Homeಕರ್ನಾಟಕ'ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!': ಮೂಲಗಳ ಮಾಹಿತಿ

‘ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!’: ಮೂಲಗಳ ಮಾಹಿತಿ

- Advertisement -
- Advertisement -

ಮೌಂಟ್ ಕಾರ್ಮೆಲ್ ಕಾಲೇಜ್ (ಎಂಸಿಸಿ) ಫೆಸ್ಟ್ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಮತ್ತು ದಲಿತ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಲಾದ ವಿವಾದಾತ್ಮಕ ಸ್ಕಿಟ್‌ ಪ್ರದರ್ಶಿಸಲಾಯಿತು. ಇಂತಹ ವಿವಾದಾತ್ಮಕ ಸ್ಕಿಟ್ ಪ್ರದರ್ಶಿಸಿದ ಜೈನ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್‌(ಸಿಎಂಎಸ್‌)ನ ಡೆಲ್ರಾಯ್ಸ್ ಬಾಯ್ಸ್‌ಗೆ ಪ್ರಥಮ ಬಹುಮಾನ ನೀಡಲಾಗಿದೆ ಎಂದು ಎಂಸಿಸಿ ಮೂಲಗಳು ಬಹಿರಂಗಪಡಿಸಿವೆ.

ಎಂಸಿಸಿಯ ವಿದ್ಯಾರ್ಥಿ ಸಂಘಟನೆಯು 25 ವರ್ಷದೊಳಗಿನವರಿಗಾಗಿ ಮ್ಯಾಡ್‌ಆಡ್ಸ್ ಸ್ಪರ್ಧೆಯನ್ನು ಆಯೋಜಿಸಿದ್ದರು. ಇದರಲ್ಲಿ ಜೈನ್ ವಿಶ್ವವಿದ್ಯಾಲಯದ ಸಿಎಂಎಸ್‌ನ ಥಿಯೇಟರ್ ಗ್ರೂಪ್ ಡೆಲ್ರಾಯ್ಸ್ ಬಾಯ್ಸ್ ಸ್ಕಿಟ್ ಪ್ರದರ್ಶಿಸಿದ್ದರು. ವಾಸ್ತವವಾಗಿ ಈ ಸ್ಕಿಟ್‌ನ್ನು ಅನರ್ಹಗೊಳಿಸಬೇಕಿತ್ತು ಆದರೆ ಇದೇ ಸ್ಕಿಟ್‌ಗೆ ಮೊದಲ ಬಹುಮಾನ ನೀಡಲಾಗಿದೆ ಎಂದು ಮೂಲಗಳು ಬಹಿರಂಗಪಡಿಸಿವೆ. ”ಈ ಸ್ಕಿಟ್ ಪ್ರದರ್ಶನದ ಸಮಯದಲ್ಲಿ, ಕೆಲವು ಪ್ರೇಕ್ಷಕರಿಂದ ಆಕ್ಷೇಪ ವ್ಯಕ್ತವಾದಾಗ, ತೀರ್ಪುಗಾರರು ‘ಆಕ್ಟ್ ಅಸಭ್ಯವಲ್ಲ’ ಎಂದು ಹೇಳುವ ಮೂಲಕ ಅದನ್ನು ತಡೆಯುವ ಪ್ರಯತ್ನ ಮಾಡಲಿಲ್ಲ” ಎಂದು ಮೂಲಗಳು ತಿಳಿಸಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

”ಇದಕ್ಕೂ ಮೊದಲು ಈ ಸ್ಕಿಟ್‌ನ್ನು ಇತರ ಎರಡು ಫೆಸ್ಟ್‌ಗಳಲ್ಲಿ ಪ್ರದರ್ಶಿಸಲಾಗಿದೆ ಮತ್ತು ಇದು ಈಗಲೇ ತಯಾರಿಸಿದ ಸ್ಕ್ರಿಪ್ಟ್ ಅಲ್ಲ” ಎಂದು ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್‌ನ ಅಧಿಕಾರಿಯೊಬ್ಬರು ಖಚಿತಪಡಿಸಿದ್ದರು.

ಎಂಸಿಸಿಯ ವಿದ್ಯಾರ್ಥಿ ಸಂಘಟನೆ ಪ್ರಕಾರ, ಈ ಮ್ಯಾಡ್‌ಆಡ್ಸ್ ಸ್ಪರ್ಧೆಯ ತೀರ್ಪುಗಾರರಾಗಿ ಸೇಂಟ್ ಜೋಸೆಫ್ ಕಾಲೇಜ್ ಆಫ್ ಕಾಮರ್ಸ್ (ಎಸ್‌ಜೆಸಿಸಿ) ಕೌನ್ಸಿಲ್‌ನ ಮಾಜಿ ಉಪಾಧ್ಯಕ್ಷ ರೆಬೆಕಾ ಫ್ಲಾರೆನ್ಸ್, ಬಾಲ್ಡ್‌ವಿನ್ಸ್ ಮೆಥೋಡಿಸ್ಟ್ ಕಾಲೇಜಿನ ಮಾಜಿ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ನಿಸ್ ಜಿಯೋ ಮತ್ತು ಹರ್ಷಿಲ್ ಜೆ ಶಾ ಇದ್ದರು ಎಂದು ಹೇಳಲಾಗಿದೆ.

ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿ ಸಂಘಟನೆಯು ಈ ಸ್ಕಿಟ್‌ನ ಪ್ರದರ್ಶಕರನ್ನು ಅನರ್ಹಗೊಳಿಸಲು ತೀರ್ಪುಗಾರರನ್ನು ಕೇಳಿಕೊಂಡಿದ್ದಾರೆ. ಆದರೆ ನ್ಯಾಯಾಧೀಶರು ಅದನ್ನು ‘ಡಾರ್ಕ್ ಹ್ಯೂಮರ್’ (ಇದು ಅತ್ಯಂತ ಹಾಸ್ಯಮಯವಾದುದು) ಎಂದು ಲೇಬಲ್ ಮಾಡಿದರು ಮತ್ತು ಸ್ಕಿಟ್ ಚೆನ್ನಾಗಿದೆ ಎಂದು ಹೇಳಿದರು. ಅದಾದಮೇಲೂ ನಮ್ಮ ಸಂಘಟನೆಯ ಕೆಲವು ಸದಸ್ಯರು ಸ್ಕಿಟ್ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಸಂಘವನ್ನು ತೊರೆದರು” ಎಂದು ಎಂಸಿಸಿಯ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಸ್ಕಿಟ್‌ನ ಪ್ರದರ್ಶನದ ಬಳಿಕ ಅದರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಳಿಕ ಸಾಕಷ್ಟು ಜನರು ಜೈನ್ ವಿಶ್ವವಿದ್ಯಾಲಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಸಂಘಟನೆಗಳು ಜೈನ್ ವಿವಿ ಬ್ಯಾನ್ ಮಾಡಬೇಕು ಎಂದು ಹೋರಾಟಗಳನ್ನು ಮಾಡಿದರು. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ಅಂಬೇಡ್ಕರ್‍‌ಗೆ ಅವಮಾನ: ಜೈನ್ ವಿವಿ ಮಾನ್ಯತೆ ರದ್ದುಪಡಿಸಲು ವಿಪಕ್ಷಗಳ ಆಗ್ರಹ

ದೂರಿನಲ್ಲಿ ಏನಿದೆ?

ಜೈನ್‌ ವಿಶ್ವವಿದ್ಯಾನಿಲಯದ ಕಾಲೇಜು ಫೆಸ್ಟ್‌ನಲ್ಲಿ ವಿದ್ಯಾರ್ಥಿಗಳು ಆ ದಿನ ನೀಡಿದ  ಸ್ಕಿಟ್‌ನಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಮೀಸಲಾತಿಯ ಕುರಿತು ಅವಹೇಳನ ಮಾಡಲಾಗಿದೆ. @sunilhc ಎಂಬ ಟ್ವಿಟರ್ ಖಾತೆಯ ಮೂಲಕ ವಿಡಿಯೊವನ್ನು ಟ್ವೀಟ್ ಮಾಡಲಾಗಿದ್ದು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಕಮಿಷನರ್‌, ಡಿಜಿಪಿ ಮತ್ತು ಇತರೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

ಸದರಿ ಟ್ವೀಟ್‌ನಲ್ಲಿ ಮಾಡಲಾದ ವಿಡಿಯೊದಲ್ಲಿ ಮೇಲ್ನೋಟಕ್ಕೆ ಆಪಾದನೆಗಳು ಸರಿಯೆಂದು ಕಂಡು ಬಂದಿದೆ. ಸಾರ್ವಜನಿಕ ಸ್ಥಳದಲ್ಲಿ, ಸ್ಕಿಟ್‌ ಮೂಲಕ ಜಾತಿ ನಿಂದನೆ ಮಾಡಿರುವುದರಿಂದ ಇದನ್ನು ನೋಡಿದಲ್ಲಿ ಸಾಮಾಜಿಕ ಸಾಮರಸ್ಯ ಹಾಳಾಗುತ್ತದೆ. ಇದರಿಂದ ಜಾತಿ ಜಾತಿಗಳ ವಿರುದ್ಧ ವಿಷಬೀಜ ಬಿತ್ತಿದಂತಾಗಿರುತ್ತದೆ. ಈ ಹಿನ್ನೆಲೆಯಲ್ಲಿ- ಕಾರ್ಯಕ್ರಮದ ಉಸ್ತುವಾರಿಗಳು ಆದ ಜೈನ್ ವಿಶ್ವವಿದ್ಯಾಲಯದ ಪ್ರಾಂಶುಪಾಲರು (A1), ಡೀನ್ (A2), ಕಾರ್ಯಕ್ರಮದ ಆಯೋಜಕರು (A3), ಸ್ಕಿಟ್‌ನಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು (A4), ಸ್ಕಿಟ್‌ ಬರೆದ ಬರಹಗಾರರು (A5), ಇತರರರು (A6) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಅವಹೇಳನ ಮಾಡಿರುವುದು ಕಂಡುಬಂದಿದೆ. ಇದರಿಂದಾಗಿ ಸದರಿ ಮೇಲೆ ಹೆಸರಿಸಲಾದ ಎಲ್ಲರ ವಿರುದ್ಧ ದೌರ್ಜನ್ಯ ತಡೆ (ಪ್ರತಿಬಂಧಕ) ಕಾಯ್ದೆ 1989ರ ನಿಯಮ 3ರ ಉಪ ನಿಯಮಗಳಡಿ ಹಾಗೂ ಐ.ಪಿ.ಸಿ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ಬೆಂಗಳೂರಿನ ಸಿದ್ದಾಪುರ ಪೊಲೀಸರು ತಿಳಿಸಿದ್ದಾರೆ.

ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರೂ ಬಿಬಿಎ 5 ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದಾರೆ ಎನ್ನಲಾಗಿದೆ.

ಈ ಏಳು ಜನ ಸೇರಿ ಈ ಕಿರು ನಾಟಕ ಪ್ರದರ್ಶಿಸಿದ್ದಾರೆ. ಸೋಮವಾರ ಈ ಏಳು ವಿದ್ಯಾರ್ಥಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದೆ. ವಿಚಾರಣೆ ಬಳಿಕ ಸತ್ಯಾಂಶ ತಿಳಿಯಲಿದೆ ಎಂದು ಸಿದ್ದಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...