Homeಮುಖಪುಟವಿವಾದಿತ ದೆಹಲಿ ಸೇವಾ ಮಸೂದೆ ಅಂಗೀಕಾರ: ಸಭಾತ್ಯಾಗ ಮಾಡಿದ INDIA ಸದಸ್ಯರು

ವಿವಾದಿತ ದೆಹಲಿ ಸೇವಾ ಮಸೂದೆ ಅಂಗೀಕಾರ: ಸಭಾತ್ಯಾಗ ಮಾಡಿದ INDIA ಸದಸ್ಯರು

- Advertisement -
- Advertisement -

ದೆಹಲಿಯ ಆಡಳಿತ ಸೇವೆಗಳಿಗೆ ಸಂಬಂಧಿಸಿದ ಅಧಿಕಾರವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಂಡಿಸಿದ ರಾಷ್ಟ್ರ ರಾಜಧಾನಿ ಪ್ರದೇಶ ದಹಲಿ, ಸರ್ಕಾರದ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಗುರುವಾರ ಅಂಗಿಕಾರ ಆಗಿದೆ. ಈ ವೇಳೆ ವಿರೋಧ ಪಕ್ಷಗಳ ಒಕ್ಕೂಟ INDIAದ ಸದಸ್ಯರು ಸಭಾತ್ಮಾಗ ಮಾಡಿದರು.

ಸಂಸತ್‌ನ ಕೆಳಮನೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮಂಡಿಸಿದ ಈ ಮಸೂದೆಗೆ ಬಿಜು ಜನತಾದಳ, ವೈಎಸ್‌ಆರ್ ಕಾಂಗ್ರೆಸ್‌ ಪಕ್ಷ ಹಾಗೂ ಟಿಡಿಪಿ ಬೆಂಬಲ ನೀಡಿದವು. ಸೋಮವಾರ ಈ ಮಸೂದೆಯು ರಾಜ್ಯಸಭೆಯಲ್ಲಿ ಮಂಡನೆಯಾಗಲಿದ್ದು, ಅಲ್ಲಿಯೂ ನಿರಾಯಾಸವಾಗಿ ಅಂಗೀಕಾರವಾಗುವ ನಿರೀಕ್ಷೆ ಇದೆ.

ಈ ಮಸೂದೆಯನ್ವಯ ದೆಹಲಿ ಸರ್ಕಾರದ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಯ ಮೇಲೆ ಕೇಂದ್ರವು ಸಂಪೂರ್ಣ ಹಿಡಿತ ಹೊಂದಲಿದೆ. ಮಸೂದೆಗೆ ಸಂಬಂಧಿಸಿದಂತೆ ನಾಲ್ಕು ಗಂಟೆಗಳ ಕಾಲ ಚರ್ಚೆ ನಡೆಯಿತು. INDIAದ ಸದಸ್ಯರ ಟೀಕೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದರು. ಬಳಿಕ ಧ್ವನಿಮತದ ಮೂಲಕ ಒಪ್ಪಿಗೆ ನೀಡಲಾಯಿತು. ಬಳಿಕ ಸದನವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು.

ಸಂವಿಧಾನಕ್ಕೆ ಅಡಿಪಾಯ ಹಾಕಲು ಶ್ರಮಿಸಿದ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ, ಡಾ.ಬಿ.ಆರ್ ಅಂಬೇಡ್ಕರ್, ಕಾಂಗ್ರೆಸ್‌ ನಾಯಕರಾದ ಸಿ. ರಾಜಗೋಪಾಲಚಾರಿ, ಸರ್ದಾರ್ ಪಟೇಲ್ ಅವರ ಸೇವೆಯನ್ನು ಸ್ಮರಿಸಿ ಅಮಿತ್ ಶಾ ಅವರು ಮಸೂದೆ ಮಂಡಿಸಿದರು.

ಇದಕ್ಕೆ ಅಚ್ಚರಿ ವ್ಯಕ್ತಪಡಿಸಿದ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್‌ ಚೌಧರಿ, ನೆಹರೂ ಹಾಗೂ ಕಾಂಗ್ರೆಸ್ ಪಕ್ಷವನ್ನು ಅಮಿತ್ ಶಾ ಅವರು ಹೊಗಳುತ್ತಿದ್ದಾರೆ. ನನಗೆ ಇದನ್ನು ನಂಬಲಾಗುತ್ತಿಲ್ಲ ಎಂದರು.

ಚರ್ಚೆ ವೇಳೆ ಎಎಪಿ ಸಂಸದ ಸುಶೀಲ್ ಕುಮಾರ್ ರಿಂಕು ಅವರು, ”ಸ್ಪೀಕರ್ ಕುರ್ಚಿಯತ್ತ ಮಸೂದೆಯ – ಪ್ರತಿಯನ್ನು ಎಳೆದರು. ಆಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಮುಂಗಾರು ಅಧಿವೇಶನದ ಮುಂದಿನ ಅವಧಿವರೆಗೆ ರಿಂಕು ಅವರನ್ನು ಅಮಾನತುಗೊಳಿಸಿ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ.

ರಾಜ್ಯಸಭೆಯಲ್ಲಿಯೂ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಎಎಪಿ ಸಂಸದ ಸಂಜಯ್ – ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ.

“ಮಸೂದೆಗೆ ಅಂಗೀಕಾರ ಪಡೆಯುವ ಮೂಲಕ ಕೇಂದ್ರ ಸರ್ಕಾರವು ದೆಹಲಿ ನಾಗರಿಕರ ಬೆನ್ನಿಗೆ ಇರಿದಿದೆ ಮೋದಿ ಮತ್ತು ಬಿಜೆಪಿ ಹೇಳುವ ಮಾತುಗಳನ್ನು ಜನರು ನಂಬಬಾರದು” ಎಂದು ಮುಖ್ಯಮಂತ್ರಿ ಅರವಿಂದ ಕೇಜಿವಾಲ್ ಹೇಳಿದ್ದಾರೆ.

”ಮಸೂದೆಯು ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದು, ಅವರನ್ನು ಗುಲಾಮಗಿರಿ ವ್ಯವಸ್ಥೆಗೆ ದೂಡುತ್ತಿದೆ. ಮಸೂದೆಗೆ ಸಂಬಂಧಿಸಿದಂತೆ ಸರ್ಕಾರ ಸಮರ್ಥನೀಯವಾದ ಒಂದೂ ವಾದ ಮಂದಿಸಿಲ್ಲ, ಈಗಾಗಲೇ ಜನರು ಅಸಹಾಯಕರಾಗಿದ್ದಾರೆ ಮತ್ತೆ ಅವರನ್ನು ಅದೇ ಕೂಪಕ್ಕೆ ದೂಡುತ್ತದೆ” ಎಂದು ಟೀಟ್‌ನಲ್ಲಿ ದೂರಿದ್ದಾರೆ.

ಇದನ್ನೂ ಓದಿ: ಮುಂದಿನ ವಾರ ಸಂಸತ್‌ನಲ್ಲಿ ವಿವಾದಿತ ದೆಹಲಿ ಸೇವಾ ಮಸೂದೆ ಮಂಡನೆ; ಪ್ರತಿಪಕ್ಷಗಳ ವಿರೋಧದ ಮಧ್ಯೆ ಅಂಗಿಕಾರ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...