Homeಕರ್ನಾಟಕಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

- Advertisement -
- Advertisement -

ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 36 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 32.90 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 27 ರೂಪಾಯಿಯಷ್ಟು ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 104ರೂ ದಾಟುತ್ತದೆ. ನಾವು ವಾಹನಗಳನ್ನು ಬಳಸುತ್ತಿಲ್ಲ, ಹೀಗಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ನಮಗೆ ತೊಂದರೆ ಇಲ್ಲ ಎಂದು ಯಾರಾದರೂ ಅಂದುಕೊಂಡರೆ ಅವರ ತಿಳಿವಳಿಕೆ ತಪ್ಪು ಎನ್ನುವುದರಲ್ಲಿ ಎರಡು ಮಾತಿಲ್ಲ. ಬೇಡಿ ಬದುಕುವವರೂ ಸೇರಿದಂತೆ ಈ ದೇಶದ ಪ್ರತಿಯೊಬ್ಬ ಪ್ರಜೆಯ ಜೀವನವೂ ಪ್ರತಿದಿನ ತುಟ್ಟಿಯಾಗುತ್ತಿದೆ.

ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲಿಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ.

ನೇರ ಪರಿಣಾಮ

* ಇಂಧನ ಬೆಲೆ ಏರಿಕೆಯಿಂದಾಗಿ ಬಸ್, ರೈಲು, ಆಟೋ, ಟ್ಯಾಕ್ಸಿ ದರಗಳು ಹೆಚ್ಚಾಗುತ್ತವೆ.

* ಸ್ವಂತ ವಾಹನಕ್ಕೆ ದುಬಾರಿ ಬೆಲೆ ತೆತ್ತು ಪೆಟ್ರೋಲ್ ಹಾಕಿಸಬೇಕಾಗುತ್ತದೆ. ನನ್ನದೇ ಸ್ವಂತ ಉದಾಹರಣೆಯ ಮೂಲಕ ಹೇಳುವುದಾದರೆ 2020ರ ಜೂನ್‌ನಲ್ಲಿ ಬೈಕ್ ಫುಲ್‌ಟ್ಯಾಂಕ್ ಮಾಡಲು 882ರೂ ತಗುಲುತ್ತಿತ್ತು (73.55ರೂ 12ಲೀ). ಆಗಸ್ಟ್ 2021ರಲ್ಲಿ ಫುಲ್‌ಟ್ಯಾಂಕ್ ಮಾಡಲು 1,260ರೂ ತಗುಲುತ್ತಿದೆ (105-12ಲೀ). ಅಂದರೆ 378ರೂ ಹೆಚ್ಚಾಗಿದೆ. ತಿಂಗಳಿಗೆ ಎರಡು ಬಾರಿ ಫುಲ್ ಟ್ಯಾಂಕ್ ಮಾಡಿಸಿದರೆ 756ರೂ ಹೆಚ್ಚು ಪಾವತಿಸಬೇಕಾಗಿದೆ. ಇದು ನನ್ನ ಪರಿಸ್ಥಿತಿಯಾದರೆ ಬಹುದೂರ ಪ್ರಯಾಣಿಸುವವರ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಯೋಚಿಸಿ.

* ಡೀಸೆಲ್ ಬೆಲೆಯಲ್ಲಿನ ಹೆಚ್ಚಳದಿಂದಾಗಿ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತದೆ.

* ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತದೆ.

ಕಳೆದ ಹನ್ನೊಂದು ವರ್ಷಗಳ ಸರಾಸರಿ ದರ (ದೆಹಲಿಯಲ್ಲಿ ಪ್ರತಿ ಲೀಟರ್‌ಗೆ)

ಓಲಾ ಉಬರ್ ಚಾಲಕರ ದುಸ್ಥಿತಿ

ಕೊರೊನಾ ಬರುವ ಮೊದಲು ಡೀಸೆಲ್ ಲೀಟರ್‌ಗೆ ಸುಮಾರು 60ರೂ ಇತ್ತು. 100% ಪ್ಯಾಸೆಂಜರ್‌ಗಳು ಸಿಗುತ್ತಿದ್ದರು. ಪ್ರತಿ ದಿನ, ಶ್ರಮವಹಿಸಿ ಕೆಲಸ ಮಾಡಿ, 1000 ರುಪಾಯಿಗೆ ಡೀಸೆಲ್ ಹಾಕಿಸಿದರೆ ಎಲ್ಲಾ ಖರ್ಚು ಕಳೆದು ಸರಾಸರಿ 1000ರೂನಿಂದ 2000ದವರೆಗೂ ನಮ್ಮ ಡ್ರೈವರ್‌ಗಳು ಲಾಭ ಗಳಿಸುತ್ತಿದ್ದರು. ಈಗ ಡೀಸೆಲ್ ಲೀಟರ್‌ಗೆ 95ರೂ ತಲುಪಿದೆ. ಆದರೆ ಹಲವು ಕಾರಣಗಳಿಂದ 25% ಪ್ಯಾಸೆಂಜರ್‌ಗಳೂ ಸಿಗುತ್ತಿಲ್ಲ. ಈಗ ದಿನವೆಲ್ಲಾ ದುಡಿದರೂ ಡೀಸೆಲ್ ಮತ್ತಿತರ ಎಲ್ಲಾ ಖರ್ಚು ಕಳೆದು 300-500ರೂ ಉಳಿಸುವುದೇ ಕಷ್ಟವಾಗುತ್ತಿದೆ. ಇಂದಿನ ಬೆಲೆ ಏರಿಕೆಯ ದಿನಗಳಲ್ಲಿ ವಾಹನ ಲೋನ್ ಕಟ್ಟಿ ನಮ್ಮ ಕುಟುಂಬವನ್ನು ಸಾಕುವುದು ಹೇಗೆ ಎನ್ನುತ್ತಾರೆ ಓಲಾ-ಉಬರ್ ವಾಹನ ಚಾಲಕರ ಅಸೋಸಿಯೇಷನ್ ಅಧ್ಯಕ್ಷರಾದ ತನ್ವೀರ್.

ನಾವು ಅಂದು ದುಡಿದು ಅಂದು ಬದುಕುವ ಸ್ಥಿತಿಯವರು. ಆದರೆ ಕೊರೊನಾ ಲಾಕ್‌ಡೌನ್ ನಂತರ ಚಾಲಕರ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಹಿಂದೆ ಕಾರು ಓನರ್ ಅಂದ್ರೆ ಗೌರವ ಇತ್ತು. ಈಗ ನಮ್ಮ ಕಾರು ಕೊಂಡುಕೊಳ್ಳಲು ಯಾರೂ ಮುಂದೆ ಬರುತ್ತಿಲ್ಲ. ಇತ್ತ ಬಾಡಿಗೆ ಸಹ ಸಿಗುತ್ತಿಲ್ಲ. ಇನ್ಷುರೆನ್ಸ್ ಹಣ ಕಟ್ಟಲಾಗದೆ, ಲೋನ್ ಕಟ್ಟಲಾಗದೇ ಒದ್ದಾಡುತ್ತಿದ್ದೇವೆ. ನಾವು ಸ್ವಯಂ ಉದ್ಯೋಗ ಮಾಡಿಕೊಂಡು ನಿರುದ್ಯೋಗ ಸಮಸ್ಯೆ ನಿವಾರಿಸುತ್ತಿದ್ದೇವೆ ಎಂಬ ಹೆಮ್ಮೆಯಿತ್ತು. ಬೆಂಗಳೂರಿನಲ್ಲಿ 1 ಲಕ್ಷದಷ್ಟು ಕಾರುಗಳಿದ್ದವು. ಈಗ 30,000 ಇದ್ದರೆ ಹೆಚ್ಚು. ಅರ್ಧ ಸೀಜ್ ಆಗಿವೆ, ಇನ್ನರ್ಧ ಹಳ್ಳಿಗಳಲ್ಲಿವೆ. ಆಟೋಗಳು 50% ನಿಂತು ಹೋಗಿವೆ. ಕೆಲವರು ಹೊಟೆಲ್‌ಗಳಲ್ಲಿ ಕೆಲಸಕ್ಕೆ ಸೇರಿದರೆ ಕೆಲವರು ಬೀದಿಗಳಲ್ಲಿ ಮಾಸ್ಕ್ ಮಾರುತ್ತಿದ್ದಾರೆ. ಡೀಸೆಲ್ ದರ ಕಡಿಮೆ ಇದ್ದರೆ ಬಿಸಿನೆಸ್ ಕಡಿಮೆ ಇದ್ದರೂ ಹೇಗಾದರೂ ಬದುಕಿಕೊಳ್ಳಬಹುದಿತ್ತು. ಆದರೆ ಈಗ ದುಡಿದಿದ್ದರಲ್ಲಿ ಮುಕ್ಕಾಲು ಪಾಲು ಡೀಸೆಲ್‌ಗೆ ಸುರಿಯಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

– ಮುತ್ತುರಾಜು


ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...