Homeಮುಖಪುಟವಿವಾದಿತ ದೆಹಲಿ ಸೇವಾ ಮಸೂದೆ ಅಂಗೀಕಾರ: ಸಭಾತ್ಯಾಗ ಮಾಡಿದ INDIA ಸದಸ್ಯರು

ವಿವಾದಿತ ದೆಹಲಿ ಸೇವಾ ಮಸೂದೆ ಅಂಗೀಕಾರ: ಸಭಾತ್ಯಾಗ ಮಾಡಿದ INDIA ಸದಸ್ಯರು

- Advertisement -
- Advertisement -

ದೆಹಲಿಯ ಆಡಳಿತ ಸೇವೆಗಳಿಗೆ ಸಂಬಂಧಿಸಿದ ಅಧಿಕಾರವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಂಡಿಸಿದ ರಾಷ್ಟ್ರ ರಾಜಧಾನಿ ಪ್ರದೇಶ ದಹಲಿ, ಸರ್ಕಾರದ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಗುರುವಾರ ಅಂಗಿಕಾರ ಆಗಿದೆ. ಈ ವೇಳೆ ವಿರೋಧ ಪಕ್ಷಗಳ ಒಕ್ಕೂಟ INDIAದ ಸದಸ್ಯರು ಸಭಾತ್ಮಾಗ ಮಾಡಿದರು.

ಸಂಸತ್‌ನ ಕೆಳಮನೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮಂಡಿಸಿದ ಈ ಮಸೂದೆಗೆ ಬಿಜು ಜನತಾದಳ, ವೈಎಸ್‌ಆರ್ ಕಾಂಗ್ರೆಸ್‌ ಪಕ್ಷ ಹಾಗೂ ಟಿಡಿಪಿ ಬೆಂಬಲ ನೀಡಿದವು. ಸೋಮವಾರ ಈ ಮಸೂದೆಯು ರಾಜ್ಯಸಭೆಯಲ್ಲಿ ಮಂಡನೆಯಾಗಲಿದ್ದು, ಅಲ್ಲಿಯೂ ನಿರಾಯಾಸವಾಗಿ ಅಂಗೀಕಾರವಾಗುವ ನಿರೀಕ್ಷೆ ಇದೆ.

ಈ ಮಸೂದೆಯನ್ವಯ ದೆಹಲಿ ಸರ್ಕಾರದ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಯ ಮೇಲೆ ಕೇಂದ್ರವು ಸಂಪೂರ್ಣ ಹಿಡಿತ ಹೊಂದಲಿದೆ. ಮಸೂದೆಗೆ ಸಂಬಂಧಿಸಿದಂತೆ ನಾಲ್ಕು ಗಂಟೆಗಳ ಕಾಲ ಚರ್ಚೆ ನಡೆಯಿತು. INDIAದ ಸದಸ್ಯರ ಟೀಕೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದರು. ಬಳಿಕ ಧ್ವನಿಮತದ ಮೂಲಕ ಒಪ್ಪಿಗೆ ನೀಡಲಾಯಿತು. ಬಳಿಕ ಸದನವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು.

ಸಂವಿಧಾನಕ್ಕೆ ಅಡಿಪಾಯ ಹಾಕಲು ಶ್ರಮಿಸಿದ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ, ಡಾ.ಬಿ.ಆರ್ ಅಂಬೇಡ್ಕರ್, ಕಾಂಗ್ರೆಸ್‌ ನಾಯಕರಾದ ಸಿ. ರಾಜಗೋಪಾಲಚಾರಿ, ಸರ್ದಾರ್ ಪಟೇಲ್ ಅವರ ಸೇವೆಯನ್ನು ಸ್ಮರಿಸಿ ಅಮಿತ್ ಶಾ ಅವರು ಮಸೂದೆ ಮಂಡಿಸಿದರು.

ಇದಕ್ಕೆ ಅಚ್ಚರಿ ವ್ಯಕ್ತಪಡಿಸಿದ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್‌ ಚೌಧರಿ, ನೆಹರೂ ಹಾಗೂ ಕಾಂಗ್ರೆಸ್ ಪಕ್ಷವನ್ನು ಅಮಿತ್ ಶಾ ಅವರು ಹೊಗಳುತ್ತಿದ್ದಾರೆ. ನನಗೆ ಇದನ್ನು ನಂಬಲಾಗುತ್ತಿಲ್ಲ ಎಂದರು.

ಚರ್ಚೆ ವೇಳೆ ಎಎಪಿ ಸಂಸದ ಸುಶೀಲ್ ಕುಮಾರ್ ರಿಂಕು ಅವರು, ”ಸ್ಪೀಕರ್ ಕುರ್ಚಿಯತ್ತ ಮಸೂದೆಯ – ಪ್ರತಿಯನ್ನು ಎಳೆದರು. ಆಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಮುಂಗಾರು ಅಧಿವೇಶನದ ಮುಂದಿನ ಅವಧಿವರೆಗೆ ರಿಂಕು ಅವರನ್ನು ಅಮಾನತುಗೊಳಿಸಿ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ.

ರಾಜ್ಯಸಭೆಯಲ್ಲಿಯೂ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಎಎಪಿ ಸಂಸದ ಸಂಜಯ್ – ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ.

“ಮಸೂದೆಗೆ ಅಂಗೀಕಾರ ಪಡೆಯುವ ಮೂಲಕ ಕೇಂದ್ರ ಸರ್ಕಾರವು ದೆಹಲಿ ನಾಗರಿಕರ ಬೆನ್ನಿಗೆ ಇರಿದಿದೆ ಮೋದಿ ಮತ್ತು ಬಿಜೆಪಿ ಹೇಳುವ ಮಾತುಗಳನ್ನು ಜನರು ನಂಬಬಾರದು” ಎಂದು ಮುಖ್ಯಮಂತ್ರಿ ಅರವಿಂದ ಕೇಜಿವಾಲ್ ಹೇಳಿದ್ದಾರೆ.

”ಮಸೂದೆಯು ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದು, ಅವರನ್ನು ಗುಲಾಮಗಿರಿ ವ್ಯವಸ್ಥೆಗೆ ದೂಡುತ್ತಿದೆ. ಮಸೂದೆಗೆ ಸಂಬಂಧಿಸಿದಂತೆ ಸರ್ಕಾರ ಸಮರ್ಥನೀಯವಾದ ಒಂದೂ ವಾದ ಮಂದಿಸಿಲ್ಲ, ಈಗಾಗಲೇ ಜನರು ಅಸಹಾಯಕರಾಗಿದ್ದಾರೆ ಮತ್ತೆ ಅವರನ್ನು ಅದೇ ಕೂಪಕ್ಕೆ ದೂಡುತ್ತದೆ” ಎಂದು ಟೀಟ್‌ನಲ್ಲಿ ದೂರಿದ್ದಾರೆ.

ಇದನ್ನೂ ಓದಿ: ಮುಂದಿನ ವಾರ ಸಂಸತ್‌ನಲ್ಲಿ ವಿವಾದಿತ ದೆಹಲಿ ಸೇವಾ ಮಸೂದೆ ಮಂಡನೆ; ಪ್ರತಿಪಕ್ಷಗಳ ವಿರೋಧದ ಮಧ್ಯೆ ಅಂಗಿಕಾರ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...