Homeಕರ್ನಾಟಕಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

ಬೆಲೆ ಏರಿಕೆ-ಬಸವಳಿದ ಸಾಮಾನ್ಯ; ಪೆಟ್ರೋಲ್-ಡೀಸೆಲ್ ದರದಲ್ಲಿ ನಿರಂತರ ಏರಿಕೆ; ಬಡತನದತ್ತ ಭಾರತ

- Advertisement -
- Advertisement -

ಒಂದು ಲೀಟರ್ ಪೆಟ್ರೋಲ್‌ನ ಮೂಲ ಬೆಲೆ 36 ರೂಪಾಯಿಗಳಿದ್ದರೆ ಅದರ ಮೇಲೆ ಕೇಂದ್ರ ಸರ್ಕಾರವೊಂದೇ 32.90 ರೂ ಅಬಕಾರಿ ಸುಂಕ ವಿಧಿಸುತ್ತದೆ. ರಾಜ್ಯಗಳು ಸುಮಾರು 27 ರೂಪಾಯಿಯಷ್ಟು ತೆರಿಗೆ ವಿಧಿಸುತ್ತವೆ. ಸಾಗಣೆ, ಸಂಸ್ಕರಣೆ ಮತ್ತು ಡೀಲರ್ ಕಮಿಷನ್ 8ರೂ ಆಗುತ್ತದೆ. ಅಲ್ಲಿಗೆ ಪೆಟ್ರೋಲ್ ಬೆಲೆ 104ರೂ ದಾಟುತ್ತದೆ. ನಾವು ವಾಹನಗಳನ್ನು ಬಳಸುತ್ತಿಲ್ಲ, ಹೀಗಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ನಮಗೆ ತೊಂದರೆ ಇಲ್ಲ ಎಂದು ಯಾರಾದರೂ ಅಂದುಕೊಂಡರೆ ಅವರ ತಿಳಿವಳಿಕೆ ತಪ್ಪು ಎನ್ನುವುದರಲ್ಲಿ ಎರಡು ಮಾತಿಲ್ಲ. ಬೇಡಿ ಬದುಕುವವರೂ ಸೇರಿದಂತೆ ಈ ದೇಶದ ಪ್ರತಿಯೊಬ್ಬ ಪ್ರಜೆಯ ಜೀವನವೂ ಪ್ರತಿದಿನ ತುಟ್ಟಿಯಾಗುತ್ತಿದೆ.

ಕರ್ನಾಟಕದಲ್ಲಿ 2 ಕೋಟಿಗೂ ಅಧಿಕ ನೋಂದಾಯಿತ ವಾಹನಗಳಿವೆ. ಇವುಗಳ ಮಾಲಿಕರು ನೇರವಾಗಿ ಪೆಟ್ರೋಲ್ ಬೆಲೆ ಏರಿಕೆಯಿಂದ ಬಾಧಿತರಾದರೆ ಕರ್ನಾಟಕದ ಉಳಿದ 5 ಕೋಟಿ ಜನರು ಸಹ ಪೆಟ್ರೋಲ್ ಬೆಲೆ ಏರಿಕೆಯ ದುಷ್ಪರಿಣಾಮಗಳನ್ನು ಅನುಭವಿಸಬೇಕಾಗಿದೆ.

ನೇರ ಪರಿಣಾಮ

* ಇಂಧನ ಬೆಲೆ ಏರಿಕೆಯಿಂದಾಗಿ ಬಸ್, ರೈಲು, ಆಟೋ, ಟ್ಯಾಕ್ಸಿ ದರಗಳು ಹೆಚ್ಚಾಗುತ್ತವೆ.

* ಸ್ವಂತ ವಾಹನಕ್ಕೆ ದುಬಾರಿ ಬೆಲೆ ತೆತ್ತು ಪೆಟ್ರೋಲ್ ಹಾಕಿಸಬೇಕಾಗುತ್ತದೆ. ನನ್ನದೇ ಸ್ವಂತ ಉದಾಹರಣೆಯ ಮೂಲಕ ಹೇಳುವುದಾದರೆ 2020ರ ಜೂನ್‌ನಲ್ಲಿ ಬೈಕ್ ಫುಲ್‌ಟ್ಯಾಂಕ್ ಮಾಡಲು 882ರೂ ತಗುಲುತ್ತಿತ್ತು (73.55ರೂ 12ಲೀ). ಆಗಸ್ಟ್ 2021ರಲ್ಲಿ ಫುಲ್‌ಟ್ಯಾಂಕ್ ಮಾಡಲು 1,260ರೂ ತಗುಲುತ್ತಿದೆ (105-12ಲೀ). ಅಂದರೆ 378ರೂ ಹೆಚ್ಚಾಗಿದೆ. ತಿಂಗಳಿಗೆ ಎರಡು ಬಾರಿ ಫುಲ್ ಟ್ಯಾಂಕ್ ಮಾಡಿಸಿದರೆ 756ರೂ ಹೆಚ್ಚು ಪಾವತಿಸಬೇಕಾಗಿದೆ. ಇದು ನನ್ನ ಪರಿಸ್ಥಿತಿಯಾದರೆ ಬಹುದೂರ ಪ್ರಯಾಣಿಸುವವರ ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಯೋಚಿಸಿ.

* ಡೀಸೆಲ್ ಬೆಲೆಯಲ್ಲಿನ ಹೆಚ್ಚಳದಿಂದಾಗಿ ಎಲ್ಲಾ ಸಾಗಣೆ ವಾಹನಗಳು ಬಾಡಿಗೆ ಏರಿಸಬೇಕಾಗುತ್ತದೆ. ಇದರಿಂದ ಆಹಾರ, ತರಕಾರಿ, ದಿನಸಿ, ಹಣ್ಣು ಸೇರಿದಂತೆ ದಿನಬಳಕೆಯ ಪ್ರತಿಯೊಂದು ವಸ್ತುಗಳ ಬೆಲೆ ಏರುತ್ತದೆ.

* ಟ್ರ್ಯಾಕ್ಟರ್, ಟಿಲ್ಲರ್, ಲಗೇಜ್ ವಾಹನಗಳಿಗೆ ಡೀಸೆಲ್ ಬೇಕಿರುವುದರಿಂದ ಕೃಷಿಯ ಮೇಲಿನ ಹೂಡಿಕೆ ಹೆಚ್ಚಾಗುತ್ತದೆ. ರೈತರಿಗೆ ಹೊರೆಯಾಗುತ್ತದೆ.

ಕಳೆದ ಹನ್ನೊಂದು ವರ್ಷಗಳ ಸರಾಸರಿ ದರ (ದೆಹಲಿಯಲ್ಲಿ ಪ್ರತಿ ಲೀಟರ್‌ಗೆ)

ಓಲಾ ಉಬರ್ ಚಾಲಕರ ದುಸ್ಥಿತಿ

ಕೊರೊನಾ ಬರುವ ಮೊದಲು ಡೀಸೆಲ್ ಲೀಟರ್‌ಗೆ ಸುಮಾರು 60ರೂ ಇತ್ತು. 100% ಪ್ಯಾಸೆಂಜರ್‌ಗಳು ಸಿಗುತ್ತಿದ್ದರು. ಪ್ರತಿ ದಿನ, ಶ್ರಮವಹಿಸಿ ಕೆಲಸ ಮಾಡಿ, 1000 ರುಪಾಯಿಗೆ ಡೀಸೆಲ್ ಹಾಕಿಸಿದರೆ ಎಲ್ಲಾ ಖರ್ಚು ಕಳೆದು ಸರಾಸರಿ 1000ರೂನಿಂದ 2000ದವರೆಗೂ ನಮ್ಮ ಡ್ರೈವರ್‌ಗಳು ಲಾಭ ಗಳಿಸುತ್ತಿದ್ದರು. ಈಗ ಡೀಸೆಲ್ ಲೀಟರ್‌ಗೆ 95ರೂ ತಲುಪಿದೆ. ಆದರೆ ಹಲವು ಕಾರಣಗಳಿಂದ 25% ಪ್ಯಾಸೆಂಜರ್‌ಗಳೂ ಸಿಗುತ್ತಿಲ್ಲ. ಈಗ ದಿನವೆಲ್ಲಾ ದುಡಿದರೂ ಡೀಸೆಲ್ ಮತ್ತಿತರ ಎಲ್ಲಾ ಖರ್ಚು ಕಳೆದು 300-500ರೂ ಉಳಿಸುವುದೇ ಕಷ್ಟವಾಗುತ್ತಿದೆ. ಇಂದಿನ ಬೆಲೆ ಏರಿಕೆಯ ದಿನಗಳಲ್ಲಿ ವಾಹನ ಲೋನ್ ಕಟ್ಟಿ ನಮ್ಮ ಕುಟುಂಬವನ್ನು ಸಾಕುವುದು ಹೇಗೆ ಎನ್ನುತ್ತಾರೆ ಓಲಾ-ಉಬರ್ ವಾಹನ ಚಾಲಕರ ಅಸೋಸಿಯೇಷನ್ ಅಧ್ಯಕ್ಷರಾದ ತನ್ವೀರ್.

ನಾವು ಅಂದು ದುಡಿದು ಅಂದು ಬದುಕುವ ಸ್ಥಿತಿಯವರು. ಆದರೆ ಕೊರೊನಾ ಲಾಕ್‌ಡೌನ್ ನಂತರ ಚಾಲಕರ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಹಿಂದೆ ಕಾರು ಓನರ್ ಅಂದ್ರೆ ಗೌರವ ಇತ್ತು. ಈಗ ನಮ್ಮ ಕಾರು ಕೊಂಡುಕೊಳ್ಳಲು ಯಾರೂ ಮುಂದೆ ಬರುತ್ತಿಲ್ಲ. ಇತ್ತ ಬಾಡಿಗೆ ಸಹ ಸಿಗುತ್ತಿಲ್ಲ. ಇನ್ಷುರೆನ್ಸ್ ಹಣ ಕಟ್ಟಲಾಗದೆ, ಲೋನ್ ಕಟ್ಟಲಾಗದೇ ಒದ್ದಾಡುತ್ತಿದ್ದೇವೆ. ನಾವು ಸ್ವಯಂ ಉದ್ಯೋಗ ಮಾಡಿಕೊಂಡು ನಿರುದ್ಯೋಗ ಸಮಸ್ಯೆ ನಿವಾರಿಸುತ್ತಿದ್ದೇವೆ ಎಂಬ ಹೆಮ್ಮೆಯಿತ್ತು. ಬೆಂಗಳೂರಿನಲ್ಲಿ 1 ಲಕ್ಷದಷ್ಟು ಕಾರುಗಳಿದ್ದವು. ಈಗ 30,000 ಇದ್ದರೆ ಹೆಚ್ಚು. ಅರ್ಧ ಸೀಜ್ ಆಗಿವೆ, ಇನ್ನರ್ಧ ಹಳ್ಳಿಗಳಲ್ಲಿವೆ. ಆಟೋಗಳು 50% ನಿಂತು ಹೋಗಿವೆ. ಕೆಲವರು ಹೊಟೆಲ್‌ಗಳಲ್ಲಿ ಕೆಲಸಕ್ಕೆ ಸೇರಿದರೆ ಕೆಲವರು ಬೀದಿಗಳಲ್ಲಿ ಮಾಸ್ಕ್ ಮಾರುತ್ತಿದ್ದಾರೆ. ಡೀಸೆಲ್ ದರ ಕಡಿಮೆ ಇದ್ದರೆ ಬಿಸಿನೆಸ್ ಕಡಿಮೆ ಇದ್ದರೂ ಹೇಗಾದರೂ ಬದುಕಿಕೊಳ್ಳಬಹುದಿತ್ತು. ಆದರೆ ಈಗ ದುಡಿದಿದ್ದರಲ್ಲಿ ಮುಕ್ಕಾಲು ಪಾಲು ಡೀಸೆಲ್‌ಗೆ ಸುರಿಯಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

– ಮುತ್ತುರಾಜು


ಇದನ್ನೂ ಓದಿ: ‘ಪೆಟ್ರೋಲ್ ಬೆಲೆ ಹೆಚ್ಚುತ್ತಿದೆ’ ಎಂದರೆ ಅಫ್ಘಾನ್‌ಗೆ ಹೋಗಿ ಎಂದ ಬಿಜೆಪಿ ನಾಯಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...