Homeಕರ್ನಾಟಕಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

- Advertisement -
- Advertisement -

ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 36 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 32.90 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 27 ರೂಪಾಯಿಯಷ್ಟು ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 104ರೂ ದಾಟುತ್ತದೆ. ನಾವು ವಾಹನಗಳನ್ನು ಬಳಸುತ್ತಿಲ್ಲ, ಹೀಗಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ನಮಗೆ ತೊಂದರೆ ಇಲ್ಲ ಎಂದು ಯಾರಾದರೂ ಅಂದುಕೊಂಡರೆ ಅವರ ತಿಳಿವಳಿಕೆ ತಪ್ಪು ಎನ್ನುವುದರಲ್ಲಿ ಎರಡು ಮಾತಿಲ್ಲ. ಬೇಡಿ ಬದುಕುವವರೂ ಸೇರಿದಂತೆ ಈ ದೇಶದ ಪ್ರತಿಯೊಬ್ಬ ಪ್ರಜೆಯ ಜೀವನವೂ ಪ್ರತಿದಿನ ತುಟ್ಟಿಯಾಗುತ್ತಿದೆ.

ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲಿಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ.

ನೇರ ಪರಿಣಾಮ

* ಇಂಧನ ಬೆಲೆ ಏರಿಕೆಯಿಂದಾಗಿ ಬಸ್, ರೈಲು, ಆಟೋ, ಟ್ಯಾಕ್ಸಿ ದರಗಳು ಹೆಚ್ಚಾಗುತ್ತವೆ.

* ಸ್ವಂತ ವಾಹನಕ್ಕೆ ದುಬಾರಿ ಬೆಲೆ ತೆತ್ತು ಪೆಟ್ರೋಲ್ ಹಾಕಿಸಬೇಕಾಗುತ್ತದೆ. ನನ್ನದೇ ಸ್ವಂತ ಉದಾಹರಣೆಯ ಮೂಲಕ ಹೇಳುವುದಾದರೆ 2020ರ ಜೂನ್‌ನಲ್ಲಿ ಬೈಕ್ ಫುಲ್‌ಟ್ಯಾಂಕ್ ಮಾಡಲು 882ರೂ ತಗುಲುತ್ತಿತ್ತು (73.55ರೂ 12ಲೀ). ಆಗಸ್ಟ್ 2021ರಲ್ಲಿ ಫುಲ್‌ಟ್ಯಾಂಕ್ ಮಾಡಲು 1,260ರೂ ತಗುಲುತ್ತಿದೆ (105-12ಲೀ). ಅಂದರೆ 378ರೂ ಹೆಚ್ಚಾಗಿದೆ. ತಿಂಗಳಿಗೆ ಎರಡು ಬಾರಿ ಫುಲ್ ಟ್ಯಾಂಕ್ ಮಾಡಿಸಿದರೆ 756ರೂ ಹೆಚ್ಚು ಪಾವತಿಸಬೇಕಾಗಿದೆ. ಇದು ನನ್ನ ಪರಿಸ್ಥಿತಿಯಾದರೆ ಬಹುದೂರ ಪ್ರಯಾಣಿಸುವವರ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಯೋಚಿಸಿ.

* ಡೀಸೆಲ್ ಬೆಲೆಯಲ್ಲಿನ ಹೆಚ್ಚಳದಿಂದಾಗಿ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತದೆ.

* ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತದೆ.

ಕಳೆದ ಹನ್ನೊಂದು ವರ್ಷಗಳ ಸರಾಸರಿ ದರ (ದೆಹಲಿಯಲ್ಲಿ ಪ್ರತಿ ಲೀಟರ್‌ಗೆ)

ಓಲಾ ಉಬರ್ ಚಾಲಕರ ದುಸ್ಥಿತಿ

ಕೊರೊನಾ ಬರುವ ಮೊದಲು ಡೀಸೆಲ್ ಲೀಟರ್‌ಗೆ ಸುಮಾರು 60ರೂ ಇತ್ತು. 100% ಪ್ಯಾಸೆಂಜರ್‌ಗಳು ಸಿಗುತ್ತಿದ್ದರು. ಪ್ರತಿ ದಿನ, ಶ್ರಮವಹಿಸಿ ಕೆಲಸ ಮಾಡಿ, 1000 ರುಪಾಯಿಗೆ ಡೀಸೆಲ್ ಹಾಕಿಸಿದರೆ ಎಲ್ಲಾ ಖರ್ಚು ಕಳೆದು ಸರಾಸರಿ 1000ರೂನಿಂದ 2000ದವರೆಗೂ ನಮ್ಮ ಡ್ರೈವರ್‌ಗಳು ಲಾಭ ಗಳಿಸುತ್ತಿದ್ದರು. ಈಗ ಡೀಸೆಲ್ ಲೀಟರ್‌ಗೆ 95ರೂ ತಲುಪಿದೆ. ಆದರೆ ಹಲವು ಕಾರಣಗಳಿಂದ 25% ಪ್ಯಾಸೆಂಜರ್‌ಗಳೂ ಸಿಗುತ್ತಿಲ್ಲ. ಈಗ ದಿನವೆಲ್ಲಾ ದುಡಿದರೂ ಡೀಸೆಲ್ ಮತ್ತಿತರ ಎಲ್ಲಾ ಖರ್ಚು ಕಳೆದು 300-500ರೂ ಉಳಿಸುವುದೇ ಕಷ್ಟವಾಗುತ್ತಿದೆ. ಇಂದಿನ ಬೆಲೆ ಏರಿಕೆಯ ದಿನಗಳಲ್ಲಿ ವಾಹನ ಲೋನ್ ಕಟ್ಟಿ ನಮ್ಮ ಕುಟುಂಬವನ್ನು ಸಾಕುವುದು ಹೇಗೆ ಎನ್ನುತ್ತಾರೆ ಓಲಾ-ಉಬರ್ ವಾಹನ ಚಾಲಕರ ಅಸೋಸಿಯೇಷನ್ ಅಧ್ಯಕ್ಷರಾದ ತನ್ವೀರ್.

ನಾವು ಅಂದು ದುಡಿದು ಅಂದು ಬದುಕುವ ಸ್ಥಿತಿಯವರು. ಆದರೆ ಕೊರೊನಾ ಲಾಕ್‌ಡೌನ್ ನಂತರ ಚಾಲಕರ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಹಿಂದೆ ಕಾರು ಓನರ್ ಅಂದ್ರೆ ಗೌರವ ಇತ್ತು. ಈಗ ನಮ್ಮ ಕಾರು ಕೊಂಡುಕೊಳ್ಳಲು ಯಾರೂ ಮುಂದೆ ಬರುತ್ತಿಲ್ಲ. ಇತ್ತ ಬಾಡಿಗೆ ಸಹ ಸಿಗುತ್ತಿಲ್ಲ. ಇನ್ಷುರೆನ್ಸ್ ಹಣ ಕಟ್ಟಲಾಗದೆ, ಲೋನ್ ಕಟ್ಟಲಾಗದೇ ಒದ್ದಾಡುತ್ತಿದ್ದೇವೆ. ನಾವು ಸ್ವಯಂ ಉದ್ಯೋಗ ಮಾಡಿಕೊಂಡು ನಿರುದ್ಯೋಗ ಸಮಸ್ಯೆ ನಿವಾರಿಸುತ್ತಿದ್ದೇವೆ ಎಂಬ ಹೆಮ್ಮೆಯಿತ್ತು. ಬೆಂಗಳೂರಿನಲ್ಲಿ 1 ಲಕ್ಷದಷ್ಟು ಕಾರುಗಳಿದ್ದವು. ಈಗ 30,000 ಇದ್ದರೆ ಹೆಚ್ಚು. ಅರ್ಧ ಸೀಜ್ ಆಗಿವೆ, ಇನ್ನರ್ಧ ಹಳ್ಳಿಗಳಲ್ಲಿವೆ. ಆಟೋಗಳು 50% ನಿಂತು ಹೋಗಿವೆ. ಕೆಲವರು ಹೊಟೆಲ್‌ಗಳಲ್ಲಿ ಕೆಲಸಕ್ಕೆ ಸೇರಿದರೆ ಕೆಲವರು ಬೀದಿಗಳಲ್ಲಿ ಮಾಸ್ಕ್ ಮಾರುತ್ತಿದ್ದಾರೆ. ಡೀಸೆಲ್ ದರ ಕಡಿಮೆ ಇದ್ದರೆ ಬಿಸಿನೆಸ್ ಕಡಿಮೆ ಇದ್ದರೂ ಹೇಗಾದರೂ ಬದುಕಿಕೊಳ್ಳಬಹುದಿತ್ತು. ಆದರೆ ಈಗ ದುಡಿದಿದ್ದರಲ್ಲಿ ಮುಕ್ಕಾಲು ಪಾಲು ಡೀಸೆಲ್‌ಗೆ ಸುರಿಯಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

– ಮುತ್ತುರಾಜು


ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...