Homeಕರ್ನಾಟಕಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

ಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

- Advertisement -
- Advertisement -

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ ನಡೆಸಲು ಕೆಲವು ವಿವಾದಿತ ವ್ಯಕ್ತಿಗಳನ್ನು ಅಹ್ವಾನಿಸಲು ಸಿದ್ದತೆ ನಡೆದಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಆಹ್ವಾನಿತರ ಪಟ್ಟಿಯಲ್ಲಿದ್ದ ರವಿಶಂಕರ್ ಗುರೂಜಿ ಮತ್ತು ಡಾ.ಗುರುರಾಜ ಕರ್ಜಗಿ ಅವರ ಹೆಸರನ್ನು ಕೈ ಬಿಡಲಾಗಿದೆ.

ಸಾರ್ವಜನಿಕರ ಭಾರೀ ವಿರೋಧವೇ ಈ ಇಬ್ಬರ ಹೆಸರನ್ನು ಕೈಬಿಡಲು ಕಾರಣ ಎಂದು ಹೇಳಲಾಗಿದೆ. ಗುರುರಾಜ ಕರ್ಜಗಿ ಅವರ ಬದಲಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಮತ್ತು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಭಾಷಣಕ್ಕೆ ಆಹ್ವಾನಿಸಲಾಗಿದೆ.

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರವು ಜೂನ್ 26 ರಿಂದ ಜೂನ್ 29 ವರೆಗೆ ನೆಲಮಂಗಲದ ಕ್ಷೇಮ ವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಮಹಮ್ಮದ್ ಕುಂಞ, ಮತ್ತು ವೀಣಾ ಅವರು ನೂತನ ಶಾಸಕರಿಗೆ ಪ್ರವಚನ ನೀಡಲಿದ್ದಾರೆ.

‘ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಿಯೇ ಇಲ್ಲ’ ಎಂದ ಸ್ಪೀಕರ್ ಖಾದರ್

ಶಿಬಿರಕ್ಕೆ ಆಹ್ವಾನಿತರ ಪಟ್ಟಿಯಲ್ಲಿದ್ದ ವಿವಾದಿತ ವ್ಯಕ್ತಿ ರವಿಶಂಕರ್ ಗುರೂಜಿ ಹಾಗೂ ಡಾ.ಗುರುರಾಜ ಕರ್ಜಗಿ ಅವರನ್ನು ಕೈಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸ್ಪೀಕರ್ ಯುಟಿ ಖಾದರ್, ”ಆಧ್ಯಾತ್ಮಿಕ ಚಿಂತಕರಿಗೆ ಆಹ್ವಾನ ನೀಡಿದ್ದೇವೆ. ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ಇನ್ನೂ ನಮಗೆ ಸಮ್ಮತಿ ಸೂಚಿಸಿಲ್ಲ. ಕೆಲವರು ಮಾತ್ರ ಒಪ್ಪಿಗೆ ನೀಡಿದ್ದಾರೆ. ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಈ ಬಗ್ಗೆ ಈಗಾಗಲೇ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ವ್ಯತಿರಿಕ್ತವಾದ ಮಾತುಗಳು ಕೇಳಿಬರುತ್ತಿದೆ. ತರಬೇತಿ ಶಿಬಿರವನ್ನು ನೋಡದೆ ಈಗಲೇ ಹೇಳಿಕೆಗಳನ್ನು ನೀಡುವುದು ಸರಿಯಲ್ಲ” ಎಂದು ಹೇಳಿದರು.

”ಆ ತರಬೇತಿ ಶಿಬಿರದಲ್ಲಿ ಏನಾದರೂ ಕುಂದುಕೊರತೆಗಳಿದ್ದರೆ, ಆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಲ್ಲಿ ಸರಿಪಡಿಸುತ್ತೇವೆ. ಈಗಲೇ ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ತಪ್ಪು. ರವಿಶಂಕರ್ ಗುರೂಜಿಯವರನ್ನು ನಾನು ಭೇಟಿ ಮಾಡಿದ ತಕ್ಷಣ ನಾನು ತರಬೇತಿ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ ಎಂದು ಗುಲ್ಲೆಬ್ಬಿಸುವುದು ತಪ್ಪು. ನನಗೆ ಹಿಂದಿನಿಂದಲೂ ಅವರೊಂದಿಗೆ ಆತ್ಮೀಯ ಒಡನಾಡಿಯಾಗಿದ್ದೇನೆ. ಅಲ್ಲದೆ ಅವರು ಈಗ ಅಮೆರಿಕದಲ್ಲಿ ದೊಡ್ಡಮಟ್ಟದ ಕಾರ್ಯಕ್ರಮದ ಹಿಂದಿದ್ದಾರೆ. ದೇಶದಲ್ಲಿಯೇ ಇಲ್ಲದ ಅವರ ಬಗ್ಗೆ ಇಲ್ಲಸಲ್ಲದ ಮಾತನಾಡುವುದು ತಪ್ಪು” ಎಂದರು.

”ಅಲ್ಲದೇ ಈ ಬಗ್ಗೆ ನನ್ನಲ್ಲಿ ಸ್ಪಷ್ಟೀಕರಣ ಕೇಳದೆ ಹೇಳಿಕೆಗಳನ್ನು ಕೊಡುವವರಿಗೆ ನಾನೇನು ಹೇಳಲು ಹೋಗುವುದಿಲ್ಲ. ಆದ್ದರಿಂದ ತರಬೇತಿ ಕ್ಯಾಂಪ್ ಮುಗಿದ ಬಳಿಕ ಅದರ ಸಾಧಕ ಬಾಧಕಗಳು, ಸಲಹೆ ಸೂಚನೆಗಳನ್ನು ನೀಡಿದರೆ ಅದನ್ನು ಸ್ವಾಗತಿಸಲು ತಯಾರಿದ್ದೇವೆ‌” ಎಂದು ಯು.ಟಿ.ಖಾದರ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...