Homeಕರ್ನಾಟಕಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

- Advertisement -
- Advertisement -

ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 36 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 32.90 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 27 ರೂಪಾಯಿಯಷ್ಟು ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 104ರೂ ದಾಟುತ್ತದೆ. ನಾವು ವಾಹನಗಳನ್ನು ಬಳಸುತ್ತಿಲ್ಲ, ಹೀಗಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ನಮಗೆ ತೊಂದರೆ ಇಲ್ಲ ಎಂದು ಯಾರಾದರೂ ಅಂದುಕೊಂಡರೆ ಅವರ ತಿಳಿವಳಿಕೆ ತಪ್ಪು ಎನ್ನುವುದರಲ್ಲಿ ಎರಡು ಮಾತಿಲ್ಲ. ಬೇಡಿ ಬದುಕುವವರೂ ಸೇರಿದಂತೆ ಈ ದೇಶದ ಪ್ರತಿಯೊಬ್ಬ ಪ್ರಜೆಯ ಜೀವನವೂ ಪ್ರತಿದಿನ ತುಟ್ಟಿಯಾಗುತ್ತಿದೆ.

ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲಿಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ.

ನೇರ ಪರಿಣಾಮ

* ಇಂಧನ ಬೆಲೆ ಏರಿಕೆಯಿಂದಾಗಿ ಬಸ್, ರೈಲು, ಆಟೋ, ಟ್ಯಾಕ್ಸಿ ದರಗಳು ಹೆಚ್ಚಾಗುತ್ತವೆ.

* ಸ್ವಂತ ವಾಹನಕ್ಕೆ ದುಬಾರಿ ಬೆಲೆ ತೆತ್ತು ಪೆಟ್ರೋಲ್ ಹಾಕಿಸಬೇಕಾಗುತ್ತದೆ. ನನ್ನದೇ ಸ್ವಂತ ಉದಾಹರಣೆಯ ಮೂಲಕ ಹೇಳುವುದಾದರೆ 2020ರ ಜೂನ್‌ನಲ್ಲಿ ಬೈಕ್ ಫುಲ್‌ಟ್ಯಾಂಕ್ ಮಾಡಲು 882ರೂ ತಗುಲುತ್ತಿತ್ತು (73.55ರೂ 12ಲೀ). ಆಗಸ್ಟ್ 2021ರಲ್ಲಿ ಫುಲ್‌ಟ್ಯಾಂಕ್ ಮಾಡಲು 1,260ರೂ ತಗುಲುತ್ತಿದೆ (105-12ಲೀ). ಅಂದರೆ 378ರೂ ಹೆಚ್ಚಾಗಿದೆ. ತಿಂಗಳಿಗೆ ಎರಡು ಬಾರಿ ಫುಲ್ ಟ್ಯಾಂಕ್ ಮಾಡಿಸಿದರೆ 756ರೂ ಹೆಚ್ಚು ಪಾವತಿಸಬೇಕಾಗಿದೆ. ಇದು ನನ್ನ ಪರಿಸ್ಥಿತಿಯಾದರೆ ಬಹುದೂರ ಪ್ರಯಾಣಿಸುವವರ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಯೋಚಿಸಿ.

* ಡೀಸೆಲ್ ಬೆಲೆಯಲ್ಲಿನ ಹೆಚ್ಚಳದಿಂದಾಗಿ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತದೆ.

* ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತದೆ.

ಕಳೆದ ಹನ್ನೊಂದು ವರ್ಷಗಳ ಸರಾಸರಿ ದರ (ದೆಹಲಿಯಲ್ಲಿ ಪ್ರತಿ ಲೀಟರ್‌ಗೆ)

ಓಲಾ ಉಬರ್ ಚಾಲಕರ ದುಸ್ಥಿತಿ

ಕೊರೊನಾ ಬರುವ ಮೊದಲು ಡೀಸೆಲ್ ಲೀಟರ್‌ಗೆ ಸುಮಾರು 60ರೂ ಇತ್ತು. 100% ಪ್ಯಾಸೆಂಜರ್‌ಗಳು ಸಿಗುತ್ತಿದ್ದರು. ಪ್ರತಿ ದಿನ, ಶ್ರಮವಹಿಸಿ ಕೆಲಸ ಮಾಡಿ, 1000 ರುಪಾಯಿಗೆ ಡೀಸೆಲ್ ಹಾಕಿಸಿದರೆ ಎಲ್ಲಾ ಖರ್ಚು ಕಳೆದು ಸರಾಸರಿ 1000ರೂನಿಂದ 2000ದವರೆಗೂ ನಮ್ಮ ಡ್ರೈವರ್‌ಗಳು ಲಾಭ ಗಳಿಸುತ್ತಿದ್ದರು. ಈಗ ಡೀಸೆಲ್ ಲೀಟರ್‌ಗೆ 95ರೂ ತಲುಪಿದೆ. ಆದರೆ ಹಲವು ಕಾರಣಗಳಿಂದ 25% ಪ್ಯಾಸೆಂಜರ್‌ಗಳೂ ಸಿಗುತ್ತಿಲ್ಲ. ಈಗ ದಿನವೆಲ್ಲಾ ದುಡಿದರೂ ಡೀಸೆಲ್ ಮತ್ತಿತರ ಎಲ್ಲಾ ಖರ್ಚು ಕಳೆದು 300-500ರೂ ಉಳಿಸುವುದೇ ಕಷ್ಟವಾಗುತ್ತಿದೆ. ಇಂದಿನ ಬೆಲೆ ಏರಿಕೆಯ ದಿನಗಳಲ್ಲಿ ವಾಹನ ಲೋನ್ ಕಟ್ಟಿ ನಮ್ಮ ಕುಟುಂಬವನ್ನು ಸಾಕುವುದು ಹೇಗೆ ಎನ್ನುತ್ತಾರೆ ಓಲಾ-ಉಬರ್ ವಾಹನ ಚಾಲಕರ ಅಸೋಸಿಯೇಷನ್ ಅಧ್ಯಕ್ಷರಾದ ತನ್ವೀರ್.

ನಾವು ಅಂದು ದುಡಿದು ಅಂದು ಬದುಕುವ ಸ್ಥಿತಿಯವರು. ಆದರೆ ಕೊರೊನಾ ಲಾಕ್‌ಡೌನ್ ನಂತರ ಚಾಲಕರ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಹಿಂದೆ ಕಾರು ಓನರ್ ಅಂದ್ರೆ ಗೌರವ ಇತ್ತು. ಈಗ ನಮ್ಮ ಕಾರು ಕೊಂಡುಕೊಳ್ಳಲು ಯಾರೂ ಮುಂದೆ ಬರುತ್ತಿಲ್ಲ. ಇತ್ತ ಬಾಡಿಗೆ ಸಹ ಸಿಗುತ್ತಿಲ್ಲ. ಇನ್ಷುರೆನ್ಸ್ ಹಣ ಕಟ್ಟಲಾಗದೆ, ಲೋನ್ ಕಟ್ಟಲಾಗದೇ ಒದ್ದಾಡುತ್ತಿದ್ದೇವೆ. ನಾವು ಸ್ವಯಂ ಉದ್ಯೋಗ ಮಾಡಿಕೊಂಡು ನಿರುದ್ಯೋಗ ಸಮಸ್ಯೆ ನಿವಾರಿಸುತ್ತಿದ್ದೇವೆ ಎಂಬ ಹೆಮ್ಮೆಯಿತ್ತು. ಬೆಂಗಳೂರಿನಲ್ಲಿ 1 ಲಕ್ಷದಷ್ಟು ಕಾರುಗಳಿದ್ದವು. ಈಗ 30,000 ಇದ್ದರೆ ಹೆಚ್ಚು. ಅರ್ಧ ಸೀಜ್ ಆಗಿವೆ, ಇನ್ನರ್ಧ ಹಳ್ಳಿಗಳಲ್ಲಿವೆ. ಆಟೋಗಳು 50% ನಿಂತು ಹೋಗಿವೆ. ಕೆಲವರು ಹೊಟೆಲ್‌ಗಳಲ್ಲಿ ಕೆಲಸಕ್ಕೆ ಸೇರಿದರೆ ಕೆಲವರು ಬೀದಿಗಳಲ್ಲಿ ಮಾಸ್ಕ್ ಮಾರುತ್ತಿದ್ದಾರೆ. ಡೀಸೆಲ್ ದರ ಕಡಿಮೆ ಇದ್ದರೆ ಬಿಸಿನೆಸ್ ಕಡಿಮೆ ಇದ್ದರೂ ಹೇಗಾದರೂ ಬದುಕಿಕೊಳ್ಳಬಹುದಿತ್ತು. ಆದರೆ ಈಗ ದುಡಿದಿದ್ದರಲ್ಲಿ ಮುಕ್ಕಾಲು ಪಾಲು ಡೀಸೆಲ್‌ಗೆ ಸುರಿಯಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

– ಮುತ್ತುರಾಜು


ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...