Homeಮುಖಪುಟವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

ವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

- Advertisement -
- Advertisement -

ವಿವಾದಾತ್ಮಕ ಗೋಲಿನ ಕಾರಣದಿಂದಾಗಿ ಬೆಂಗಳೂರು ಎಫ್‌ಸಿ ಎದುರಿನ ಪಂದ್ಯದಿಂದ ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ ವಾಕ್‌ಔಟ್ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್ 3ರಂದು ನಡೆದ ಇಂಡಿಯನ್ ಸೂಪರ್‌ ಲೀಗ್‌ (ಐಎಸ್‌ಎಲ್‌) ನಾಕೌಟ್‌ ಪಂದ್ಯದಲ್ಲಿ ಭಾರತದ ಸ್ಟ್ರೈಕರ್‌ ಸುನಿಲ್ ಚೆಟ್ರಿಯವರು ಭಾರಿಸಿದ ಗೋಲು ವಿವಾದವನ್ನು ಹುಟ್ಟಿಹಾಕಿತ್ತು.

ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ಮತ್ತು ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ (ಕೆಬಿಎಫ್‌ಸಿ) ನಡುವೆ ಪಂದ್ಯ ನಡೆಯುತ್ತಿತ್ತು. ಬೆಂಗಳೂರು ತಂಡದಲ್ಲಿನ ಸುನಿಲ್ ಚೆಟ್ರಿಯವರು ಫ್ರೀಕಿಕ್‌ ವೇಳೆ ಮೋಸ ಮಾಡಿದ್ದಾರೆಂದು ಆರೋಪಿಸಿ ಕೇರಳ ತಂಡ ಪಂದ್ಯವನ್ನು ಮೊಟುಕುಗೊಳಿಸಿ ಹೊರನಡೆದಿದೆ. ಪಂದ್ಯದ 96ನೇ ನಿಮಿಷದಲ್ಲಿ ಈ ಘಟನೆ ನಡೆದಿದೆ.

ಕೇರಳ ಬ್ಲಾಸ್ಟರ್ಸ್ ವಿರುದ್ಧ ಸುನಿಲ್ ಚೆಟ್ರಿ ವಿವಾದಾತ್ಮಕ ಗೋಲು

ಸುನಿಲ್ ಚೆಟ್ರಿ ಅವರು ಗೋಲ್‌ ಭಾರಿಸಿದಾಗ ಕೇರಳ ಬ್ಲಾಸ್ಟರ್‌ ತಂಡದ ಆಟಗಾರರು ತಡೆಗೋಡೆಯಾಗಿ ನಿಲ್ಲಲು ಸಿದ್ಧವಾಗುತ್ತಿದ್ದರು. ಅಷ್ಟರಲ್ಲಿಯೇ ಗೋಲ್‌ ಹೊಡೆಯಲಾಗಿದೆ ಎಂದು ಕೇರಳ ಆಟಗಾರರು ಆರೋಪಿಸಿದ್ದಾರೆ.

ರೆಫರಿಯವರು ಬೆಂಗಳೂರು ಎಫ್‌ಸಿಗೆ ಗೋಲು ನೀಡಿದ್ದು, ಮರು ಕ್ಷಣವೇ ಕೇರಳದ ಆಟಗಾರರು ಇದನ್ನು ಪ್ರಶ್ನಿಸಿದರು.

ಸಮಯವನ್ನು ವ್ಯರ್ಥ ಮಾಡದೆ ಹೊರ ನಡೆದು ಬರುವಂತೆ ಕೇರಳ ಬ್ಲಾಸ್ಟರ್ಸ್ ತರಬೇತುದಾರ ಇವಾನ್ ವುಕೊಮಾನೋವಿಕ್ ಅವರು ತಮ್ಮ ತಂಡಕ್ಕೆ ಸೂಚಿಸಿದರು. ಕೋಚ್‌ ಕೂಡ ತೀರ್ಪುಗಾರರ ನಿರ್ಧಾರದಿಂದ ಅಸಮಾಧಾನಗೊಂಡಿದ್ದರು.

ಗೊಂದಲಕ್ಕೊಳಗಾದ ಕೇರಳ ಬ್ಲಾಸ್ಟರ್ಸ್ ಆಟಗಾರರು ಐಎಸ್‌ಎಲ್ ರೆಫರಿ ನಿರ್ಧಾರವನ್ನು ವಿರೋಧಿಸಿ ಡ್ರೆಸ್ಸಿಂಗ್ ರೂಮ್‌ಗೆ ತೆರಳಿ ಹೊರನಡೆದರು.

ಸುಮಾರು 20 ನಿಮಿಷಗಳ ನಂತರವೂ ಆಟಗಾರರು ಹಿಂತಿರುಗದ ಕಾರಣ ಪಂದ್ಯದಲ್ಲಿ ಬೆಂಗಳೂರು ತಂಡಕ್ಕೆ 1-0 ಅಂತರದಲ್ಲಿ ಗೆಲುವು ಸಿಕ್ಕಿದೆ ಎಂದು ಘೋಷಿಸಲಾಯಿತು.

ಮುಂದಿನ ವಾರ ಸೆಮಿ ಫೈನಲ್‌ನಲ್ಲಿ ಬೆಂಗಳೂರು ತಂಡವು ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲಿದೆ.

ಸುನಿಲ್ ಚೆಟ್ರಿ ಪ್ರತಿಕ್ರಿಯೆ

ಕೇರಳ ತಂಡದ ವಾಕ್‌ಔಟ್‌ ಕುರಿತು ಪ್ರತಿಕ್ರಿಯಿಸಿರುವ ಚೆಟ್ರಿ, “ನನ್ನ 22 ವರ್ಷಗಳ ವೃತ್ತಿ ಬದುಕಿನಲ್ಲಿ ಅಂತಹದನ್ನು ನೋಡಿಲ್ಲವಾದ್ದರಿಂದ ಏನಾಯಿತು ಎಂದು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದಿದ್ದಾರೆ.

ಗೆಲುವಿನಿಂದ ಸಂತಸಗೊಂಡಿದ್ದು, ಸೆಮಿಫೈನಲ್‌ನಲ್ಲಿ ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲು ಸಿದ್ಧ ಎಂದು ಛೆಟ್ರಿ ತಿಳಿಸಿದ್ದಾರೆ.

“(ಫ್ರೀ- ಕಿಕ್ ತೆಗೆದುಕೊಳ್ಳಲು ಸಾಧ್ಯವಾದರೆ) ನಾನು ಯಾವಾಗಲೂ ರೆಫರಿಯನ್ನು ಕೇಳುತ್ತೇನೆ. ಏಕೆಂದರೆ ಅವರು ಅನುಮತಿಸಬೇಕಾಗುತ್ತದೆ. ಅದೊಂದು ಕಹಿ-ಸಿಹಿ ಕ್ಷಣ. ಮೊದಲು ಪಂದ್ಯ ನಡೆಯುತ್ತದೋ ಇಲ್ಲವೋ ಎಂದು ಯೋಚಿಸಿದೆವು. ಆದರೆ ನಾವು ಸೆಮಿಫೈನಲ್‌ಗೆ ಪ್ರವೇಶಿಸಿರುವುದಕ್ಕೆ ನನಗೆ ಸಂತೋಷವಾಗಿದೆ. ಮುಂಬೈ ವಿರುದ್ಧ ಹೋರಾಡಲು ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...