Homeಕರ್ನಾಟಕಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

- Advertisement -
- Advertisement -

ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 36 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 32.90 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 27 ರೂಪಾಯಿಯಷ್ಟು ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 104ರೂ ದಾಟುತ್ತದೆ. ನಾವು ವಾಹನಗಳನ್ನು ಬಳಸುತ್ತಿಲ್ಲ, ಹೀಗಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ನಮಗೆ ತೊಂದರೆ ಇಲ್ಲ ಎಂದು ಯಾರಾದರೂ ಅಂದುಕೊಂಡರೆ ಅವರ ತಿಳಿವಳಿಕೆ ತಪ್ಪು ಎನ್ನುವುದರಲ್ಲಿ ಎರಡು ಮಾತಿಲ್ಲ. ಬೇಡಿ ಬದುಕುವವರೂ ಸೇರಿದಂತೆ ಈ ದೇಶದ ಪ್ರತಿಯೊಬ್ಬ ಪ್ರಜೆಯ ಜೀವನವೂ ಪ್ರತಿದಿನ ತುಟ್ಟಿಯಾಗುತ್ತಿದೆ.

ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲಿಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ.

ನೇರ ಪರಿಣಾಮ

* ಇಂಧನ ಬೆಲೆ ಏರಿಕೆಯಿಂದಾಗಿ ಬಸ್, ರೈಲು, ಆಟೋ, ಟ್ಯಾಕ್ಸಿ ದರಗಳು ಹೆಚ್ಚಾಗುತ್ತವೆ.

* ಸ್ವಂತ ವಾಹನಕ್ಕೆ ದುಬಾರಿ ಬೆಲೆ ತೆತ್ತು ಪೆಟ್ರೋಲ್ ಹಾಕಿಸಬೇಕಾಗುತ್ತದೆ. ನನ್ನದೇ ಸ್ವಂತ ಉದಾಹರಣೆಯ ಮೂಲಕ ಹೇಳುವುದಾದರೆ 2020ರ ಜೂನ್‌ನಲ್ಲಿ ಬೈಕ್ ಫುಲ್‌ಟ್ಯಾಂಕ್ ಮಾಡಲು 882ರೂ ತಗುಲುತ್ತಿತ್ತು (73.55ರೂ 12ಲೀ). ಆಗಸ್ಟ್ 2021ರಲ್ಲಿ ಫುಲ್‌ಟ್ಯಾಂಕ್ ಮಾಡಲು 1,260ರೂ ತಗುಲುತ್ತಿದೆ (105-12ಲೀ). ಅಂದರೆ 378ರೂ ಹೆಚ್ಚಾಗಿದೆ. ತಿಂಗಳಿಗೆ ಎರಡು ಬಾರಿ ಫುಲ್ ಟ್ಯಾಂಕ್ ಮಾಡಿಸಿದರೆ 756ರೂ ಹೆಚ್ಚು ಪಾವತಿಸಬೇಕಾಗಿದೆ. ಇದು ನನ್ನ ಪರಿಸ್ಥಿತಿಯಾದರೆ ಬಹುದೂರ ಪ್ರಯಾಣಿಸುವವರ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಯೋಚಿಸಿ.

* ಡೀಸೆಲ್ ಬೆಲೆಯಲ್ಲಿನ ಹೆಚ್ಚಳದಿಂದಾಗಿ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತದೆ.

* ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತದೆ.

ಕಳೆದ ಹನ್ನೊಂದು ವರ್ಷಗಳ ಸರಾಸರಿ ದರ (ದೆಹಲಿಯಲ್ಲಿ ಪ್ರತಿ ಲೀಟರ್‌ಗೆ)

ಓಲಾ ಉಬರ್ ಚಾಲಕರ ದುಸ್ಥಿತಿ

ಕೊರೊನಾ ಬರುವ ಮೊದಲು ಡೀಸೆಲ್ ಲೀಟರ್‌ಗೆ ಸುಮಾರು 60ರೂ ಇತ್ತು. 100% ಪ್ಯಾಸೆಂಜರ್‌ಗಳು ಸಿಗುತ್ತಿದ್ದರು. ಪ್ರತಿ ದಿನ, ಶ್ರಮವಹಿಸಿ ಕೆಲಸ ಮಾಡಿ, 1000 ರುಪಾಯಿಗೆ ಡೀಸೆಲ್ ಹಾಕಿಸಿದರೆ ಎಲ್ಲಾ ಖರ್ಚು ಕಳೆದು ಸರಾಸರಿ 1000ರೂನಿಂದ 2000ದವರೆಗೂ ನಮ್ಮ ಡ್ರೈವರ್‌ಗಳು ಲಾಭ ಗಳಿಸುತ್ತಿದ್ದರು. ಈಗ ಡೀಸೆಲ್ ಲೀಟರ್‌ಗೆ 95ರೂ ತಲುಪಿದೆ. ಆದರೆ ಹಲವು ಕಾರಣಗಳಿಂದ 25% ಪ್ಯಾಸೆಂಜರ್‌ಗಳೂ ಸಿಗುತ್ತಿಲ್ಲ. ಈಗ ದಿನವೆಲ್ಲಾ ದುಡಿದರೂ ಡೀಸೆಲ್ ಮತ್ತಿತರ ಎಲ್ಲಾ ಖರ್ಚು ಕಳೆದು 300-500ರೂ ಉಳಿಸುವುದೇ ಕಷ್ಟವಾಗುತ್ತಿದೆ. ಇಂದಿನ ಬೆಲೆ ಏರಿಕೆಯ ದಿನಗಳಲ್ಲಿ ವಾಹನ ಲೋನ್ ಕಟ್ಟಿ ನಮ್ಮ ಕುಟುಂಬವನ್ನು ಸಾಕುವುದು ಹೇಗೆ ಎನ್ನುತ್ತಾರೆ ಓಲಾ-ಉಬರ್ ವಾಹನ ಚಾಲಕರ ಅಸೋಸಿಯೇಷನ್ ಅಧ್ಯಕ್ಷರಾದ ತನ್ವೀರ್.

ನಾವು ಅಂದು ದುಡಿದು ಅಂದು ಬದುಕುವ ಸ್ಥಿತಿಯವರು. ಆದರೆ ಕೊರೊನಾ ಲಾಕ್‌ಡೌನ್ ನಂತರ ಚಾಲಕರ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಹಿಂದೆ ಕಾರು ಓನರ್ ಅಂದ್ರೆ ಗೌರವ ಇತ್ತು. ಈಗ ನಮ್ಮ ಕಾರು ಕೊಂಡುಕೊಳ್ಳಲು ಯಾರೂ ಮುಂದೆ ಬರುತ್ತಿಲ್ಲ. ಇತ್ತ ಬಾಡಿಗೆ ಸಹ ಸಿಗುತ್ತಿಲ್ಲ. ಇನ್ಷುರೆನ್ಸ್ ಹಣ ಕಟ್ಟಲಾಗದೆ, ಲೋನ್ ಕಟ್ಟಲಾಗದೇ ಒದ್ದಾಡುತ್ತಿದ್ದೇವೆ. ನಾವು ಸ್ವಯಂ ಉದ್ಯೋಗ ಮಾಡಿಕೊಂಡು ನಿರುದ್ಯೋಗ ಸಮಸ್ಯೆ ನಿವಾರಿಸುತ್ತಿದ್ದೇವೆ ಎಂಬ ಹೆಮ್ಮೆಯಿತ್ತು. ಬೆಂಗಳೂರಿನಲ್ಲಿ 1 ಲಕ್ಷದಷ್ಟು ಕಾರುಗಳಿದ್ದವು. ಈಗ 30,000 ಇದ್ದರೆ ಹೆಚ್ಚು. ಅರ್ಧ ಸೀಜ್ ಆಗಿವೆ, ಇನ್ನರ್ಧ ಹಳ್ಳಿಗಳಲ್ಲಿವೆ. ಆಟೋಗಳು 50% ನಿಂತು ಹೋಗಿವೆ. ಕೆಲವರು ಹೊಟೆಲ್‌ಗಳಲ್ಲಿ ಕೆಲಸಕ್ಕೆ ಸೇರಿದರೆ ಕೆಲವರು ಬೀದಿಗಳಲ್ಲಿ ಮಾಸ್ಕ್ ಮಾರುತ್ತಿದ್ದಾರೆ. ಡೀಸೆಲ್ ದರ ಕಡಿಮೆ ಇದ್ದರೆ ಬಿಸಿನೆಸ್ ಕಡಿಮೆ ಇದ್ದರೂ ಹೇಗಾದರೂ ಬದುಕಿಕೊಳ್ಳಬಹುದಿತ್ತು. ಆದರೆ ಈಗ ದುಡಿದಿದ್ದರಲ್ಲಿ ಮುಕ್ಕಾಲು ಪಾಲು ಡೀಸೆಲ್‌ಗೆ ಸುರಿಯಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

– ಮುತ್ತುರಾಜು


ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...