Homeಮುಖಪುಟವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

ವಿವಾದಾತ್ಮಕ ಗೋಲ್‌: ಬೆಂಗಳೂರು ಎದುರಿನ ಪಂದ್ಯದಿಂದ ವಾಕ್‌ಔಟ್‌ ಮಾಡಿದ ಕೇರಳ ಬ್ಲಾಸ್ಟರ್‌

- Advertisement -
- Advertisement -

ವಿವಾದಾತ್ಮಕ ಗೋಲಿನ ಕಾರಣದಿಂದಾಗಿ ಬೆಂಗಳೂರು ಎಫ್‌ಸಿ ಎದುರಿನ ಪಂದ್ಯದಿಂದ ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ ವಾಕ್‌ಔಟ್ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮಾರ್ಚ್ 3ರಂದು ನಡೆದ ಇಂಡಿಯನ್ ಸೂಪರ್‌ ಲೀಗ್‌ (ಐಎಸ್‌ಎಲ್‌) ನಾಕೌಟ್‌ ಪಂದ್ಯದಲ್ಲಿ ಭಾರತದ ಸ್ಟ್ರೈಕರ್‌ ಸುನಿಲ್ ಚೆಟ್ರಿಯವರು ಭಾರಿಸಿದ ಗೋಲು ವಿವಾದವನ್ನು ಹುಟ್ಟಿಹಾಕಿತ್ತು.

ಬೆಂಗಳೂರು ಎಫ್‌ಸಿ (ಬಿಎಫ್‌ಸಿ) ಮತ್ತು ಕೇರಳ ಬ್ಲಾಸ್ಟರ್‌ ಫುಟ್‌ಬಾಲ್‌ ಕ್ಲಬ್‌ (ಕೆಬಿಎಫ್‌ಸಿ) ನಡುವೆ ಪಂದ್ಯ ನಡೆಯುತ್ತಿತ್ತು. ಬೆಂಗಳೂರು ತಂಡದಲ್ಲಿನ ಸುನಿಲ್ ಚೆಟ್ರಿಯವರು ಫ್ರೀಕಿಕ್‌ ವೇಳೆ ಮೋಸ ಮಾಡಿದ್ದಾರೆಂದು ಆರೋಪಿಸಿ ಕೇರಳ ತಂಡ ಪಂದ್ಯವನ್ನು ಮೊಟುಕುಗೊಳಿಸಿ ಹೊರನಡೆದಿದೆ. ಪಂದ್ಯದ 96ನೇ ನಿಮಿಷದಲ್ಲಿ ಈ ಘಟನೆ ನಡೆದಿದೆ.

ಕೇರಳ ಬ್ಲಾಸ್ಟರ್ಸ್ ವಿರುದ್ಧ ಸುನಿಲ್ ಚೆಟ್ರಿ ವಿವಾದಾತ್ಮಕ ಗೋಲು

ಸುನಿಲ್ ಚೆಟ್ರಿ ಅವರು ಗೋಲ್‌ ಭಾರಿಸಿದಾಗ ಕೇರಳ ಬ್ಲಾಸ್ಟರ್‌ ತಂಡದ ಆಟಗಾರರು ತಡೆಗೋಡೆಯಾಗಿ ನಿಲ್ಲಲು ಸಿದ್ಧವಾಗುತ್ತಿದ್ದರು. ಅಷ್ಟರಲ್ಲಿಯೇ ಗೋಲ್‌ ಹೊಡೆಯಲಾಗಿದೆ ಎಂದು ಕೇರಳ ಆಟಗಾರರು ಆರೋಪಿಸಿದ್ದಾರೆ.

ರೆಫರಿಯವರು ಬೆಂಗಳೂರು ಎಫ್‌ಸಿಗೆ ಗೋಲು ನೀಡಿದ್ದು, ಮರು ಕ್ಷಣವೇ ಕೇರಳದ ಆಟಗಾರರು ಇದನ್ನು ಪ್ರಶ್ನಿಸಿದರು.

ಸಮಯವನ್ನು ವ್ಯರ್ಥ ಮಾಡದೆ ಹೊರ ನಡೆದು ಬರುವಂತೆ ಕೇರಳ ಬ್ಲಾಸ್ಟರ್ಸ್ ತರಬೇತುದಾರ ಇವಾನ್ ವುಕೊಮಾನೋವಿಕ್ ಅವರು ತಮ್ಮ ತಂಡಕ್ಕೆ ಸೂಚಿಸಿದರು. ಕೋಚ್‌ ಕೂಡ ತೀರ್ಪುಗಾರರ ನಿರ್ಧಾರದಿಂದ ಅಸಮಾಧಾನಗೊಂಡಿದ್ದರು.

ಗೊಂದಲಕ್ಕೊಳಗಾದ ಕೇರಳ ಬ್ಲಾಸ್ಟರ್ಸ್ ಆಟಗಾರರು ಐಎಸ್‌ಎಲ್ ರೆಫರಿ ನಿರ್ಧಾರವನ್ನು ವಿರೋಧಿಸಿ ಡ್ರೆಸ್ಸಿಂಗ್ ರೂಮ್‌ಗೆ ತೆರಳಿ ಹೊರನಡೆದರು.

ಸುಮಾರು 20 ನಿಮಿಷಗಳ ನಂತರವೂ ಆಟಗಾರರು ಹಿಂತಿರುಗದ ಕಾರಣ ಪಂದ್ಯದಲ್ಲಿ ಬೆಂಗಳೂರು ತಂಡಕ್ಕೆ 1-0 ಅಂತರದಲ್ಲಿ ಗೆಲುವು ಸಿಕ್ಕಿದೆ ಎಂದು ಘೋಷಿಸಲಾಯಿತು.

ಮುಂದಿನ ವಾರ ಸೆಮಿ ಫೈನಲ್‌ನಲ್ಲಿ ಬೆಂಗಳೂರು ತಂಡವು ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲಿದೆ.

ಸುನಿಲ್ ಚೆಟ್ರಿ ಪ್ರತಿಕ್ರಿಯೆ

ಕೇರಳ ತಂಡದ ವಾಕ್‌ಔಟ್‌ ಕುರಿತು ಪ್ರತಿಕ್ರಿಯಿಸಿರುವ ಚೆಟ್ರಿ, “ನನ್ನ 22 ವರ್ಷಗಳ ವೃತ್ತಿ ಬದುಕಿನಲ್ಲಿ ಅಂತಹದನ್ನು ನೋಡಿಲ್ಲವಾದ್ದರಿಂದ ಏನಾಯಿತು ಎಂದು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದಿದ್ದಾರೆ.

ಗೆಲುವಿನಿಂದ ಸಂತಸಗೊಂಡಿದ್ದು, ಸೆಮಿಫೈನಲ್‌ನಲ್ಲಿ ಮುಂಬೈ ಸಿಟಿ ಎಫ್‌ಸಿಯನ್ನು ಎದುರಿಸಲು ಸಿದ್ಧ ಎಂದು ಛೆಟ್ರಿ ತಿಳಿಸಿದ್ದಾರೆ.

“(ಫ್ರೀ- ಕಿಕ್ ತೆಗೆದುಕೊಳ್ಳಲು ಸಾಧ್ಯವಾದರೆ) ನಾನು ಯಾವಾಗಲೂ ರೆಫರಿಯನ್ನು ಕೇಳುತ್ತೇನೆ. ಏಕೆಂದರೆ ಅವರು ಅನುಮತಿಸಬೇಕಾಗುತ್ತದೆ. ಅದೊಂದು ಕಹಿ-ಸಿಹಿ ಕ್ಷಣ. ಮೊದಲು ಪಂದ್ಯ ನಡೆಯುತ್ತದೋ ಇಲ್ಲವೋ ಎಂದು ಯೋಚಿಸಿದೆವು. ಆದರೆ ನಾವು ಸೆಮಿಫೈನಲ್‌ಗೆ ಪ್ರವೇಶಿಸಿರುವುದಕ್ಕೆ ನನಗೆ ಸಂತೋಷವಾಗಿದೆ. ಮುಂಬೈ ವಿರುದ್ಧ ಹೋರಾಡಲು ಕಾಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...