Homeಮುಖಪುಟವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

ವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

- Advertisement -
- Advertisement -

ವಿವಾದಾತ್ಮಕ ಗೋಲಿನ ಕಾರಣದಿಂದಾಗಿ ಬೆಂಗಳೂರು ಎಫ್‌ಸಿ ಎದುರಿನ ಪಂದ್ಯದಿಂದ ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ ವಾಕ್‌ಔಟ್ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್ 3ರಂದು ನಡೆದ ಇಂಡಿಯನ್ ಸೂಪರ್‌ ಲೀಗ್‌ (ಐಎಸ್‌ಎಲ್‌) ನಾಕೌಟ್‌ ಪಂದ್ಯದಲ್ಲಿ ಭಾರತದ ಸ್ಟ್ರೈಕರ್‌ ಸುನಿಲ್ ಚೆಟ್ರಿಯವರು ಭಾರಿಸಿದ ಗೋಲು ವಿವಾದವನ್ನು ಹುಟ್ಟಿಹಾಕಿತ್ತು.

ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ಮತ್ತು ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ (ಕೆಬಿಎಫ್‌ಸಿ) ನಡುವೆ ಪಂದ್ಯ ನಡೆಯುತ್ತಿತ್ತು. ಬೆಂಗಳೂರು ತಂಡದಲ್ಲಿನ ಸುನಿಲ್ ಚೆಟ್ರಿಯವರು ಫ್ರೀಕಿಕ್‌ ವೇಳೆ ಮೋಸ ಮಾಡಿದ್ದಾರೆಂದು ಆರೋಪಿಸಿ ಕೇರಳ ತಂಡ ಪಂದ್ಯವನ್ನು ಮೊಟುಕುಗೊಳಿಸಿ ಹೊರನಡೆದಿದೆ. ಪಂದ್ಯದ 96ನೇ ನಿಮಿಷದಲ್ಲಿ ಈ ಘಟನೆ ನಡೆದಿದೆ.

ಕೇರಳ ಬ್ಲಾಸ್ಟರ್ಸ್ ವಿರುದ್ಧ ಸುನಿಲ್ ಚೆಟ್ರಿ ವಿವಾದಾತ್ಮಕ ಗೋಲು

ಸುನಿಲ್ ಚೆಟ್ರಿ ಅವರು ಗೋಲ್‌ ಭಾರಿಸಿದಾಗ ಕೇರಳ ಬ್ಲಾಸ್ಟರ್‌ ತಂಡದ ಆಟಗಾರರು ತಡೆಗೋಡೆಯಾಗಿ ನಿಲ್ಲಲು ಸಿದ್ಧವಾಗುತ್ತಿದ್ದರು. ಅಷ್ಟರಲ್ಲಿಯೇ ಗೋಲ್‌ ಹೊಡೆಯಲಾಗಿದೆ ಎಂದು ಕೇರಳ ಆಟಗಾರರು ಆರೋಪಿಸಿದ್ದಾರೆ.

ರೆಫರಿಯವರು ಬೆಂಗಳೂರು ಎಫ್‌ಸಿಗೆ ಗೋಲು ನೀಡಿದ್ದು, ಮರು ಕ್ಷಣವೇ ಕೇರಳದ ಆಟಗಾರರು ಇದನ್ನು ಪ್ರಶ್ನಿಸಿದರು.

ಸಮಯವನ್ನು ವ್ಯರ್ಥ ಮಾಡದೆ ಹೊರ ನಡೆದು ಬರುವಂತೆ ಕೇರಳ ಬ್ಲಾಸ್ಟರ್ಸ್ ತರಬೇತುದಾರ ಇವಾನ್ ವುಕೊಮಾನೋವಿಕ್ ಅವರು ತಮ್ಮ ತಂಡಕ್ಕೆ ಸೂಚಿಸಿದರು. ಕೋಚ್‌ ಕೂಡ ತೀರ್ಪುಗಾರರ ನಿರ್ಧಾರದಿಂದ ಅಸಮಾಧಾನಗೊಂಡಿದ್ದರು.

ಗೊಂದಲಕ್ಕೊಳಗಾದ ಕೇರಳ ಬ್ಲಾಸ್ಟರ್ಸ್ ಆಟಗಾರರು ಐಎಸ್‌ಎಲ್ ರೆಫರಿ ನಿರ್ಧಾರವನ್ನು ವಿರೋಧಿಸಿ ಡ್ರೆಸ್ಸಿಂಗ್ ರೂಮ್‌ಗೆ ತೆರಳಿ ಹೊರನಡೆದರು.

ಸುಮಾರು 20 ನಿಮಿಷಗಳ ನಂತರವೂ ಆಟಗಾರರು ಹಿಂತಿರುಗದ ಕಾರಣ ಪಂದ್ಯದಲ್ಲಿ ಬೆಂಗಳೂರು ತಂಡಕ್ಕೆ 1-0 ಅಂತರದಲ್ಲಿ ಗೆಲುವು ಸಿಕ್ಕಿದೆ ಎಂದು ಘೋಷಿಸಲಾಯಿತು.

ಮುಂದಿನ ವಾರ ಸೆಮಿ ಫೈನಲ್‌ನಲ್ಲಿ ಬೆಂಗಳೂರು ತಂಡವು ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲಿದೆ.

ಸುನಿಲ್ ಚೆಟ್ರಿ ಪ್ರತಿಕ್ರಿಯೆ

ಕೇರಳ ತಂಡದ ವಾಕ್‌ಔಟ್‌ ಕುರಿತು ಪ್ರತಿಕ್ರಿಯಿಸಿರುವ ಚೆಟ್ರಿ, “ನನ್ನ 22 ವರ್ಷಗಳ ವೃತ್ತಿ ಬದುಕಿನಲ್ಲಿ ಅಂತಹದನ್ನು ನೋಡಿಲ್ಲವಾದ್ದರಿಂದ ಏನಾಯಿತು ಎಂದು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದಿದ್ದಾರೆ.

ಗೆಲುವಿನಿಂದ ಸಂತಸಗೊಂಡಿದ್ದು, ಸೆಮಿಫೈನಲ್‌ನಲ್ಲಿ ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲು ಸಿದ್ಧ ಎಂದು ಛೆಟ್ರಿ ತಿಳಿಸಿದ್ದಾರೆ.

“(ಫ್ರೀ- ಕಿಕ್ ತೆಗೆದುಕೊಳ್ಳಲು ಸಾಧ್ಯವಾದರೆ) ನಾನು ಯಾವಾಗಲೂ ರೆಫರಿಯನ್ನು ಕೇಳುತ್ತೇನೆ. ಏಕೆಂದರೆ ಅವರು ಅನುಮತಿಸಬೇಕಾಗುತ್ತದೆ. ಅದೊಂದು ಕಹಿ-ಸಿಹಿ ಕ್ಷಣ. ಮೊದಲು ಪಂದ್ಯ ನಡೆಯುತ್ತದೋ ಇಲ್ಲವೋ ಎಂದು ಯೋಚಿಸಿದೆವು. ಆದರೆ ನಾವು ಸೆಮಿಫೈನಲ್‌ಗೆ ಪ್ರವೇಶಿಸಿರುವುದಕ್ಕೆ ನನಗೆ ಸಂತೋಷವಾಗಿದೆ. ಮುಂಬೈ ವಿರುದ್ಧ ಹೋರಾಡಲು ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...