Homeಕರ್ನಾಟಕಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ಐವರು ಆರೋಪಿಗಳ ಬಂಧನ, ಸಿಐಡಿ ಕಸ್ಟಡಿಗೆ ನೀಡಿದ...

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ಐವರು ಆರೋಪಿಗಳ ಬಂಧನ, ಸಿಐಡಿ ಕಸ್ಟಡಿಗೆ ನೀಡಿದ ನ್ಯಾಯಾಲಯ

- Advertisement -
- Advertisement -

ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಎನ್ನಲಾಗುತ್ತಿರುವ ಕಲಬುರಗಿಯ ಮಾಜಿ ಕಾರ್ಪೋರೇಟರ್ ರಾಜು ಕಪನೂರ ಸೇರಿದಂತೆ ಐವರನ್ನು ಶುಕ್ರವಾರ (ಜ.10) ಬಂಧಿಸಿ, ಬೀದರ್‌ನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಐದೂ ಜನರನ್ನು ಐದು ದಿನಗಳವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ರಾಮಮೂರ್ತಿ ಅವರು ಆರೋಪಿಗಳ ಪರ ವಕೀಲರು ಹಾಗೂ ಸಿಐಡಿ ವಕೀಲರ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ, ಆರೋಪಿಗಳನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ನ್ಯಾಯಾಲಯದ ಆದೇಶದ ಬಳಿಕ ಸಿಐಡಿ ಅಧಿಕಾರಿಗಳು, ಆರೋಪಿಗಳಾದ ಕಲಬುರಗಿಯ ಮಾಜಿ ಕಾರ್ಪೋರೇಟರ್ ರಾಜು ಕಪನೂರ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋರಖನಾಥ ಸಜ್ಜನ್, ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಂದಕುಮಾರ ನಾಗಭುಜಂಗೆ, ಕಲಬುರಗಿಯ ಪ್ರಥಮ ದರ್ಜೆ ಗುತ್ತಿಗೆದಾರ ರಾಮನಗೌಡ ಪಾಟೀಲ ಹಾಗೂ ಸತೀಶ ರತ್ಕಾರ ದುಬಲಗುಂಡ ಅವರನ್ನು ತಮ್ಮ ಕಸ್ಟಡಿಗೆ ಕರೆದೊಯ್ದಿದ್ದಾರೆ.

ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಎಲ್ಲಾ ಆರೋಪಿಗಳು ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಸಿಐಡಿ ಡಿಐಜಿಪಿ ಶಾಂತನು ಸಿನ್ಹಾ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಸುಮಾರು ಎರಡು ತಾಸಿಗೂ ಅಧಿಕ ಸಮಯ ಆರೋಪಿಗಳ ವಿಚಾರಣೆ ನಡೆಸಿ, ನಂತರ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಎನ್ನಲಾದ ಕಾಂಗ್ರೆಸ್ ಮುಖಂಡ ರಾಜು ಕಪನೂರು ಹಾಗೂ ಇತರರಿಂದ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದ ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಕಟ್ಟಿತೂಗಾಂವ್ ಗ್ರಾಮದ ಯುವ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ (26) ಅವರು, ಗುರುವಾರ (ಡಿ.26) ಡೆತ್‌ನೋಟ್‌ ಬರೆದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಬಳಿಕ ನಾಪತ್ತೆಯಾಗಿದ್ದ ಅವರ ಶವ ಬೀದರ್-ಹೈದರಾಬಾದ್ ರೈಲ್ವೆ ಹಳಿಯಲ್ಲಿ ಪತ್ತೆಯಾಗಿತ್ತು.

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...