Homeಮುಖಪುಟವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

ವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

- Advertisement -
- Advertisement -

ವಿವಾದಾತ್ಮಕ ಗೋಲಿನ ಕಾರಣದಿಂದಾಗಿ ಬೆಂಗಳೂರು ಎಫ್‌ಸಿ ಎದುರಿನ ಪಂದ್ಯದಿಂದ ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ ವಾಕ್‌ಔಟ್ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್ 3ರಂದು ನಡೆದ ಇಂಡಿಯನ್ ಸೂಪರ್‌ ಲೀಗ್‌ (ಐಎಸ್‌ಎಲ್‌) ನಾಕೌಟ್‌ ಪಂದ್ಯದಲ್ಲಿ ಭಾರತದ ಸ್ಟ್ರೈಕರ್‌ ಸುನಿಲ್ ಚೆಟ್ರಿಯವರು ಭಾರಿಸಿದ ಗೋಲು ವಿವಾದವನ್ನು ಹುಟ್ಟಿಹಾಕಿತ್ತು.

ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ಮತ್ತು ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ (ಕೆಬಿಎಫ್‌ಸಿ) ನಡುವೆ ಪಂದ್ಯ ನಡೆಯುತ್ತಿತ್ತು. ಬೆಂಗಳೂರು ತಂಡದಲ್ಲಿನ ಸುನಿಲ್ ಚೆಟ್ರಿಯವರು ಫ್ರೀಕಿಕ್‌ ವೇಳೆ ಮೋಸ ಮಾಡಿದ್ದಾರೆಂದು ಆರೋಪಿಸಿ ಕೇರಳ ತಂಡ ಪಂದ್ಯವನ್ನು ಮೊಟುಕುಗೊಳಿಸಿ ಹೊರನಡೆದಿದೆ. ಪಂದ್ಯದ 96ನೇ ನಿಮಿಷದಲ್ಲಿ ಈ ಘಟನೆ ನಡೆದಿದೆ.

ಕೇರಳ ಬ್ಲಾಸ್ಟರ್ಸ್ ವಿರುದ್ಧ ಸುನಿಲ್ ಚೆಟ್ರಿ ವಿವಾದಾತ್ಮಕ ಗೋಲು

ಸುನಿಲ್ ಚೆಟ್ರಿ ಅವರು ಗೋಲ್‌ ಭಾರಿಸಿದಾಗ ಕೇರಳ ಬ್ಲಾಸ್ಟರ್‌ ತಂಡದ ಆಟಗಾರರು ತಡೆಗೋಡೆಯಾಗಿ ನಿಲ್ಲಲು ಸಿದ್ಧವಾಗುತ್ತಿದ್ದರು. ಅಷ್ಟರಲ್ಲಿಯೇ ಗೋಲ್‌ ಹೊಡೆಯಲಾಗಿದೆ ಎಂದು ಕೇರಳ ಆಟಗಾರರು ಆರೋಪಿಸಿದ್ದಾರೆ.

ರೆಫರಿಯವರು ಬೆಂಗಳೂರು ಎಫ್‌ಸಿಗೆ ಗೋಲು ನೀಡಿದ್ದು, ಮರು ಕ್ಷಣವೇ ಕೇರಳದ ಆಟಗಾರರು ಇದನ್ನು ಪ್ರಶ್ನಿಸಿದರು.

ಸಮಯವನ್ನು ವ್ಯರ್ಥ ಮಾಡದೆ ಹೊರ ನಡೆದು ಬರುವಂತೆ ಕೇರಳ ಬ್ಲಾಸ್ಟರ್ಸ್ ತರಬೇತುದಾರ ಇವಾನ್ ವುಕೊಮಾನೋವಿಕ್ ಅವರು ತಮ್ಮ ತಂಡಕ್ಕೆ ಸೂಚಿಸಿದರು. ಕೋಚ್‌ ಕೂಡ ತೀರ್ಪುಗಾರರ ನಿರ್ಧಾರದಿಂದ ಅಸಮಾಧಾನಗೊಂಡಿದ್ದರು.

ಗೊಂದಲಕ್ಕೊಳಗಾದ ಕೇರಳ ಬ್ಲಾಸ್ಟರ್ಸ್ ಆಟಗಾರರು ಐಎಸ್‌ಎಲ್ ರೆಫರಿ ನಿರ್ಧಾರವನ್ನು ವಿರೋಧಿಸಿ ಡ್ರೆಸ್ಸಿಂಗ್ ರೂಮ್‌ಗೆ ತೆರಳಿ ಹೊರನಡೆದರು.

ಸುಮಾರು 20 ನಿಮಿಷಗಳ ನಂತರವೂ ಆಟಗಾರರು ಹಿಂತಿರುಗದ ಕಾರಣ ಪಂದ್ಯದಲ್ಲಿ ಬೆಂಗಳೂರು ತಂಡಕ್ಕೆ 1-0 ಅಂತರದಲ್ಲಿ ಗೆಲುವು ಸಿಕ್ಕಿದೆ ಎಂದು ಘೋಷಿಸಲಾಯಿತು.

ಮುಂದಿನ ವಾರ ಸೆಮಿ ಫೈನಲ್‌ನಲ್ಲಿ ಬೆಂಗಳೂರು ತಂಡವು ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲಿದೆ.

ಸುನಿಲ್ ಚೆಟ್ರಿ ಪ್ರತಿಕ್ರಿಯೆ

ಕೇರಳ ತಂಡದ ವಾಕ್‌ಔಟ್‌ ಕುರಿತು ಪ್ರತಿಕ್ರಿಯಿಸಿರುವ ಚೆಟ್ರಿ, “ನನ್ನ 22 ವರ್ಷಗಳ ವೃತ್ತಿ ಬದುಕಿನಲ್ಲಿ ಅಂತಹದನ್ನು ನೋಡಿಲ್ಲವಾದ್ದರಿಂದ ಏನಾಯಿತು ಎಂದು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದಿದ್ದಾರೆ.

ಗೆಲುವಿನಿಂದ ಸಂತಸಗೊಂಡಿದ್ದು, ಸೆಮಿಫೈನಲ್‌ನಲ್ಲಿ ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲು ಸಿದ್ಧ ಎಂದು ಛೆಟ್ರಿ ತಿಳಿಸಿದ್ದಾರೆ.

“(ಫ್ರೀ- ಕಿಕ್ ತೆಗೆದುಕೊಳ್ಳಲು ಸಾಧ್ಯವಾದರೆ) ನಾನು ಯಾವಾಗಲೂ ರೆಫರಿಯನ್ನು ಕೇಳುತ್ತೇನೆ. ಏಕೆಂದರೆ ಅವರು ಅನುಮತಿಸಬೇಕಾಗುತ್ತದೆ. ಅದೊಂದು ಕಹಿ-ಸಿಹಿ ಕ್ಷಣ. ಮೊದಲು ಪಂದ್ಯ ನಡೆಯುತ್ತದೋ ಇಲ್ಲವೋ ಎಂದು ಯೋಚಿಸಿದೆವು. ಆದರೆ ನಾವು ಸೆಮಿಫೈನಲ್‌ಗೆ ಪ್ರವೇಶಿಸಿರುವುದಕ್ಕೆ ನನಗೆ ಸಂತೋಷವಾಗಿದೆ. ಮುಂಬೈ ವಿರುದ್ಧ ಹೋರಾಡಲು ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...