Homeಅಂತರಾಷ್ಟ್ರೀಯಪಾಕಿಸ್ತಾನದ ವಿವಾದಾತ್ಮಕ ನಕ್ಷೆ: SCO ಶೃಂಗಸಭೆಯಿಂದ ಹೊರನಡೆದ ಭಾರತ!

ಪಾಕಿಸ್ತಾನದ ವಿವಾದಾತ್ಮಕ ನಕ್ಷೆ: SCO ಶೃಂಗಸಭೆಯಿಂದ ಹೊರನಡೆದ ಭಾರತ!

ಪಾಕಿಸ್ತಾನದ ಕ್ರಮವು ಆತಿಥೇಯರ ವಿರುದ್ಧದ ಸಲಹೆಯನ್ನು ನಿರ್ಲಕ್ಷಿಸಿ ಮತ್ತು ಸಭೆಯ ಮಾನದಂಡಗಳನ್ನು ಉಲ್ಲಂಘಿಸಿದೆ. ಆತಿಥೇಯರೊಂದಿಗೆ ಸಮಾಲೋಚಿಸಿದ ನಂತರ, ಭಾರತೀಯ NSA ಆ ಸಂದರ್ಭದಲ್ಲಿ ಪ್ರತಿಭಟಿಸಿ ಸಭೆಯಿಂದ ಹೊರಬಂದರು ಎಂದು ಶ್ರೀವಾಸ್ತವ ಹೇಳಿದರು.

- Advertisement -
- Advertisement -

ಜಮ್ಮುಕಾಶ್ಮೀರವನ್ನು ಪಾಕಿಸ್ತಾನದ ವಿವಾದಿತ ಭೂಪ್ರದೇಶ ಎಂದು ತನ್ನ ನಕ್ಷೆಯಲ್ಲಿ ತೋರಿಸಿದ್ದನ್ನು ಪ್ರತಿಭಟಿಸಿ, ಭಾರತ ಸರ್ಕಾರದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಂಗಳವಾರ ಶಾಂಘೈ ಸಹಕಾರ ಸಂಸ್ಥೆ (SCO)ಯ ವರ್ಚುವಲ್ ಸಭೆಯಿಂದ ಹೊರನಡೆದರು.

SCO ಅಧ್ಯಕ್ಷ ದೇಶ ರಷ್ಯಾ ಆಯೋಜಿಸಿದ್ದ SCO ಸದಸ್ಯ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ(NSAs) ಸಭೆಯಲ್ಲಿ ಪಾಕಿಸ್ತಾನ ಉದ್ದೇಶಪೂರ್ವಕವಾಗಿ ವಿವಾದಾತ್ಮಕವಾದ ಕಾಲ್ಪನಿಕ ನಕ್ಷೆಯನ್ನು ತಯಾರಿಸಿದೆ ಎಂದು ಸಭೆಯ ಬಳಿಕ ನಡೆದ ಸುದ್ಧಿಗೋಷ್ಟಿಯಲ್ಲಿ, ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದರು.

ಈ ಅಕ್ರಮ ನಕ್ಷೆಯನ್ನು ಪಾಕಿಸ್ತಾನ ಬಳಸುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪಾಕಿಸ್ತಾನವನ್ನು ಮನವೊಲಿಸಲು ರಷ್ಯಾ ಪ್ರಯತ್ನಿಸಿತು ಎಂದು ಮೂಲಗಳು ತಿಳಿಸಿರುವುದಾಗಿ ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಕೋಮು ಪ್ರಚೋದನೆಯಿಂದ ದೂರವಿರಿ: ಪಾಕಿಸ್ತಾನಕ್ಕೆ ಭಾರತ ತಾಕೀತು

ಪಾಕಿಸ್ತಾನದ ಕ್ರಮವು ಆತಿಥೇಯರ ವಿರುದ್ಧದ ಸಲಹೆಯನ್ನು ನಿರ್ಲಕ್ಷಿಸಿ ಮತ್ತು ಸಭೆಯ ಮಾನದಂಡಗಳನ್ನು ಉಲ್ಲಂಘಿಸಿದೆ. ಆತಿಥೇಯರೊಂದಿಗೆ ಸಮಾಲೋಚಿಸಿದ ನಂತರ, ಭಾರತೀಯ NSA ಆ ಸಂದರ್ಭದಲ್ಲಿ ಪ್ರತಿಭಟಿಸಿ ಸಭೆಯಿಂದ ಹೊರಬಂದರು ಎಂದು ಶ್ರೀವಾಸ್ತವ ಹೇಳಿದರು.

ಪಾಕಿಸ್ತಾನದ ಈ ಕೃತ್ಯವನ್ನು ಬೆಂಬಲಿಸುವುದಿಲ್ಲ ಮತ್ತು ಇಸ್ಲಾಮಾಬಾದ್‌ನ ಪ್ರಚೋದನಕಾರಿ ಕೃತ್ಯವು SCO ದಲ್ಲಿ ಭಾರತದ ಭಾಗವಹಿಸುವಿಕೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಆಶಿಸುತ್ತಿದೆ ಎಂದು ರಷ್ಯಾದ ಮೂಲಗಳು ದೋವಲ್‌ಗೆ ತಿಳಿಸಿವೆ.

SCO ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ದೋವಲ್‌ಗೆ ವೈಯಕ್ತಿಕವಾಗಿ ತುಂಬಾ ಕೃತಜ್ಞರಾಗಿರುವುದಾಗಿ ರಷ್ಯಾದ ಒಕ್ಕೂಟದ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೇವ್ ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಸಾದತ್ ಹಸನ್ ಮಂಟೋನ ಕಥೆ ‘ಹಲಾಕತ್ – ಮೃತ್ಯುದೇವತೆ’: ಅನುವಾದ – ಪುನೀತ್ ಅಪ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....