Homeಕರ್ನಾಟಕಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

ಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

- Advertisement -
- Advertisement -

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ ನಡೆಸಲು ಕೆಲವು ವಿವಾದಿತ ವ್ಯಕ್ತಿಗಳನ್ನು ಅಹ್ವಾನಿಸಲು ಸಿದ್ದತೆ ನಡೆದಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಆಹ್ವಾನಿತರ ಪಟ್ಟಿಯಲ್ಲಿದ್ದ ರವಿಶಂಕರ್ ಗುರೂಜಿ ಮತ್ತು ಡಾ.ಗುರುರಾಜ ಕರ್ಜಗಿ ಅವರ ಹೆಸರನ್ನು ಕೈ ಬಿಡಲಾಗಿದೆ.

ಸಾರ್ವಜನಿಕರ ಭಾರೀ ವಿರೋಧವೇ ಈ ಇಬ್ಬರ ಹೆಸರನ್ನು ಕೈಬಿಡಲು ಕಾರಣ ಎಂದು ಹೇಳಲಾಗಿದೆ. ಗುರುರಾಜ ಕರ್ಜಗಿ ಅವರ ಬದಲಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಮತ್ತು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಭಾಷಣಕ್ಕೆ ಆಹ್ವಾನಿಸಲಾಗಿದೆ.

ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರವು ಜೂನ್ 26 ರಿಂದ ಜೂನ್ 29 ವರೆಗೆ ನೆಲಮಂಗಲದ ಕ್ಷೇಮ ವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಮಹಮ್ಮದ್ ಕುಂಞ, ಮತ್ತು ವೀಣಾ ಅವರು ನೂತನ ಶಾಸಕರಿಗೆ ಪ್ರವಚನ ನೀಡಲಿದ್ದಾರೆ.

‘ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಿಯೇ ಇಲ್ಲ’ ಎಂದ ಸ್ಪೀಕರ್ ಖಾದರ್

ಶಿಬಿರಕ್ಕೆ ಆಹ್ವಾನಿತರ ಪಟ್ಟಿಯಲ್ಲಿದ್ದ ವಿವಾದಿತ ವ್ಯಕ್ತಿ ರವಿಶಂಕರ್ ಗುರೂಜಿ ಹಾಗೂ ಡಾ.ಗುರುರಾಜ ಕರ್ಜಗಿ ಅವರನ್ನು ಕೈಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸ್ಪೀಕರ್ ಯುಟಿ ಖಾದರ್, ”ಆಧ್ಯಾತ್ಮಿಕ ಚಿಂತಕರಿಗೆ ಆಹ್ವಾನ ನೀಡಿದ್ದೇವೆ. ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ಇನ್ನೂ ನಮಗೆ ಸಮ್ಮತಿ ಸೂಚಿಸಿಲ್ಲ. ಕೆಲವರು ಮಾತ್ರ ಒಪ್ಪಿಗೆ ನೀಡಿದ್ದಾರೆ. ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಈ ಬಗ್ಗೆ ಈಗಾಗಲೇ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ವ್ಯತಿರಿಕ್ತವಾದ ಮಾತುಗಳು ಕೇಳಿಬರುತ್ತಿದೆ. ತರಬೇತಿ ಶಿಬಿರವನ್ನು ನೋಡದೆ ಈಗಲೇ ಹೇಳಿಕೆಗಳನ್ನು ನೀಡುವುದು ಸರಿಯಲ್ಲ” ಎಂದು ಹೇಳಿದರು.

”ಆ ತರಬೇತಿ ಶಿಬಿರದಲ್ಲಿ ಏನಾದರೂ ಕುಂದುಕೊರತೆಗಳಿದ್ದರೆ, ಆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಲ್ಲಿ ಸರಿಪಡಿಸುತ್ತೇವೆ. ಈಗಲೇ ಪೂರ್ವಾಗ್ರಹ ಪೀಡಿತರಾಗಿ ಮಾತನಾಡುವುದು ತಪ್ಪು. ರವಿಶಂಕರ್ ಗುರೂಜಿಯವರನ್ನು ನಾನು ಭೇಟಿ ಮಾಡಿದ ತಕ್ಷಣ ನಾನು ತರಬೇತಿ ಶಿಬಿರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ ಎಂದು ಗುಲ್ಲೆಬ್ಬಿಸುವುದು ತಪ್ಪು. ನನಗೆ ಹಿಂದಿನಿಂದಲೂ ಅವರೊಂದಿಗೆ ಆತ್ಮೀಯ ಒಡನಾಡಿಯಾಗಿದ್ದೇನೆ. ಅಲ್ಲದೆ ಅವರು ಈಗ ಅಮೆರಿಕದಲ್ಲಿ ದೊಡ್ಡಮಟ್ಟದ ಕಾರ್ಯಕ್ರಮದ ಹಿಂದಿದ್ದಾರೆ. ದೇಶದಲ್ಲಿಯೇ ಇಲ್ಲದ ಅವರ ಬಗ್ಗೆ ಇಲ್ಲಸಲ್ಲದ ಮಾತನಾಡುವುದು ತಪ್ಪು” ಎಂದರು.

”ಅಲ್ಲದೇ ಈ ಬಗ್ಗೆ ನನ್ನಲ್ಲಿ ಸ್ಪಷ್ಟೀಕರಣ ಕೇಳದೆ ಹೇಳಿಕೆಗಳನ್ನು ಕೊಡುವವರಿಗೆ ನಾನೇನು ಹೇಳಲು ಹೋಗುವುದಿಲ್ಲ. ಆದ್ದರಿಂದ ತರಬೇತಿ ಕ್ಯಾಂಪ್ ಮುಗಿದ ಬಳಿಕ ಅದರ ಸಾಧಕ ಬಾಧಕಗಳು, ಸಲಹೆ ಸೂಚನೆಗಳನ್ನು ನೀಡಿದರೆ ಅದನ್ನು ಸ್ವಾಗತಿಸಲು ತಯಾರಿದ್ದೇವೆ‌” ಎಂದು ಯು.ಟಿ.ಖಾದರ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ ಒಕ್ಕೂಟ’ದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...