Homeಕರ್ನಾಟಕ'ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!': ಮೂಲಗಳ ಮಾಹಿತಿ

‘ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!’: ಮೂಲಗಳ ಮಾಹಿತಿ

- Advertisement -
- Advertisement -

ಮೌಂಟ್ ಕಾರ್ಮೆಲ್ ಕಾಲೇಜ್ (ಎಂಸಿಸಿ) ಫೆಸ್ಟ್ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಮತ್ತು ದಲಿತ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಲಾದ ವಿವಾದಾತ್ಮಕ ಸ್ಕಿಟ್‌ ಪ್ರದರ್ಶಿಸಲಾಯಿತು. ಇಂತಹ ವಿವಾದಾತ್ಮಕ ಸ್ಕಿಟ್ ಪ್ರದರ್ಶಿಸಿದ ಜೈನ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್‌(ಸಿಎಂಎಸ್‌)ನ ಡೆಲ್ರಾಯ್ಸ್ ಬಾಯ್ಸ್‌ಗೆ ಪ್ರಥಮ ಬಹುಮಾನ ನೀಡಲಾಗಿದೆ ಎಂದು ಎಂಸಿಸಿ ಮೂಲಗಳು ಬಹಿರಂಗಪಡಿಸಿವೆ.

ಎಂಸಿಸಿಯ ವಿದ್ಯಾರ್ಥಿ ಸಂಘಟನೆಯು 25 ವರ್ಷದೊಳಗಿನವರಿಗಾಗಿ ಮ್ಯಾಡ್‌ಆಡ್ಸ್ ಸ್ಪರ್ಧೆಯನ್ನು ಆಯೋಜಿಸಿದ್ದರು. ಇದರಲ್ಲಿ ಜೈನ್ ವಿಶ್ವವಿದ್ಯಾಲಯದ ಸಿಎಂಎಸ್‌ನ ಥಿಯೇಟರ್ ಗ್ರೂಪ್ ಡೆಲ್ರಾಯ್ಸ್ ಬಾಯ್ಸ್ ಸ್ಕಿಟ್ ಪ್ರದರ್ಶಿಸಿದ್ದರು. ವಾಸ್ತವವಾಗಿ ಈ ಸ್ಕಿಟ್‌ನ್ನು ಅನರ್ಹಗೊಳಿಸಬೇಕಿತ್ತು ಆದರೆ ಇದೇ ಸ್ಕಿಟ್‌ಗೆ ಮೊದಲ ಬಹುಮಾನ ನೀಡಲಾಗಿದೆ ಎಂದು ಮೂಲಗಳು ಬಹಿರಂಗಪಡಿಸಿವೆ. ”ಈ ಸ್ಕಿಟ್ ಪ್ರದರ್ಶನದ ಸಮಯದಲ್ಲಿ, ಕೆಲವು ಪ್ರೇಕ್ಷಕರಿಂದ ಆಕ್ಷೇಪ ವ್ಯಕ್ತವಾದಾಗ, ತೀರ್ಪುಗಾರರು ‘ಆಕ್ಟ್ ಅಸಭ್ಯವಲ್ಲ’ ಎಂದು ಹೇಳುವ ಮೂಲಕ ಅದನ್ನು ತಡೆಯುವ ಪ್ರಯತ್ನ ಮಾಡಲಿಲ್ಲ” ಎಂದು ಮೂಲಗಳು ತಿಳಿಸಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

”ಇದಕ್ಕೂ ಮೊದಲು ಈ ಸ್ಕಿಟ್‌ನ್ನು ಇತರ ಎರಡು ಫೆಸ್ಟ್‌ಗಳಲ್ಲಿ ಪ್ರದರ್ಶಿಸಲಾಗಿದೆ ಮತ್ತು ಇದು ಈಗಲೇ ತಯಾರಿಸಿದ ಸ್ಕ್ರಿಪ್ಟ್ ಅಲ್ಲ” ಎಂದು ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್‌ನ ಅಧಿಕಾರಿಯೊಬ್ಬರು ಖಚಿತಪಡಿಸಿದ್ದರು.

ಎಂಸಿಸಿಯ ವಿದ್ಯಾರ್ಥಿ ಸಂಘಟನೆ ಪ್ರಕಾರ, ಈ ಮ್ಯಾಡ್‌ಆಡ್ಸ್ ಸ್ಪರ್ಧೆಯ ತೀರ್ಪುಗಾರರಾಗಿ ಸೇಂಟ್ ಜೋಸೆಫ್ ಕಾಲೇಜ್ ಆಫ್ ಕಾಮರ್ಸ್ (ಎಸ್‌ಜೆಸಿಸಿ) ಕೌನ್ಸಿಲ್‌ನ ಮಾಜಿ ಉಪಾಧ್ಯಕ್ಷ ರೆಬೆಕಾ ಫ್ಲಾರೆನ್ಸ್, ಬಾಲ್ಡ್‌ವಿನ್ಸ್ ಮೆಥೋಡಿಸ್ಟ್ ಕಾಲೇಜಿನ ಮಾಜಿ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ನಿಸ್ ಜಿಯೋ ಮತ್ತು ಹರ್ಷಿಲ್ ಜೆ ಶಾ ಇದ್ದರು ಎಂದು ಹೇಳಲಾಗಿದೆ.

ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿ ಸಂಘಟನೆಯು ಈ ಸ್ಕಿಟ್‌ನ ಪ್ರದರ್ಶಕರನ್ನು ಅನರ್ಹಗೊಳಿಸಲು ತೀರ್ಪುಗಾರರನ್ನು ಕೇಳಿಕೊಂಡಿದ್ದಾರೆ. ಆದರೆ ನ್ಯಾಯಾಧೀಶರು ಅದನ್ನು ‘ಡಾರ್ಕ್ ಹ್ಯೂಮರ್’ (ಇದು ಅತ್ಯಂತ ಹಾಸ್ಯಮಯವಾದುದು) ಎಂದು ಲೇಬಲ್ ಮಾಡಿದರು ಮತ್ತು ಸ್ಕಿಟ್ ಚೆನ್ನಾಗಿದೆ ಎಂದು ಹೇಳಿದರು. ಅದಾದಮೇಲೂ ನಮ್ಮ ಸಂಘಟನೆಯ ಕೆಲವು ಸದಸ್ಯರು ಸ್ಕಿಟ್ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಸಂಘವನ್ನು ತೊರೆದರು” ಎಂದು ಎಂಸಿಸಿಯ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಸ್ಕಿಟ್‌ನ ಪ್ರದರ್ಶನದ ಬಳಿಕ ಅದರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಳಿಕ ಸಾಕಷ್ಟು ಜನರು ಜೈನ್ ವಿಶ್ವವಿದ್ಯಾಲಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಸಂಘಟನೆಗಳು ಜೈನ್ ವಿವಿ ಬ್ಯಾನ್ ಮಾಡಬೇಕು ಎಂದು ಹೋರಾಟಗಳನ್ನು ಮಾಡಿದರು. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ಅಂಬೇಡ್ಕರ್‍‌ಗೆ ಅವಮಾನ: ಜೈನ್ ವಿವಿ ಮಾನ್ಯತೆ ರದ್ದುಪಡಿಸಲು ವಿಪಕ್ಷಗಳ ಆಗ್ರಹ

ದೂರಿನಲ್ಲಿ ಏನಿದೆ?

ಜೈನ್‌ ವಿಶ್ವವಿದ್ಯಾನಿಲಯದ ಕಾಲೇಜು ಫೆಸ್ಟ್‌ನಲ್ಲಿ ವಿದ್ಯಾರ್ಥಿಗಳು ಆ ದಿನ ನೀಡಿದ  ಸ್ಕಿಟ್‌ನಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಮೀಸಲಾತಿಯ ಕುರಿತು ಅವಹೇಳನ ಮಾಡಲಾಗಿದೆ. @sunilhc ಎಂಬ ಟ್ವಿಟರ್ ಖಾತೆಯ ಮೂಲಕ ವಿಡಿಯೊವನ್ನು ಟ್ವೀಟ್ ಮಾಡಲಾಗಿದ್ದು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಕಮಿಷನರ್‌, ಡಿಜಿಪಿ ಮತ್ತು ಇತರೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

ಸದರಿ ಟ್ವೀಟ್‌ನಲ್ಲಿ ಮಾಡಲಾದ ವಿಡಿಯೊದಲ್ಲಿ ಮೇಲ್ನೋಟಕ್ಕೆ ಆಪಾದನೆಗಳು ಸರಿಯೆಂದು ಕಂಡು ಬಂದಿದೆ. ಸಾರ್ವಜನಿಕ ಸ್ಥಳದಲ್ಲಿ, ಸ್ಕಿಟ್‌ ಮೂಲಕ ಜಾತಿ ನಿಂದನೆ ಮಾಡಿರುವುದರಿಂದ ಇದನ್ನು ನೋಡಿದಲ್ಲಿ ಸಾಮಾಜಿಕ ಸಾಮರಸ್ಯ ಹಾಳಾಗುತ್ತದೆ. ಇದರಿಂದ ಜಾತಿ ಜಾತಿಗಳ ವಿರುದ್ಧ ವಿಷಬೀಜ ಬಿತ್ತಿದಂತಾಗಿರುತ್ತದೆ. ಈ ಹಿನ್ನೆಲೆಯಲ್ಲಿ- ಕಾರ್ಯಕ್ರಮದ ಉಸ್ತುವಾರಿಗಳು ಆದ ಜೈನ್ ವಿಶ್ವವಿದ್ಯಾಲಯದ ಪ್ರಾಂಶುಪಾಲರು (A1), ಡೀನ್ (A2), ಕಾರ್ಯಕ್ರಮದ ಆಯೋಜಕರು (A3), ಸ್ಕಿಟ್‌ನಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು (A4), ಸ್ಕಿಟ್‌ ಬರೆದ ಬರಹಗಾರರು (A5), ಇತರರರು (A6) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಅವಹೇಳನ ಮಾಡಿರುವುದು ಕಂಡುಬಂದಿದೆ. ಇದರಿಂದಾಗಿ ಸದರಿ ಮೇಲೆ ಹೆಸರಿಸಲಾದ ಎಲ್ಲರ ವಿರುದ್ಧ ದೌರ್ಜನ್ಯ ತಡೆ (ಪ್ರತಿಬಂಧಕ) ಕಾಯ್ದೆ 1989ರ ನಿಯಮ 3ರ ಉಪ ನಿಯಮಗಳಡಿ ಹಾಗೂ ಐ.ಪಿ.ಸಿ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ಬೆಂಗಳೂರಿನ ಸಿದ್ದಾಪುರ ಪೊಲೀಸರು ತಿಳಿಸಿದ್ದಾರೆ.

ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರೂ ಬಿಬಿಎ 5 ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದಾರೆ ಎನ್ನಲಾಗಿದೆ.

ಈ ಏಳು ಜನ ಸೇರಿ ಈ ಕಿರು ನಾಟಕ ಪ್ರದರ್ಶಿಸಿದ್ದಾರೆ. ಸೋಮವಾರ ಈ ಏಳು ವಿದ್ಯಾರ್ಥಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದೆ. ವಿಚಾರಣೆ ಬಳಿಕ ಸತ್ಯಾಂಶ ತಿಳಿಯಲಿದೆ ಎಂದು ಸಿದ್ದಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....