Homeಚಳವಳಿವಿವಾದಾತ್ಮಕ ಕೃಷಿ ಕಾನೂನು: ರೈತರನ್ನು 2 ನೇ ಸುತ್ತಿನ ಚರ್ಚೆಗೆ ಆಹ್ವಾನಿಸಿದ ಕೇಂದ್ರ!

ವಿವಾದಾತ್ಮಕ ಕೃಷಿ ಕಾನೂನು: ರೈತರನ್ನು 2 ನೇ ಸುತ್ತಿನ ಚರ್ಚೆಗೆ ಆಹ್ವಾನಿಸಿದ ಕೇಂದ್ರ!

"ಸಾವಿರಾರು ರೈತರು ಮತ್ತು ಕೃಷಿ ಕಾರ್ಮಿಕರ ಒಕ್ಕೂಟಗಳು ಹಾಗೂ 500 ಕ್ಕೂ ಹೆಚ್ಚು ರೈತ ಸಂಘಟನೆಗಳು ನವೆಂಬರ್ 26-27ರಂದು ದೆಹಲಿ ಚಲೋ ನಡೆಸಲು ನಿರ್ಧರಿಸಿದ್ದಾರೆ"

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ ರೈತರ ಆಕ್ರೋಶ ಭುಗಿಲೆದ್ದಿತ್ತು. ಇದನ್ನು ತಣಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಹಿಂದೆ ರೈತರನ್ನು ಮಾತುಕತೆಗೆ ಕರೆದಿತ್ತು. ಆದರೆ ನವೆಂಬರ್ 13 ರಂದು ನಡೆದ ಈ ಸಭೆಯು ವಿಫಲಾಗಿತ್ತು. ಹಾಗಾಗಿ ಡಿಸಂಬರ್ 3 ರಂದು ಮತ್ತೊಮ್ಮೆ ಎರಡನೇ ಸುತ್ತಿನ ಸಭೆಗೆ ರೈತಮುಖಂಡರು ಮತ್ತು ರೈತ ಸಂಘಗಳನ್ನು ಆಹ್ವಾನಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಪಂಜಾಬ್‌ನಲ್ಲಿ ನಡೆಯುತ್ತಿದ್ದ ಸುಮಾರು ಎರಡು ತಿಂಗಳ ಕಾಲದ ನಿರಂತರ ರೈಲು ಮುತ್ತಿಗೆಯ ರೈತರ ‘ರೈಲ್‌ ರೋಕೊ’ ಆಂದೋಲನವನ್ನು ಸೋಮವಾರ ಹಿಂತೆಗೆದುಕೊಂಡರು. 15 ದಿನಗಳ ಕಾಲ ಗಡುವು ನೀಡಿ ಕೇವಲ ಸರಕು ರೈಲುಗಳನ್ನು ಮಾತ್ರ ಪುನರಾರಂಭಿಸಲು ರೈತ ಮುಖಂಡರು ಒಪ್ಪಿಗೆ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರಕ್ಕೆ 15 ದಿನ ಗಡುವು ಕೊಟ್ಟು ’ರೈಲ್ ರೋಕೋ’ ವಾಪಾಸ್ ಪಡೆದ ಪಂಜಾಬ್ ರೈತ ಸಂಘಟನೆಗಳು!

ಪಿಟಿಐ ಜೊತೆ ಮಾತನಾಡಿದ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ, “ಡಿಸೆಂಬರ್ 3 ರಂದು ಬೆಳಿಗ್ಗೆ 11 ಗಂಟೆಗೆ ವಿಜಯನ್ ಭವನದಲ್ಲಿ ಎರಡನೇ ಸುತ್ತಿನ ಚರ್ಚೆಗೆ ನಾವು 30 ಕ್ಕೂ ಹೆಚ್ಚು ರೈತ ಸಂಘಟನೆಗಳ ಪ್ರತಿನಿಧಿಗಳನ್ನು ಕರೆದಿದ್ದೇವೆ” ಎಂದು ಹೇಳಿದರು.

ಕಾರ್ಯದರ್ಶಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪರವಾಗಿ ರೈತ ಸಂಘಟನೆಗಳಿಗೆ ಆಹ್ವಾನವನ್ನು ಕಳುಹಿಸಿದ್ದಾರೆ. ಸಭೆಯಲ್ಲಿ ಆಹಾರ ಸಚಿವ ಪಿಯೂಷ್ ಗೋಯಲ್ ಕೂಡ ಹಾಜರಾಗುವ ನಿರೀಕ್ಷೆಯಿದ್ದು, ಮಾತುಕತೆಗೆ ಪಂಜಾಬ್ ಸರ್ಕಾರದ ಆಹಾರ ಮತ್ತು ಕೃಷಿ ಇಲಾಖೆಗಳ ಅಧಿಕಾರಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: ರೈತರನ್ನು ಸಭೆಗೆ ಕರೆದ ಕೇಂದ್ರದ ಕೃಷಿ ಸಚಿವರೇ ನಾಪತ್ತೆ: ಮಸೂದೆ ಹರಿದು ರೈತರ ಆಕ್ರೋಶ!

ನವೆಂಬರ್ 13 ರಂದು ಭಾರತ ಸರ್ಕಾರದೊಂದಿಗೆ ಪಂಜಾಬ್‌ನ ರೈತ ಮುಖಂಡರ ಸತತ ಏಳು ಗಂಟೆಗಳ ಸಭೆ ನಡೆಸಿದರು. ರೈತ ಮುಖಂಡರು ತಮ್ಮ ಬೇಡಿಕೆಗಳನ್ನು ಸ್ಪಷ್ಟವಾಗಿ ಮಂಡಿಸಿದರೂ ಸಹ ಸರ್ಕಾರದಿಂದ ರೈತರಿಗೆ ಯಾವುದೇ ಖಚಿತ ಭರವಸೆ ದೊರೆತಿರಲಿಲ್ಲ.

ಸರ್ಕಾರವು ತನ್ನ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಲು ಅಥವಾ ಎಲ್ಲಾ ರೈತರಿಗೆ ಮತ್ತು ಎಲ್ಲಾ ಕೃಷಿ ಉತ್ಪನ್ನಗಳಿಗೆ ಕಾನೂನುಬದ್ಧವಾಗಿ ಖಾತರಿಪಡಿಸಿದ ಕನಿಷ್ಟ ಬೆಂಬಲ ಬೆಲೆ ನೀಡಲು ಬದ್ಧವಾಗಿಲ್ಲ. ಸಭೆಯಲ್ಲಿ ರೈತ ಮುಖಂಡರು ಎತ್ತಿದ ಸಮಸ್ಯೆಗಳಿಗೆ ಸರ್ಕಾರ ಯಾವುದೇ ಪೂರ್ವಭಾವಿ ಅಥವಾ ರಚನಾತ್ಮಕ ಪ್ರತಿಕ್ರಿಯೆಗಳನ್ನು ನೀಡಿಲ್ಲ.

ಹಾಗಾಗಿ ಎಐಕೆಎಸ್‌ಸಿಸಿ, ರಾಷ್ಟ್ರೀಯ ಕಿಸಾನ್ ಮಹಾಸಂಗ್ ಮತ್ತು ಭಾರತೀಯ ಕಿಸಾನ್ ಯೂನಿಯನ್ ಸೇರಿದಂತೆ ಹಲವಾರು ರೈತರು ಮತ್ತು ಕೃಷಿ ಕಾರ್ಮಿಕರ ಒಕ್ಕೂಟಗಳು ಮತ್ತು 500 ಕ್ಕೂ ಹೆಚ್ಚು ರೈತ ಸಂಘಟನೆಗಳು ನವೆಂಬರ್ 26-27ರಂದು ದೆಹಲಿ ಚಲೋ ನಡೆಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ‘ರೈತರ ಆದಾಯ ಡಬಲ್ ಆಗಲಿಲ್ಲ. ಬದಲಿಗೆ ರೈತರ ಉತ್ಪಾದನಾ ವೆಚ್ಚ ಮಾತ್ರ ಡಬಲ್ ಆಗಿದೆ’

ದೇಶದ 500 ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟವಾದ ಎಐಕೆಎಸ್‌ಸಿಸಿ ಅಕ್ಟೋಬರ್ 27 ರಂದೇ ನವದೆಹಲಿಯ ಗುರುದ್ವಾರ ರಾಕಬ್‌ಗಂಜ್‌ನಲ್ಲಿ ಸಭೆ ಸೇರಿ ಹೋರಾಟವನ್ನು ತೀವ್ರಗೊಳಿಸುವ ನಿರ್ಧಾರ ತೆಗೆದುಕೊಂಡಿತ್ತು ಎಂದು ಎಐಕೆಎಸ್‌ಸಿಸಿ ಮಾಧ್ಯಮ ಕಾರ್ಯದರ್ಶಿ ಅಶುತೋಷ್ ತಿಳಿಸಿದ್ದಾರೆ.


ಇದನ್ನೂ ಓದಿ: ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...