Homeಕರ್ನಾಟಕಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

ಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

- Advertisement -
- Advertisement -

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ ನಡೆಸಲು ಕೆಲವು ವಿವಾದಿತ ವ್ಯಕ್ತಿಗಳನ್ನು ಅಹ್ವಾನಿಸಲು ಸಿದ್ದತೆ ನಡೆದಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಆಹ್ವಾನಿತರ ಪಟ್ಟಿಯಲ್ಲಿದ್ದ ರವಿಶಂಕರ್ ಗುರೂಜಿ ಮತ್ತು ಡಾ.ಗುರುರಾಜ ಕರ್ಜಗಿ ಅವರ ಹೆಸರನ್ನು ಕೈ ಬಿಡಲಾಗಿದೆ.

ಸಾರ್ವಜನಿಕರ ಭಾರೀ ವಿರೋಧವೇ ಈ ಇಬ್ಬರ ಹೆಸರನ್ನು ಕೈಬಿಡಲು ಕಾರಣ ಎಂದು ಹೇಳಲಾಗಿದೆ. ಗುರುರಾಜ ಕರ್ಜಗಿ ಅವರ ಬದಲಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಮತ್ತು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಭಾಷಣಕ್ಕೆ ಆಹ್ವಾನಿಸಲಾಗಿದೆ.

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರವು ಜೂನ್ 26 ರಿಂದ ಜೂನ್ 29 ವರೆಗೆ ನೆಲಮಂಗಲದ ಕ್ಷೇಮ ವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಮಹಮ್ಮದ್ ಕುಂಞ, ಮತ್ತು ವೀಣಾ ಅವರು ನೂತನ ಶಾಸಕರಿಗೆ ಪ್ರವಚನ ನೀಡಲಿದ್ದಾರೆ.

‘ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಿಯೇ ಇಲ್ಲ’ ಎಂದ ಸ್ಪೀಕರ್ ಖಾದರ್

ಶಿಬಿರಕ್ಕೆ ಆಹ್ವಾನಿತರ ಪಟ್ಟಿಯಲ್ಲಿದ್ದ ವಿವಾದಿತ ವ್ಯಕ್ತಿ ರವಿಶಂಕರ್ ಗುರೂಜಿ ಹಾಗೂ ಡಾ.ಗುರುರಾಜ ಕರ್ಜಗಿ ಅವರನ್ನು ಕೈಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸ್ಪೀಕರ್ ಯುಟಿ ಖಾದರ್, ”ಆಧ್ಯಾತ್ಮಿಕ ಚಿಂತಕರಿಗೆ ಆಹ್ವಾನ ನೀಡಿದ್ದೇವೆ. ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ಇನ್ನೂ ನಮಗೆ ಸಮ್ಮತಿ ಸೂಚಿಸಿಲ್ಲ. ಕೆಲವರು ಮಾತ್ರ ಒಪ್ಪಿಗೆ ನೀಡಿದ್ದಾರೆ. ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಈ ಬಗ್ಗೆ ಈಗಾಗಲೇ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ವ್ಯತಿರಿಕ್ತವಾದ ಮಾತುಗಳು ಕೇಳಿಬರುತ್ತಿದೆ. ತರಬೇತಿ ಶಿಬಿರವನ್ನು ನೋಡದೆ ಈಗಲೇ ಹೇಳಿಕೆಗಳನ್ನು ನೀಡುವುದು ಸರಿಯಲ್ಲ” ಎಂದು ಹೇಳಿದರು.

”ಆ ತರಬೇತಿ ಶಿಬಿರದಲ್ಲಿ ಏನಾದರೂ ಕುಂದುಕೊರತೆಗಳಿದ್ದರೆ, ಆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಲ್ಲಿ ಸರಿಪಡಿಸುತ್ತೇವೆ. ಈಗಲೇ ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ತಪ್ಪು. ರವಿಶಂಕರ್ ಗುರೂಜಿಯವರನ್ನು ನಾನು ಭೇಟಿ ಮಾಡಿದ ತಕ್ಷಣ ನಾನು ತರಬೇತಿ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ ಎಂದು ಗುಲ್ಲೆಬ್ಬಿಸುವುದು ತಪ್ಪು. ನನಗೆ ಹಿಂದಿನಿಂದಲೂ ಅವರೊಂದಿಗೆ ಆತ್ಮೀಯ ಒಡನಾಡಿಯಾಗಿದ್ದೇನೆ. ಅಲ್ಲದೆ ಅವರು ಈಗ ಅಮೆರಿಕದಲ್ಲಿ ದೊಡ್ಡಮಟ್ಟದ ಕಾರ್ಯಕ್ರಮದ ಹಿಂದಿದ್ದಾರೆ. ದೇಶದಲ್ಲಿಯೇ ಇಲ್ಲದ ಅವರ ಬಗ್ಗೆ ಇಲ್ಲಸಲ್ಲದ ಮಾತನಾಡುವುದು ತಪ್ಪು” ಎಂದರು.

”ಅಲ್ಲದೇ ಈ ಬಗ್ಗೆ ನನ್ನಲ್ಲಿ ಸ್ಪಷ್ಟೀಕರಣ ಕೇಳದೆ ಹೇಳಿಕೆಗಳನ್ನು ಕೊಡುವವರಿಗೆ ನಾನೇನು ಹೇಳಲು ಹೋಗುವುದಿಲ್ಲ. ಆದ್ದರಿಂದ ತರಬೇತಿ ಕ್ಯಾಂಪ್ ಮುಗಿದ ಬಳಿಕ ಅದರ ಸಾಧಕ ಬಾಧಕಗಳು, ಸಲಹೆ ಸೂಚನೆಗಳನ್ನು ನೀಡಿದರೆ ಅದನ್ನು ಸ್ವಾಗತಿಸಲು ತಯಾರಿದ್ದೇವೆ‌” ಎಂದು ಯು.ಟಿ.ಖಾದರ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...