HomeUncategorizedಮುಂದಿನ ವಾರ ಸಂಸತ್‌ನಲ್ಲಿ ವಿವಾದಿತ ದೆಹಲಿ ಸೇವಾ ಮಸೂದೆ ಮಂಡನೆ; ಪ್ರತಿಪಕ್ಷಗಳ ವಿರೋಧದ ಮಧ್ಯೆ ಅಂಗಿಕಾರ...

ಮುಂದಿನ ವಾರ ಸಂಸತ್‌ನಲ್ಲಿ ವಿವಾದಿತ ದೆಹಲಿ ಸೇವಾ ಮಸೂದೆ ಮಂಡನೆ; ಪ್ರತಿಪಕ್ಷಗಳ ವಿರೋಧದ ಮಧ್ಯೆ ಅಂಗಿಕಾರ ಸಾಧ್ಯತೆ

- Advertisement -
- Advertisement -

ವಿವಾದಿತ ದೆಹಲಿ ಸೇವಾ ವಿಷಯಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿದ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಶುಕ್ರವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

ಈ ಬೆಳವಣಿಗೆಯು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಮತ್ತು ವಿರೋಧ ಪಕ್ಷ I.N.D.I.A ಒಕ್ಕೂಟದ ನಡುವಿನ ತಿಕ್ಕಾಟಕ್ಕೆ ವೇದಿಕೆಯಾಗಿದೆ. ಸಂಸತ್ತಿನಲ್ಲಿ ಈ ಶಾಸನವನ್ನು ಅಂಗೀಕರಿಸಿದರೆ I.N.D.I.Aದ 26 ಪಕ್ಷಗಳಲ್ಲಿ ಒಂದಾದ ಆಮ್ ಆದ್ಮಿ ಪಕ್ಷ (ಎಎಪಿ)ಕ್ಕೆ ನೇರವಾಗಿ ಪರಿಣಾಮ ಬೀರುತ್ತದೆ. ಪ್ರತಿಪಕ್ಷಗಳು ಈ ಮಸೂದೆಯನ್ನು ಭಾರತದ ಒಕ್ಕೂಟ ರಚನೆಯ ಮೇಲಿನ ‘ದಾಳಿ ಎಂದು ಪದೇ ಪದೇ ಬಣ್ಣಿಸುತ್ತಿವೆ.

ಈ ವಿಚಾರವನ್ನು ಘೋಷಣೆ ಮಾಡಿದ ಕ್ಷಣದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಸಂಸತ್ತಿನಲ್ಲಿ ಮಸೂದೆ ಅಂಗಿಕಾರವಾಗುವ ಸಾಧ್ಯತೆ

ವೈಎಸ್ಆರ್ ಕಾಂಗ್ರೆಸ್ ಮುಖಂಡ ಮತ್ತು ಆಂಧ್ರ ಪ್ರದೇಶದ ಸಿಎಂ ಜಗನ್‌ಮೋಹನ್ ರೆಡ್ಡಿಯವರು ತಮ್ಮ ಪಕ್ಷ NDA ಒಕ್ಕೂಟಕ್ಕೆ ಬೆಂಬಲ ನೀಡುತ್ತದೆ ಎಂದು ಗುರುವಾರವಷ್ಟೇ ಘೋಷಿಸಿದ್ದಾರೆ.

ದೆಹಲಿಯಲ್ಲಿನ ಸೇವೆ ಮತ್ತು ವರ್ಗಾವಣೆಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಂಡಿಸಲು ಹೊರಟಿರುವ ವಿವಾದಾತ್ಮಕ ಮಸೂದೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದರು ಬೆಂಬಲ ಸೂಚಿಸಿದ್ದಾರೆ. ಅಲ್ಲದೇ ಮಣಿಪುರದ ಹಿಂಸಾಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಪೂರ್ಣ ವಿವರ ನೀಡಬೇಕೆದು ಪಟ್ಟು ಹಿಡಿದು ಅವಿಶ್ವಾಸ ನಿರ್ಣಯ ಘೋಷಿಸಿರುವ ಹಿನ್ನೆಲೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಮೋದಿ ಸರ್ಕಾರದ ಪರ ಮತ ಹಾಕಲು ನಿರ್ಧರಿಸಿದೆ.

ದೆಹಲಿ ಸುಗ್ರೀವಾಜ್ಞೆಗೆ ರಾಜ್ಯಸಭೆಯಲ್ಲಿ ಬಹುಮತ ದೊರೆಯದಂತೆ ನೋಡಿಕೊಳ್ಳಲು ಆಪ್ ತೀವ್ರ ಪ್ರಯತ್ನ ನಡೆಸಿತ್ತು. ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದಲ್ಲದೇ INDIA ಒಕ್ಕೂಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿತ್ತು. ಈ ಬೆನ್ನಲ್ಲೆ NDA ಒಕ್ಕೂಟವು ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಗಾಳ ಹಾಕಿ ಯಶಸ್ವಿಯಾಗಿದೆ. ರಾಜ್ಯಸಭೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಒಂಬತ್ತು ಸದಸ್ಯರಿದ್ದು, ಅವರ ಬೆಂಬಲವು ಮಸೂದೆ ಅಂಗೀಕಾರಕ್ಕೆ ನಿರ್ಣಾಯಕವಾಗಿತ್ತು. ಅದೀಗ ಮೋದಿ ಸರ್ಕಾರದ ಪರ ವಹಿಸಿದೆ.

ದೆಹಲಿ ಸೇವಾ ಮಸೂದೆ

2023ರ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ (ತಿದ್ದುಪಡಿ) ಮಸೂದೆ, ಅಥವಾ, ಸರಳವಾಗಿ ಇದನ್ನು ಸೇವೆಗಳ ಮಸೂದೆ ಎಂದು ಹೇಳಲಾಗುತ್ತದೆ. ಈ ಒಂದು ಸುಗ್ರೀವಾಜ್ಞೆಯನ್ನು ಬದಲಿಸಲು ಮತ್ತು ರಾಷ್ಟ್ರದ ರಾಜಧಾನಿಯಲ್ಲಿ ಅಧಿಕಾರಿಗಳ ಮೇಲೆ ಕೇಂದ್ರದ ನಿಯಂತ್ರಣವನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...