Homeಮುಖಪುಟಬಿಜೆಪಿ ಅಭ್ಯರ್ಥಿ ಕಂಗನಾ ಕುರಿತು ವಿವಾದಾತ್ಮಕ ಪೋಸ್ಟ್; ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ

ಬಿಜೆಪಿ ಅಭ್ಯರ್ಥಿ ಕಂಗನಾ ಕುರಿತು ವಿವಾದಾತ್ಮಕ ಪೋಸ್ಟ್; ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ

- Advertisement -
- Advertisement -

ಉತ್ತರಾಖಂಡದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರಣಾವತ್ ವಿವಾದಾತ್ಮಕ ಪೋಸ್ಟ್ ಕುರಿತು, ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಟೆ ಸ್ಪಷ್ಟನೆ ನೀಡಿದ್ದಾರೆ.

“ಮಂಡಿಯಲ್ಲಿ (ಮಾರುಕಟ್ಟೆ) ಪ್ರಸ್ತುತ ದರ ಎಷ್ಟು ಎಂದು ಯಾರಾದರೂ ಹೇಳಬಹುದೇ?” ಎಂದು ಸುಪ್ರಿಯಾ ಅವರ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಲಾಗಿತ್ತು. “ನನ್ನನ್ನು ತಿಳಿದಿರುವ ಪ್ರತಿಯೊಬ್ಬರಿಗೂ ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾದ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ ಎಂದು ಚೆನ್ನಾಗಿ ತಿಳಿದಿದೆ. ಇದು ಹೇಗೆ ಸಂಭವಿಸಿತು ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ” ಎಂದು ಅವರು ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯು) ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಪತ್ರ ಬರೆದಿದ್ದು, ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಮತ್ತು ಪಕ್ಷದ ನಾಯಕರಾದ ಎಚ್‌ಎಸ್ ಅಹಿರ್ ವಿರುದ್ಧ ಅವರ ‘ಅಶ್ಲೀಲ ಮತ್ತು ಅವಹೇಳನಕಾರಿ’ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ ‘ಕಟ್ಟುನಿಟ್ಟಿನ ಕ್ರಮ’ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ’ ಎಂದು ಕಂಗನಾ ರಣಾವತ್ ಸೋಮವಾರ ಹೇಳಿದ್ದಾರೆ.

“ಸುಪ್ರಿಯಾ ಶ್ರಿನಾಟೆ ಮತ್ತು ಅಹಿರ್ ಅವರ ಅವಮಾನಕರ ನಡವಳಿಕೆಯಿಂದ ಎನ್‌ಸಿಡಬ್ಲ್ಯೂ ದಿಗ್ಭ್ರಮೆಗೊಂಡಿದೆ. ಅಂತಹ ನಡವಳಿಕೆಯು ಅಸಹನೀಯವಾಗಿದೆ ಮತ್ತು ಮಹಿಳೆಯರ ಘನತೆಗೆ ವಿರುದ್ಧವಾಗಿದೆ. (ಎನ್‌ಸಿಡಬ್ಲ್ಯೂ ಮುಖ್ಯಸ್ಥೆ) ರೇಖಾ ಶರ್ಮಾ ಅವರು ಇಸಿಐಗೆ ಪತ್ರವನ್ನು ಕಳುಹಿಸಿದ್ದು, ಅವರ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಎಲ್ಲ ಮಹಿಳೆಯರಿಗೆ ಗೌರವ ಮತ್ತು ಘನತೆಯನ್ನು ಎತ್ತಿಹಿಡಿಯೋಣ” ಎಂದು ಎನ್‌ಸಿಡಬ್ಲ್ಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಕಂಗನಾ ಕುರಿತು ಶ್ರಿನಾಟೆ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಶರ್ಮಾ, “ನೀವು (ಕಂಗನಾ) ಹೋರಾಟಗಾರ್ತಿ ಮತ್ತು ಹೊಳೆಯುವ ತಾರೆ; ಹೊಳೆಯುತ್ತಿರಿ, ಆಲ್ ದಿ ಬೆಸ್ಟ್. ನಾನು ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತಿದ್ದೇನೆ” ಎಂದು ಎಕ್ಸ್‌ನಲ್ಲಿ ಫೊಸ್ಟ್ ಮಾಡಿದ್ದಾರೆ.

ಕಾಂಗ್ರೆಸ್‌ಗಾಗಿ ಸಾಮಾಜಿಕ ಮಾಧ್ಯಮವನ್ನು ನಿರ್ವಹಿಸುವ ಶ್ರೀನಾಟೆ ಅವರ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಿದ ನಂತರ ಸೋಮವಾರ ಈ ವಿವಾದ ಪ್ರಾರಂಭವಾಯಿತು. ‘ಹಲವು ಜನರು’ ತನ್ನ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳಿಗೆ ಪ್ರವೇಶವನ್ನು ಹೊಂದಿದ್ದಾರೆ ಮತ್ತು ಅಲ್ಲಿಂದ ಯಾರೋ ‘ಅತ್ಯಂತ ಅನುಚಿತ’ ಪೋಸ್ಟ್ ಮಾಡಿದ್ದಾರೆ, ಅದನ್ನು ಅಳಿಸಲಾಗಿದೆ ಎಂದು ಶ್ರಿನಾಟೆ ನಂತರದಲ್ಲಿ  ಸ್ಪಷ್ಟಪಡಿಸಿದ್ದಾರೆ.

“ನನ್ನನ್ನು ತಿಳಿದಿರುವ ಪ್ರತಿಯೊಬ್ಬರಿಗೂ ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾದ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ ಎಂದು ಚೆನ್ನಾಗಿ ತಿಳಿದಿದೆ. ಇದು ಹೇಗೆ ಸಂಭವಿಸಿತು ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ” ಎಂದು ಅವರು ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುಜರಾತ್‌ನ ಕಾಂಗ್ರೆಸ್ ಮುಖಂಡ ಅಹಿರ್ ಕೂಡ ಇದೇ ರೀತಿಯ ವಿವರಣೆ ನೀಡಿದ್ದಾರೆ.

“ನನ್ನ ಎಕ್ಸ್‌ ಖಾತೆಗಳಿಗೆ ಪ್ರವೇಶವನ್ನು ಹೊಂದಿರುವ ಯಾರೋ ಸಂಪೂರ್ಣವಾಗಿ ಅಸಹ್ಯಕರ ಮತ್ತು ಆಕ್ಷೇಪಾರ್ಹ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾರೆ, ಅದನ್ನು ತೆಗೆದುಹಾಕಲಾಗಿದೆ” ಎಂದು ಅವರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹೇಳಿದ್ದಾರೆ.

ಈ ವಿಚಾರದಲ್ಲಿ ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದ್ದರೂ, ಅದರ ಯಾವುದೇ ಹಿರಿಯ ನಾಯಕರಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ; ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಪಟ್ಟು: 20ನೇ ದಿನಕ್ಕೆ ಕಾಲಿಟ್ಟ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...