾಟ ರೂಪಿಸಿ ನಿರಂತರವಾಗಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟವು ನಿಮ್ಮೊಂದಿಗೆ ಇನ್ನಷ್ಟು ಸಂಘಟನಾತ್ಮವಾಗಿ ಸಾಥ್ ನೀಡಲಿದೆ” ಎಂದರು.

ಇವರ ಕನ್ನಡ ಭಾಷಣವನ್ನು ರೈತಸಂಘದ ಹಿರಿಯ ಉಪಾಧ್ಯಕ್ಷ ಜಿ.ಟಿ.ರಾಮಸ್ವಾಮಿ ಕನ್ನಡದಿಂದ ಹಿಂದಿಗೆ ಭಾಷಾಂತರ ಮಾಡಿದರು.


ಇದನ್ನೂ ಓದಿ: ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ – ತಮ್ಮ ನಿಲುವು ಸ್ಪಷ್ಟಪಡಿಸಿದ ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...