Homeಮುಖಪುಟವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

ವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

- Advertisement -
- Advertisement -

ವಿವಾದಾತ್ಮಕ ಗೋಲಿನ ಕಾರಣದಿಂದಾಗಿ ಬೆಂಗಳೂರು ಎಫ್‌ಸಿ ಎದುರಿನ ಪಂದ್ಯದಿಂದ ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ ವಾಕ್‌ಔಟ್ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್ 3ರಂದು ನಡೆದ ಇಂಡಿಯನ್ ಸೂಪರ್‌ ಲೀಗ್‌ (ಐಎಸ್‌ಎಲ್‌) ನಾಕೌಟ್‌ ಪಂದ್ಯದಲ್ಲಿ ಭಾರತದ ಸ್ಟ್ರೈಕರ್‌ ಸುನಿಲ್ ಚೆಟ್ರಿಯವರು ಭಾರಿಸಿದ ಗೋಲು ವಿವಾದವನ್ನು ಹುಟ್ಟಿಹಾಕಿತ್ತು.

ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ಮತ್ತು ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ (ಕೆಬಿಎಫ್‌ಸಿ) ನಡುವೆ ಪಂದ್ಯ ನಡೆಯುತ್ತಿತ್ತು. ಬೆಂಗಳೂರು ತಂಡದಲ್ಲಿನ ಸುನಿಲ್ ಚೆಟ್ರಿಯವರು ಫ್ರೀಕಿಕ್‌ ವೇಳೆ ಮೋಸ ಮಾಡಿದ್ದಾರೆಂದು ಆರೋಪಿಸಿ ಕೇರಳ ತಂಡ ಪಂದ್ಯವನ್ನು ಮೊಟುಕುಗೊಳಿಸಿ ಹೊರನಡೆದಿದೆ. ಪಂದ್ಯದ 96ನೇ ನಿಮಿಷದಲ್ಲಿ ಈ ಘಟನೆ ನಡೆದಿದೆ.

ಕೇರಳ ಬ್ಲಾಸ್ಟರ್ಸ್ ವಿರುದ್ಧ ಸುನಿಲ್ ಚೆಟ್ರಿ ವಿವಾದಾತ್ಮಕ ಗೋಲು

ಸುನಿಲ್ ಚೆಟ್ರಿ ಅವರು ಗೋಲ್‌ ಭಾರಿಸಿದಾಗ ಕೇರಳ ಬ್ಲಾಸ್ಟರ್‌ ತಂಡದ ಆಟಗಾರರು ತಡೆಗೋಡೆಯಾಗಿ ನಿಲ್ಲಲು ಸಿದ್ಧವಾಗುತ್ತಿದ್ದರು. ಅಷ್ಟರಲ್ಲಿಯೇ ಗೋಲ್‌ ಹೊಡೆಯಲಾಗಿದೆ ಎಂದು ಕೇರಳ ಆಟಗಾರರು ಆರೋಪಿಸಿದ್ದಾರೆ.

ರೆಫರಿಯವರು ಬೆಂಗಳೂರು ಎಫ್‌ಸಿಗೆ ಗೋಲು ನೀಡಿದ್ದು, ಮರು ಕ್ಷಣವೇ ಕೇರಳದ ಆಟಗಾರರು ಇದನ್ನು ಪ್ರಶ್ನಿಸಿದರು.

ಸಮಯವನ್ನು ವ್ಯರ್ಥ ಮಾಡದೆ ಹೊರ ನಡೆದು ಬರುವಂತೆ ಕೇರಳ ಬ್ಲಾಸ್ಟರ್ಸ್ ತರಬೇತುದಾರ ಇವಾನ್ ವುಕೊಮಾನೋವಿಕ್ ಅವರು ತಮ್ಮ ತಂಡಕ್ಕೆ ಸೂಚಿಸಿದರು. ಕೋಚ್‌ ಕೂಡ ತೀರ್ಪುಗಾರರ ನಿರ್ಧಾರದಿಂದ ಅಸಮಾಧಾನಗೊಂಡಿದ್ದರು.

ಗೊಂದಲಕ್ಕೊಳಗಾದ ಕೇರಳ ಬ್ಲಾಸ್ಟರ್ಸ್ ಆಟಗಾರರು ಐಎಸ್‌ಎಲ್ ರೆಫರಿ ನಿರ್ಧಾರವನ್ನು ವಿರೋಧಿಸಿ ಡ್ರೆಸ್ಸಿಂಗ್ ರೂಮ್‌ಗೆ ತೆರಳಿ ಹೊರನಡೆದರು.

ಸುಮಾರು 20 ನಿಮಿಷಗಳ ನಂತರವೂ ಆಟಗಾರರು ಹಿಂತಿರುಗದ ಕಾರಣ ಪಂದ್ಯದಲ್ಲಿ ಬೆಂಗಳೂರು ತಂಡಕ್ಕೆ 1-0 ಅಂತರದಲ್ಲಿ ಗೆಲುವು ಸಿಕ್ಕಿದೆ ಎಂದು ಘೋಷಿಸಲಾಯಿತು.

ಮುಂದಿನ ವಾರ ಸೆಮಿ ಫೈನಲ್‌ನಲ್ಲಿ ಬೆಂಗಳೂರು ತಂಡವು ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲಿದೆ.

ಸುನಿಲ್ ಚೆಟ್ರಿ ಪ್ರತಿಕ್ರಿಯೆ

ಕೇರಳ ತಂಡದ ವಾಕ್‌ಔಟ್‌ ಕುರಿತು ಪ್ರತಿಕ್ರಿಯಿಸಿರುವ ಚೆಟ್ರಿ, “ನನ್ನ 22 ವರ್ಷಗಳ ವೃತ್ತಿ ಬದುಕಿನಲ್ಲಿ ಅಂತಹದನ್ನು ನೋಡಿಲ್ಲವಾದ್ದರಿಂದ ಏನಾಯಿತು ಎಂದು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದಿದ್ದಾರೆ.

ಗೆಲುವಿನಿಂದ ಸಂತಸಗೊಂಡಿದ್ದು, ಸೆಮಿಫೈನಲ್‌ನಲ್ಲಿ ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲು ಸಿದ್ಧ ಎಂದು ಛೆಟ್ರಿ ತಿಳಿಸಿದ್ದಾರೆ.

“(ಫ್ರೀ- ಕಿಕ್ ತೆಗೆದುಕೊಳ್ಳಲು ಸಾಧ್ಯವಾದರೆ) ನಾನು ಯಾವಾಗಲೂ ರೆಫರಿಯನ್ನು ಕೇಳುತ್ತೇನೆ. ಏಕೆಂದರೆ ಅವರು ಅನುಮತಿಸಬೇಕಾಗುತ್ತದೆ. ಅದೊಂದು ಕಹಿ-ಸಿಹಿ ಕ್ಷಣ. ಮೊದಲು ಪಂದ್ಯ ನಡೆಯುತ್ತದೋ ಇಲ್ಲವೋ ಎಂದು ಯೋಚಿಸಿದೆವು. ಆದರೆ ನಾವು ಸೆಮಿಫೈನಲ್‌ಗೆ ಪ್ರವೇಶಿಸಿರುವುದಕ್ಕೆ ನನಗೆ ಸಂತೋಷವಾಗಿದೆ. ಮುಂಬೈ ವಿರುದ್ಧ ಹೋರಾಡಲು ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...