Homeಮುಖಪುಟಬಿಜೆಪಿ ಅಭ್ಯರ್ಥಿ ಕಂಗನಾ ಕುರಿತು ವಿವಾದಾತ್ಮಕ ಪೋಸ್ಟ್; ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ

ಬಿಜೆಪಿ ಅಭ್ಯರ್ಥಿ ಕಂಗನಾ ಕುರಿತು ವಿವಾದಾತ್ಮಕ ಪೋಸ್ಟ್; ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ

- Advertisement -
- Advertisement -

ಉತ್ತರಾಖಂಡದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರಣಾವತ್ ವಿವಾದಾತ್ಮಕ ಪೋಸ್ಟ್ ಕುರಿತು, ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಟೆ ಸ್ಪಷ್ಟನೆ ನೀಡಿದ್ದಾರೆ.

“ಮಂಡಿಯಲ್ಲಿ (ಮಾರುಕಟ್ಟೆ) ಪ್ರಸ್ತುತ ದರ ಎಷ್ಟು ಎಂದು ಯಾರಾದರೂ ಹೇಳಬಹುದೇ?” ಎಂದು ಸುಪ್ರಿಯಾ ಅವರ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಲಾಗಿತ್ತು. “ನನ್ನನ್ನು ತಿಳಿದಿರುವ ಪ್ರತಿಯೊಬ್ಬರಿಗೂ ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾದ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ ಎಂದು ಚೆನ್ನಾಗಿ ತಿಳಿದಿದೆ. ಇದು ಹೇಗೆ ಸಂಭವಿಸಿತು ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ” ಎಂದು ಅವರು ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯು) ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಪತ್ರ ಬರೆದಿದ್ದು, ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಮತ್ತು ಪಕ್ಷದ ನಾಯಕರಾದ ಎಚ್‌ಎಸ್ ಅಹಿರ್ ವಿರುದ್ಧ ಅವರ ‘ಅಶ್ಲೀಲ ಮತ್ತು ಅವಹೇಳನಕಾರಿ’ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ ‘ಕಟ್ಟುನಿಟ್ಟಿನ ಕ್ರಮ’ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ’ ಎಂದು ಕಂಗನಾ ರಣಾವತ್ ಸೋಮವಾರ ಹೇಳಿದ್ದಾರೆ.

“ಸುಪ್ರಿಯಾ ಶ್ರಿನಾಟೆ ಮತ್ತು ಅಹಿರ್ ಅವರ ಅವಮಾನಕರ ನಡವಳಿಕೆಯಿಂದ ಎನ್‌ಸಿಡಬ್ಲ್ಯೂ ದಿಗ್ಭ್ರಮೆಗೊಂಡಿದೆ. ಅಂತಹ ನಡವಳಿಕೆಯು ಅಸಹನೀಯವಾಗಿದೆ ಮತ್ತು ಮಹಿಳೆಯರ ಘನತೆಗೆ ವಿರುದ್ಧವಾಗಿದೆ. (ಎನ್‌ಸಿಡಬ್ಲ್ಯೂ ಮುಖ್ಯಸ್ಥೆ) ರೇಖಾ ಶರ್ಮಾ ಅವರು ಇಸಿಐಗೆ ಪತ್ರವನ್ನು ಕಳುಹಿಸಿದ್ದು, ಅವರ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಎಲ್ಲ ಮಹಿಳೆಯರಿಗೆ ಗೌರವ ಮತ್ತು ಘನತೆಯನ್ನು ಎತ್ತಿಹಿಡಿಯೋಣ” ಎಂದು ಎನ್‌ಸಿಡಬ್ಲ್ಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಕಂಗನಾ ಕುರಿತು ಶ್ರಿನಾಟೆ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಶರ್ಮಾ, “ನೀವು (ಕಂಗನಾ) ಹೋರಾಟಗಾರ್ತಿ ಮತ್ತು ಹೊಳೆಯುವ ತಾರೆ; ಹೊಳೆಯುತ್ತಿರಿ, ಆಲ್ ದಿ ಬೆಸ್ಟ್. ನಾನು ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತಿದ್ದೇನೆ” ಎಂದು ಎಕ್ಸ್‌ನಲ್ಲಿ ಫೊಸ್ಟ್ ಮಾಡಿದ್ದಾರೆ.

ಕಾಂಗ್ರೆಸ್‌ಗಾಗಿ ಸಾಮಾಜಿಕ ಮಾಧ್ಯಮವನ್ನು ನಿರ್ವಹಿಸುವ ಶ್ರೀನಾಟೆ ಅವರ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಿದ ನಂತರ ಸೋಮವಾರ ಈ ವಿವಾದ ಪ್ರಾರಂಭವಾಯಿತು. ‘ಹಲವು ಜನರು’ ತನ್ನ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳಿಗೆ ಪ್ರವೇಶವನ್ನು ಹೊಂದಿದ್ದಾರೆ ಮತ್ತು ಅಲ್ಲಿಂದ ಯಾರೋ ‘ಅತ್ಯಂತ ಅನುಚಿತ’ ಪೋಸ್ಟ್ ಮಾಡಿದ್ದಾರೆ, ಅದನ್ನು ಅಳಿಸಲಾಗಿದೆ ಎಂದು ಶ್ರಿನಾಟೆ ನಂತರದಲ್ಲಿ  ಸ್ಪಷ್ಟಪಡಿಸಿದ್ದಾರೆ.

“ನನ್ನನ್ನು ತಿಳಿದಿರುವ ಪ್ರತಿಯೊಬ್ಬರಿಗೂ ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾದ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ ಎಂದು ಚೆನ್ನಾಗಿ ತಿಳಿದಿದೆ. ಇದು ಹೇಗೆ ಸಂಭವಿಸಿತು ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ” ಎಂದು ಅವರು ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುಜರಾತ್‌ನ ಕಾಂಗ್ರೆಸ್ ಮುಖಂಡ ಅಹಿರ್ ಕೂಡ ಇದೇ ರೀತಿಯ ವಿವರಣೆ ನೀಡಿದ್ದಾರೆ.

“ನನ್ನ ಎಕ್ಸ್‌ ಖಾತೆಗಳಿಗೆ ಪ್ರವೇಶವನ್ನು ಹೊಂದಿರುವ ಯಾರೋ ಸಂಪೂರ್ಣವಾಗಿ ಅಸಹ್ಯಕರ ಮತ್ತು ಆಕ್ಷೇಪಾರ್ಹ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾರೆ, ಅದನ್ನು ತೆಗೆದುಹಾಕಲಾಗಿದೆ” ಎಂದು ಅವರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹೇಳಿದ್ದಾರೆ.

ಈ ವಿಚಾರದಲ್ಲಿ ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದ್ದರೂ, ಅದರ ಯಾವುದೇ ಹಿರಿಯ ನಾಯಕರಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ; ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಪಟ್ಟು: 20ನೇ ದಿನಕ್ಕೆ ಕಾಲಿಟ್ಟ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...