Homeಮುಖಪುಟವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

ವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

- Advertisement -
- Advertisement -

ವಿವಾದಾತ್ಮಕ ಗೋಲಿನ ಕಾರಣದಿಂದಾಗಿ ಬೆಂಗಳೂರು ಎಫ್‌ಸಿ ಎದುರಿನ ಪಂದ್ಯದಿಂದ ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ ವಾಕ್‌ಔಟ್ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್ 3ರಂದು ನಡೆದ ಇಂಡಿಯನ್ ಸೂಪರ್‌ ಲೀಗ್‌ (ಐಎಸ್‌ಎಲ್‌) ನಾಕೌಟ್‌ ಪಂದ್ಯದಲ್ಲಿ ಭಾರತದ ಸ್ಟ್ರೈಕರ್‌ ಸುನಿಲ್ ಚೆಟ್ರಿಯವರು ಭಾರಿಸಿದ ಗೋಲು ವಿವಾದವನ್ನು ಹುಟ್ಟಿಹಾಕಿತ್ತು.

ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ಮತ್ತು ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ (ಕೆಬಿಎಫ್‌ಸಿ) ನಡುವೆ ಪಂದ್ಯ ನಡೆಯುತ್ತಿತ್ತು. ಬೆಂಗಳೂರು ತಂಡದಲ್ಲಿನ ಸುನಿಲ್ ಚೆಟ್ರಿಯವರು ಫ್ರೀಕಿಕ್‌ ವೇಳೆ ಮೋಸ ಮಾಡಿದ್ದಾರೆಂದು ಆರೋಪಿಸಿ ಕೇರಳ ತಂಡ ಪಂದ್ಯವನ್ನು ಮೊಟುಕುಗೊಳಿಸಿ ಹೊರನಡೆದಿದೆ. ಪಂದ್ಯದ 96ನೇ ನಿಮಿಷದಲ್ಲಿ ಈ ಘಟನೆ ನಡೆದಿದೆ.

ಕೇರಳ ಬ್ಲಾಸ್ಟರ್ಸ್ ವಿರುದ್ಧ ಸುನಿಲ್ ಚೆಟ್ರಿ ವಿವಾದಾತ್ಮಕ ಗೋಲು

ಸುನಿಲ್ ಚೆಟ್ರಿ ಅವರು ಗೋಲ್‌ ಭಾರಿಸಿದಾಗ ಕೇರಳ ಬ್ಲಾಸ್ಟರ್‌ ತಂಡದ ಆಟಗಾರರು ತಡೆಗೋಡೆಯಾಗಿ ನಿಲ್ಲಲು ಸಿದ್ಧವಾಗುತ್ತಿದ್ದರು. ಅಷ್ಟರಲ್ಲಿಯೇ ಗೋಲ್‌ ಹೊಡೆಯಲಾಗಿದೆ ಎಂದು ಕೇರಳ ಆಟಗಾರರು ಆರೋಪಿಸಿದ್ದಾರೆ.

ರೆಫರಿಯವರು ಬೆಂಗಳೂರು ಎಫ್‌ಸಿಗೆ ಗೋಲು ನೀಡಿದ್ದು, ಮರು ಕ್ಷಣವೇ ಕೇರಳದ ಆಟಗಾರರು ಇದನ್ನು ಪ್ರಶ್ನಿಸಿದರು.

ಸಮಯವನ್ನು ವ್ಯರ್ಥ ಮಾಡದೆ ಹೊರ ನಡೆದು ಬರುವಂತೆ ಕೇರಳ ಬ್ಲಾಸ್ಟರ್ಸ್ ತರಬೇತುದಾರ ಇವಾನ್ ವುಕೊಮಾನೋವಿಕ್ ಅವರು ತಮ್ಮ ತಂಡಕ್ಕೆ ಸೂಚಿಸಿದರು. ಕೋಚ್‌ ಕೂಡ ತೀರ್ಪುಗಾರರ ನಿರ್ಧಾರದಿಂದ ಅಸಮಾಧಾನಗೊಂಡಿದ್ದರು.

ಗೊಂದಲಕ್ಕೊಳಗಾದ ಕೇರಳ ಬ್ಲಾಸ್ಟರ್ಸ್ ಆಟಗಾರರು ಐಎಸ್‌ಎಲ್ ರೆಫರಿ ನಿರ್ಧಾರವನ್ನು ವಿರೋಧಿಸಿ ಡ್ರೆಸ್ಸಿಂಗ್ ರೂಮ್‌ಗೆ ತೆರಳಿ ಹೊರನಡೆದರು.

ಸುಮಾರು 20 ನಿಮಿಷಗಳ ನಂತರವೂ ಆಟಗಾರರು ಹಿಂತಿರುಗದ ಕಾರಣ ಪಂದ್ಯದಲ್ಲಿ ಬೆಂಗಳೂರು ತಂಡಕ್ಕೆ 1-0 ಅಂತರದಲ್ಲಿ ಗೆಲುವು ಸಿಕ್ಕಿದೆ ಎಂದು ಘೋಷಿಸಲಾಯಿತು.

ಮುಂದಿನ ವಾರ ಸೆಮಿ ಫೈನಲ್‌ನಲ್ಲಿ ಬೆಂಗಳೂರು ತಂಡವು ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲಿದೆ.

ಸುನಿಲ್ ಚೆಟ್ರಿ ಪ್ರತಿಕ್ರಿಯೆ

ಕೇರಳ ತಂಡದ ವಾಕ್‌ಔಟ್‌ ಕುರಿತು ಪ್ರತಿಕ್ರಿಯಿಸಿರುವ ಚೆಟ್ರಿ, “ನನ್ನ 22 ವರ್ಷಗಳ ವೃತ್ತಿ ಬದುಕಿನಲ್ಲಿ ಅಂತಹದನ್ನು ನೋಡಿಲ್ಲವಾದ್ದರಿಂದ ಏನಾಯಿತು ಎಂದು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದಿದ್ದಾರೆ.

ಗೆಲುವಿನಿಂದ ಸಂತಸಗೊಂಡಿದ್ದು, ಸೆಮಿಫೈನಲ್‌ನಲ್ಲಿ ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲು ಸಿದ್ಧ ಎಂದು ಛೆಟ್ರಿ ತಿಳಿಸಿದ್ದಾರೆ.

“(ಫ್ರೀ- ಕಿಕ್ ತೆಗೆದುಕೊಳ್ಳಲು ಸಾಧ್ಯವಾದರೆ) ನಾನು ಯಾವಾಗಲೂ ರೆಫರಿಯನ್ನು ಕೇಳುತ್ತೇನೆ. ಏಕೆಂದರೆ ಅವರು ಅನುಮತಿಸಬೇಕಾಗುತ್ತದೆ. ಅದೊಂದು ಕಹಿ-ಸಿಹಿ ಕ್ಷಣ. ಮೊದಲು ಪಂದ್ಯ ನಡೆಯುತ್ತದೋ ಇಲ್ಲವೋ ಎಂದು ಯೋಚಿಸಿದೆವು. ಆದರೆ ನಾವು ಸೆಮಿಫೈನಲ್‌ಗೆ ಪ್ರವೇಶಿಸಿರುವುದಕ್ಕೆ ನನಗೆ ಸಂತೋಷವಾಗಿದೆ. ಮುಂಬೈ ವಿರುದ್ಧ ಹೋರಾಡಲು ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...