Homeಮುಖಪುಟವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

ವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

- Advertisement -
- Advertisement -

ವಿವಾದಾತ್ಮಕ ಗೋಲಿನ ಕಾರಣದಿಂದಾಗಿ ಬೆಂಗಳೂರು ಎಫ್‌ಸಿ ಎದುರಿನ ಪಂದ್ಯದಿಂದ ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ ವಾಕ್‌ಔಟ್ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್ 3ರಂದು ನಡೆದ ಇಂಡಿಯನ್ ಸೂಪರ್‌ ಲೀಗ್‌ (ಐಎಸ್‌ಎಲ್‌) ನಾಕೌಟ್‌ ಪಂದ್ಯದಲ್ಲಿ ಭಾರತದ ಸ್ಟ್ರೈಕರ್‌ ಸುನಿಲ್ ಚೆಟ್ರಿಯವರು ಭಾರಿಸಿದ ಗೋಲು ವಿವಾದವನ್ನು ಹುಟ್ಟಿಹಾಕಿತ್ತು.

ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ಮತ್ತು ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ (ಕೆಬಿಎಫ್‌ಸಿ) ನಡುವೆ ಪಂದ್ಯ ನಡೆಯುತ್ತಿತ್ತು. ಬೆಂಗಳೂರು ತಂಡದಲ್ಲಿನ ಸುನಿಲ್ ಚೆಟ್ರಿಯವರು ಫ್ರೀಕಿಕ್‌ ವೇಳೆ ಮೋಸ ಮಾಡಿದ್ದಾರೆಂದು ಆರೋಪಿಸಿ ಕೇರಳ ತಂಡ ಪಂದ್ಯವನ್ನು ಮೊಟುಕುಗೊಳಿಸಿ ಹೊರನಡೆದಿದೆ. ಪಂದ್ಯದ 96ನೇ ನಿಮಿಷದಲ್ಲಿ ಈ ಘಟನೆ ನಡೆದಿದೆ.

ಕೇರಳ ಬ್ಲಾಸ್ಟರ್ಸ್ ವಿರುದ್ಧ ಸುನಿಲ್ ಚೆಟ್ರಿ ವಿವಾದಾತ್ಮಕ ಗೋಲು

ಸುನಿಲ್ ಚೆಟ್ರಿ ಅವರು ಗೋಲ್‌ ಭಾರಿಸಿದಾಗ ಕೇರಳ ಬ್ಲಾಸ್ಟರ್‌ ತಂಡದ ಆಟಗಾರರು ತಡೆಗೋಡೆಯಾಗಿ ನಿಲ್ಲಲು ಸಿದ್ಧವಾಗುತ್ತಿದ್ದರು. ಅಷ್ಟರಲ್ಲಿಯೇ ಗೋಲ್‌ ಹೊಡೆಯಲಾಗಿದೆ ಎಂದು ಕೇರಳ ಆಟಗಾರರು ಆರೋಪಿಸಿದ್ದಾರೆ.

ರೆಫರಿಯವರು ಬೆಂಗಳೂರು ಎಫ್‌ಸಿಗೆ ಗೋಲು ನೀಡಿದ್ದು, ಮರು ಕ್ಷಣವೇ ಕೇರಳದ ಆಟಗಾರರು ಇದನ್ನು ಪ್ರಶ್ನಿಸಿದರು.

ಸಮಯವನ್ನು ವ್ಯರ್ಥ ಮಾಡದೆ ಹೊರ ನಡೆದು ಬರುವಂತೆ ಕೇರಳ ಬ್ಲಾಸ್ಟರ್ಸ್ ತರಬೇತುದಾರ ಇವಾನ್ ವುಕೊಮಾನೋವಿಕ್ ಅವರು ತಮ್ಮ ತಂಡಕ್ಕೆ ಸೂಚಿಸಿದರು. ಕೋಚ್‌ ಕೂಡ ತೀರ್ಪುಗಾರರ ನಿರ್ಧಾರದಿಂದ ಅಸಮಾಧಾನಗೊಂಡಿದ್ದರು.

ಗೊಂದಲಕ್ಕೊಳಗಾದ ಕೇರಳ ಬ್ಲಾಸ್ಟರ್ಸ್ ಆಟಗಾರರು ಐಎಸ್‌ಎಲ್ ರೆಫರಿ ನಿರ್ಧಾರವನ್ನು ವಿರೋಧಿಸಿ ಡ್ರೆಸ್ಸಿಂಗ್ ರೂಮ್‌ಗೆ ತೆರಳಿ ಹೊರನಡೆದರು.

ಸುಮಾರು 20 ನಿಮಿಷಗಳ ನಂತರವೂ ಆಟಗಾರರು ಹಿಂತಿರುಗದ ಕಾರಣ ಪಂದ್ಯದಲ್ಲಿ ಬೆಂಗಳೂರು ತಂಡಕ್ಕೆ 1-0 ಅಂತರದಲ್ಲಿ ಗೆಲುವು ಸಿಕ್ಕಿದೆ ಎಂದು ಘೋಷಿಸಲಾಯಿತು.

ಮುಂದಿನ ವಾರ ಸೆಮಿ ಫೈನಲ್‌ನಲ್ಲಿ ಬೆಂಗಳೂರು ತಂಡವು ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲಿದೆ.

ಸುನಿಲ್ ಚೆಟ್ರಿ ಪ್ರತಿಕ್ರಿಯೆ

ಕೇರಳ ತಂಡದ ವಾಕ್‌ಔಟ್‌ ಕುರಿತು ಪ್ರತಿಕ್ರಿಯಿಸಿರುವ ಚೆಟ್ರಿ, “ನನ್ನ 22 ವರ್ಷಗಳ ವೃತ್ತಿ ಬದುಕಿನಲ್ಲಿ ಅಂತಹದನ್ನು ನೋಡಿಲ್ಲವಾದ್ದರಿಂದ ಏನಾಯಿತು ಎಂದು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದಿದ್ದಾರೆ.

ಗೆಲುವಿನಿಂದ ಸಂತಸಗೊಂಡಿದ್ದು, ಸೆಮಿಫೈನಲ್‌ನಲ್ಲಿ ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲು ಸಿದ್ಧ ಎಂದು ಛೆಟ್ರಿ ತಿಳಿಸಿದ್ದಾರೆ.

“(ಫ್ರೀ- ಕಿಕ್ ತೆಗೆದುಕೊಳ್ಳಲು ಸಾಧ್ಯವಾದರೆ) ನಾನು ಯಾವಾಗಲೂ ರೆಫರಿಯನ್ನು ಕೇಳುತ್ತೇನೆ. ಏಕೆಂದರೆ ಅವರು ಅನುಮತಿಸಬೇಕಾಗುತ್ತದೆ. ಅದೊಂದು ಕಹಿ-ಸಿಹಿ ಕ್ಷಣ. ಮೊದಲು ಪಂದ್ಯ ನಡೆಯುತ್ತದೋ ಇಲ್ಲವೋ ಎಂದು ಯೋಚಿಸಿದೆವು. ಆದರೆ ನಾವು ಸೆಮಿಫೈನಲ್‌ಗೆ ಪ್ರವೇಶಿಸಿರುವುದಕ್ಕೆ ನನಗೆ ಸಂತೋಷವಾಗಿದೆ. ಮುಂಬೈ ವಿರುದ್ಧ ಹೋರಾಡಲು ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...