Homeಮುಖಪುಟಬಿಜೆಪಿ ಅಭ್ಯರ್ಥಿ ಕಂಗನಾ ಕುರಿತು ವಿವಾದಾತ್ಮಕ ಪೋಸ್ಟ್; ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ

ಬಿಜೆಪಿ ಅಭ್ಯರ್ಥಿ ಕಂಗನಾ ಕುರಿತು ವಿವಾದಾತ್ಮಕ ಪೋಸ್ಟ್; ಸ್ಪಷ್ಟನೆ ನೀಡಿದ ಕಾಂಗ್ರೆಸ್ ನಾಯಕಿ ಸುಪ್ರಿಯಾ

- Advertisement -
- Advertisement -

ಉತ್ತರಾಖಂಡದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರಣಾವತ್ ವಿವಾದಾತ್ಮಕ ಪೋಸ್ಟ್ ಕುರಿತು, ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಟೆ ಸ್ಪಷ್ಟನೆ ನೀಡಿದ್ದಾರೆ.

“ಮಂಡಿಯಲ್ಲಿ (ಮಾರುಕಟ್ಟೆ) ಪ್ರಸ್ತುತ ದರ ಎಷ್ಟು ಎಂದು ಯಾರಾದರೂ ಹೇಳಬಹುದೇ?” ಎಂದು ಸುಪ್ರಿಯಾ ಅವರ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಲಾಗಿತ್ತು. “ನನ್ನನ್ನು ತಿಳಿದಿರುವ ಪ್ರತಿಯೊಬ್ಬರಿಗೂ ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾದ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ ಎಂದು ಚೆನ್ನಾಗಿ ತಿಳಿದಿದೆ. ಇದು ಹೇಗೆ ಸಂಭವಿಸಿತು ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ” ಎಂದು ಅವರು ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯು) ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಪತ್ರ ಬರೆದಿದ್ದು, ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಟೆ ಮತ್ತು ಪಕ್ಷದ ನಾಯಕರಾದ ಎಚ್‌ಎಸ್ ಅಹಿರ್ ವಿರುದ್ಧ ಅವರ ‘ಅಶ್ಲೀಲ ಮತ್ತು ಅವಹೇಳನಕಾರಿ’ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ ‘ಕಟ್ಟುನಿಟ್ಟಿನ ಕ್ರಮ’ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ’ ಎಂದು ಕಂಗನಾ ರಣಾವತ್ ಸೋಮವಾರ ಹೇಳಿದ್ದಾರೆ.

“ಸುಪ್ರಿಯಾ ಶ್ರಿನಾಟೆ ಮತ್ತು ಅಹಿರ್ ಅವರ ಅವಮಾನಕರ ನಡವಳಿಕೆಯಿಂದ ಎನ್‌ಸಿಡಬ್ಲ್ಯೂ ದಿಗ್ಭ್ರಮೆಗೊಂಡಿದೆ. ಅಂತಹ ನಡವಳಿಕೆಯು ಅಸಹನೀಯವಾಗಿದೆ ಮತ್ತು ಮಹಿಳೆಯರ ಘನತೆಗೆ ವಿರುದ್ಧವಾಗಿದೆ. (ಎನ್‌ಸಿಡಬ್ಲ್ಯೂ ಮುಖ್ಯಸ್ಥೆ) ರೇಖಾ ಶರ್ಮಾ ಅವರು ಇಸಿಐಗೆ ಪತ್ರವನ್ನು ಕಳುಹಿಸಿದ್ದು, ಅವರ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಎಲ್ಲ ಮಹಿಳೆಯರಿಗೆ ಗೌರವ ಮತ್ತು ಘನತೆಯನ್ನು ಎತ್ತಿಹಿಡಿಯೋಣ” ಎಂದು ಎನ್‌ಸಿಡಬ್ಲ್ಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಕಂಗನಾ ಕುರಿತು ಶ್ರಿನಾಟೆ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಶರ್ಮಾ, “ನೀವು (ಕಂಗನಾ) ಹೋರಾಟಗಾರ್ತಿ ಮತ್ತು ಹೊಳೆಯುವ ತಾರೆ; ಹೊಳೆಯುತ್ತಿರಿ, ಆಲ್ ದಿ ಬೆಸ್ಟ್. ನಾನು ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತಿದ್ದೇನೆ” ಎಂದು ಎಕ್ಸ್‌ನಲ್ಲಿ ಫೊಸ್ಟ್ ಮಾಡಿದ್ದಾರೆ.

ಕಾಂಗ್ರೆಸ್‌ಗಾಗಿ ಸಾಮಾಜಿಕ ಮಾಧ್ಯಮವನ್ನು ನಿರ್ವಹಿಸುವ ಶ್ರೀನಾಟೆ ಅವರ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಿದ ನಂತರ ಸೋಮವಾರ ಈ ವಿವಾದ ಪ್ರಾರಂಭವಾಯಿತು. ‘ಹಲವು ಜನರು’ ತನ್ನ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳಿಗೆ ಪ್ರವೇಶವನ್ನು ಹೊಂದಿದ್ದಾರೆ ಮತ್ತು ಅಲ್ಲಿಂದ ಯಾರೋ ‘ಅತ್ಯಂತ ಅನುಚಿತ’ ಪೋಸ್ಟ್ ಮಾಡಿದ್ದಾರೆ, ಅದನ್ನು ಅಳಿಸಲಾಗಿದೆ ಎಂದು ಶ್ರಿನಾಟೆ ನಂತರದಲ್ಲಿ  ಸ್ಪಷ್ಟಪಡಿಸಿದ್ದಾರೆ.

“ನನ್ನನ್ನು ತಿಳಿದಿರುವ ಪ್ರತಿಯೊಬ್ಬರಿಗೂ ನಾನು ಯಾವುದೇ ಮಹಿಳೆಯ ಬಗ್ಗೆ ವೈಯಕ್ತಿಕ ಮತ್ತು ಅಸಭ್ಯವಾದ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ ಎಂದು ಚೆನ್ನಾಗಿ ತಿಳಿದಿದೆ. ಇದು ಹೇಗೆ ಸಂಭವಿಸಿತು ಎಂದು ನಾನು ತಿಳಿದುಕೊಳ್ಳಲು ಬಯಸುತ್ತೇನೆ” ಎಂದು ಅವರು ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುಜರಾತ್‌ನ ಕಾಂಗ್ರೆಸ್ ಮುಖಂಡ ಅಹಿರ್ ಕೂಡ ಇದೇ ರೀತಿಯ ವಿವರಣೆ ನೀಡಿದ್ದಾರೆ.

“ನನ್ನ ಎಕ್ಸ್‌ ಖಾತೆಗಳಿಗೆ ಪ್ರವೇಶವನ್ನು ಹೊಂದಿರುವ ಯಾರೋ ಸಂಪೂರ್ಣವಾಗಿ ಅಸಹ್ಯಕರ ಮತ್ತು ಆಕ್ಷೇಪಾರ್ಹ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾರೆ, ಅದನ್ನು ತೆಗೆದುಹಾಕಲಾಗಿದೆ” ಎಂದು ಅವರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹೇಳಿದ್ದಾರೆ.

ಈ ವಿಚಾರದಲ್ಲಿ ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದ್ದರೂ, ಅದರ ಯಾವುದೇ ಹಿರಿಯ ನಾಯಕರಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ; ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಪಟ್ಟು: 20ನೇ ದಿನಕ್ಕೆ ಕಾಲಿಟ್ಟ ವಾಂಗ್ ಚುಕ್ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...