Homeಕರ್ನಾಟಕಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

ಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

- Advertisement -
- Advertisement -

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ ನಡೆಸಲು ಕೆಲವು ವಿವಾದಿತ ವ್ಯಕ್ತಿಗಳನ್ನು ಅಹ್ವಾನಿಸಲು ಸಿದ್ದತೆ ನಡೆದಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಆಹ್ವಾನಿತರ ಪಟ್ಟಿಯಲ್ಲಿದ್ದ ರವಿಶಂಕರ್ ಗುರೂಜಿ ಮತ್ತು ಡಾ.ಗುರುರಾಜ ಕರ್ಜಗಿ ಅವರ ಹೆಸರನ್ನು ಕೈ ಬಿಡಲಾಗಿದೆ.

ಸಾರ್ವಜನಿಕರ ಭಾರೀ ವಿರೋಧವೇ ಈ ಇಬ್ಬರ ಹೆಸರನ್ನು ಕೈಬಿಡಲು ಕಾರಣ ಎಂದು ಹೇಳಲಾಗಿದೆ. ಗುರುರಾಜ ಕರ್ಜಗಿ ಅವರ ಬದಲಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಮತ್ತು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಭಾಷಣಕ್ಕೆ ಆಹ್ವಾನಿಸಲಾಗಿದೆ.

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರವು ಜೂನ್ 26 ರಿಂದ ಜೂನ್ 29 ವರೆಗೆ ನೆಲಮಂಗಲದ ಕ್ಷೇಮ ವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಮಹಮ್ಮದ್ ಕುಂಞ, ಮತ್ತು ವೀಣಾ ಅವರು ನೂತನ ಶಾಸಕರಿಗೆ ಪ್ರವಚನ ನೀಡಲಿದ್ದಾರೆ.

‘ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಿಯೇ ಇಲ್ಲ’ ಎಂದ ಸ್ಪೀಕರ್ ಖಾದರ್

ಶಿಬಿರಕ್ಕೆ ಆಹ್ವಾನಿತರ ಪಟ್ಟಿಯಲ್ಲಿದ್ದ ವಿವಾದಿತ ವ್ಯಕ್ತಿ ರವಿಶಂಕರ್ ಗುರೂಜಿ ಹಾಗೂ ಡಾ.ಗುರುರಾಜ ಕರ್ಜಗಿ ಅವರನ್ನು ಕೈಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸ್ಪೀಕರ್ ಯುಟಿ ಖಾದರ್, ”ಆಧ್ಯಾತ್ಮಿಕ ಚಿಂತಕರಿಗೆ ಆಹ್ವಾನ ನೀಡಿದ್ದೇವೆ. ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ಇನ್ನೂ ನಮಗೆ ಸಮ್ಮತಿ ಸೂಚಿಸಿಲ್ಲ. ಕೆಲವರು ಮಾತ್ರ ಒಪ್ಪಿಗೆ ನೀಡಿದ್ದಾರೆ. ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಈ ಬಗ್ಗೆ ಈಗಾಗಲೇ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ವ್ಯತಿರಿಕ್ತವಾದ ಮಾತುಗಳು ಕೇಳಿಬರುತ್ತಿದೆ. ತರಬೇತಿ ಶಿಬಿರವನ್ನು ನೋಡದೆ ಈಗಲೇ ಹೇಳಿಕೆಗಳನ್ನು ನೀಡುವುದು ಸರಿಯಲ್ಲ” ಎಂದು ಹೇಳಿದರು.

”ಆ ತರಬೇತಿ ಶಿಬಿರದಲ್ಲಿ ಏನಾದರೂ ಕುಂದುಕೊರತೆಗಳಿದ್ದರೆ, ಆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಲ್ಲಿ ಸರಿಪಡಿಸುತ್ತೇವೆ. ಈಗಲೇ ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ತಪ್ಪು. ರವಿಶಂಕರ್ ಗುರೂಜಿಯವರನ್ನು ನಾನು ಭೇಟಿ ಮಾಡಿದ ತಕ್ಷಣ ನಾನು ತರಬೇತಿ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ ಎಂದು ಗುಲ್ಲೆಬ್ಬಿಸುವುದು ತಪ್ಪು. ನನಗೆ ಹಿಂದಿನಿಂದಲೂ ಅವರೊಂದಿಗೆ ಆತ್ಮೀಯ ಒಡನಾಡಿಯಾಗಿದ್ದೇನೆ. ಅಲ್ಲದೆ ಅವರು ಈಗ ಅಮೆರಿಕದಲ್ಲಿ ದೊಡ್ಡಮಟ್ಟದ ಕಾರ್ಯಕ್ರಮದ ಹಿಂದಿದ್ದಾರೆ. ದೇಶದಲ್ಲಿಯೇ ಇಲ್ಲದ ಅವರ ಬಗ್ಗೆ ಇಲ್ಲಸಲ್ಲದ ಮಾತನಾಡುವುದು ತಪ್ಪು” ಎಂದರು.

”ಅಲ್ಲದೇ ಈ ಬಗ್ಗೆ ನನ್ನಲ್ಲಿ ಸ್ಪಷ್ಟೀಕರಣ ಕೇಳದೆ ಹೇಳಿಕೆಗಳನ್ನು ಕೊಡುವವರಿಗೆ ನಾನೇನು ಹೇಳಲು ಹೋಗುವುದಿಲ್ಲ. ಆದ್ದರಿಂದ ತರಬೇತಿ ಕ್ಯಾಂಪ್ ಮುಗಿದ ಬಳಿಕ ಅದರ ಸಾಧಕ ಬಾಧಕಗಳು, ಸಲಹೆ ಸೂಚನೆಗಳನ್ನು ನೀಡಿದರೆ ಅದನ್ನು ಸ್ವಾಗತಿಸಲು ತಯಾರಿದ್ದೇವೆ‌” ಎಂದು ಯು.ಟಿ.ಖಾದರ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...