Homeಅಂತರಾಷ್ಟ್ರೀಯಪಾಕಿಸ್ತಾನದ ವಿವಾದಾತ್ಮಕ ನಕ್ಷೆ: SCO ಶೃಂಗಸಭೆಯಿಂದ ಹೊರನಡೆದ ಭಾರತ!

ಪಾಕಿಸ್ತಾನದ ವಿವಾದಾತ್ಮಕ ನಕ್ಷೆ: SCO ಶೃಂಗಸಭೆಯಿಂದ ಹೊರನಡೆದ ಭಾರತ!

ಪಾಕಿಸ್ತಾನದ ಕ್ರಮವು ಆತಿಥೇಯರ ವಿರುದ್ಧದ ಸಲಹೆಯನ್ನು ನಿರ್ಲಕ್ಷಿಸಿ ಮತ್ತು ಸಭೆಯ ಮಾನದಂಡಗಳನ್ನು ಉಲ್ಲಂಘಿಸಿದೆ. ಆತಿಥೇಯರೊಂದಿಗೆ ಸಮಾಲೋಚಿಸಿದ ನಂತರ, ಭಾರತೀಯ NSA ಆ ಸಂದರ್ಭದಲ್ಲಿ ಪ್ರತಿಭಟಿಸಿ ಸಭೆಯಿಂದ ಹೊರಬಂದರು ಎಂದು ಶ್ರೀವಾಸ್ತವ ಹೇಳಿದರು.

- Advertisement -
- Advertisement -

ಜಮ್ಮುಕಾಶ್ಮೀರವನ್ನು ಪಾಕಿಸ್ತಾನದ ವಿವಾದಿತ ಭೂಪ್ರದೇಶ ಎಂದು ತನ್ನ ನಕ್ಷೆಯಲ್ಲಿ ತೋರಿಸಿದ್ದನ್ನು ಪ್ರತಿಭಟಿಸಿ, ಭಾರತ ಸರ್ಕಾರದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಂಗಳವಾರ ಶಾಂಘೈ ಸಹಕಾರ ಸಂಸ್ಥೆ (SCO)ಯ ವರ್ಚುವಲ್ ಸಭೆಯಿಂದ ಹೊರನಡೆದರು.

SCO ಅಧ್ಯಕ್ಷ ದೇಶ ರಷ್ಯಾ ಆಯೋಜಿಸಿದ್ದ SCO ಸದಸ್ಯ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ(NSAs) ಸಭೆಯಲ್ಲಿ ಪಾಕಿಸ್ತಾನ ಉದ್ದೇಶಪೂರ್ವಕವಾಗಿ ವಿವಾದಾತ್ಮಕವಾದ ಕಾಲ್ಪನಿಕ ನಕ್ಷೆಯನ್ನು ತಯಾರಿಸಿದೆ ಎಂದು ಸಭೆಯ ಬಳಿಕ ನಡೆದ ಸುದ್ಧಿಗೋಷ್ಟಿಯಲ್ಲಿ, ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದರು.

ಈ ಅಕ್ರಮ ನಕ್ಷೆಯನ್ನು ಪಾಕಿಸ್ತಾನ ಬಳಸುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪಾಕಿಸ್ತಾನವನ್ನು ಮನವೊಲಿಸಲು ರಷ್ಯಾ ಪ್ರಯತ್ನಿಸಿತು ಎಂದು ಮೂಲಗಳು ತಿಳಿಸಿರುವುದಾಗಿ ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಕೋಮು ಪ್ರಚೋದನೆಯಿಂದ ದೂರವಿರಿ: ಪಾಕಿಸ್ತಾನಕ್ಕೆ ಭಾರತ ತಾಕೀತು

ಪಾಕಿಸ್ತಾನದ ಕ್ರಮವು ಆತಿಥೇಯರ ವಿರುದ್ಧದ ಸಲಹೆಯನ್ನು ನಿರ್ಲಕ್ಷಿಸಿ ಮತ್ತು ಸಭೆಯ ಮಾನದಂಡಗಳನ್ನು ಉಲ್ಲಂಘಿಸಿದೆ. ಆತಿಥೇಯರೊಂದಿಗೆ ಸಮಾಲೋಚಿಸಿದ ನಂತರ, ಭಾರತೀಯ NSA ಆ ಸಂದರ್ಭದಲ್ಲಿ ಪ್ರತಿಭಟಿಸಿ ಸಭೆಯಿಂದ ಹೊರಬಂದರು ಎಂದು ಶ್ರೀವಾಸ್ತವ ಹೇಳಿದರು.

ಪಾಕಿಸ್ತಾನದ ಈ ಕೃತ್ಯವನ್ನು ಬೆಂಬಲಿಸುವುದಿಲ್ಲ ಮತ್ತು ಇಸ್ಲಾಮಾಬಾದ್‌ನ ಪ್ರಚೋದನಕಾರಿ ಕೃತ್ಯವು SCO ದಲ್ಲಿ ಭಾರತದ ಭಾಗವಹಿಸುವಿಕೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಆಶಿಸುತ್ತಿದೆ ಎಂದು ರಷ್ಯಾದ ಮೂಲಗಳು ದೋವಲ್‌ಗೆ ತಿಳಿಸಿವೆ.

SCO ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ದೋವಲ್‌ಗೆ ವೈಯಕ್ತಿಕವಾಗಿ ತುಂಬಾ ಕೃತಜ್ಞರಾಗಿರುವುದಾಗಿ ರಷ್ಯಾದ ಒಕ್ಕೂಟದ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೇವ್ ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಸಾದತ್ ಹಸನ್ ಮಂಟೋನ ಕಥೆ ‘ಹಲಾಕತ್ – ಮೃತ್ಯುದೇವತೆ’: ಅನುವಾದ – ಪುನೀತ್ ಅಪ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...