Homeಕರ್ನಾಟಕದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ: ರಾಜಣ್ಣ ಕ್ಷಮೆ ಕೇಳಬೇಕು ಎಂದ ಡಿಕೆ ಶಿವಕುಮಾರ್‌

ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ: ರಾಜಣ್ಣ ಕ್ಷಮೆ ಕೇಳಬೇಕು ಎಂದ ಡಿಕೆ ಶಿವಕುಮಾರ್‌

- Advertisement -
- Advertisement -

ಮಾಜಿ ಪ್ರಧಾನಿ, ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ. ದೇವೇಗೌಡರ ಬಗ್ಗೆ ಕಾಂಗ್ರೆಸ್‌‌ನ ಮಾಜಿ ಶಾಸಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ಇಡೀ ಕಾಂಗ್ರೆಸ್ ಪಕ್ಷವೂ ಖಂಡಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ. ಅವರ ಹೇಳಿಕೆ ಅಮಾನವೀಯವಾಗಿದ್ದು, ಕೂಡಲೇ ಅವರು ದೇವೇಗೌಡರ ಕ್ಷಮೆ ಕೇಳುವಂತೆ ಸೂಚನೆ ನೀಡುತ್ತೇನೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ತುಮಕೂರಿನ ಮಧುಗಿರಿ ತಾಲ್ಲೂಕಿನ ಕಾವಣದಾಲ ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ್ದ ರಾಜಣ್ಣ ಅವರು, “ದೇವೇಗೌಡರು ಇಬ್ಬರ ಮೇಲೆ ಕೈ ಹಾಕ್ಕೊಂಡು ಹೋಗ್ತಾವ್ರೇ.. ಅವರು ನಾಲ್ವರ ಮೇಲೆ ಹೋಗೋದು ಹತ್ತಿರದಲ್ಲೇ ಇದೆ” ಎಂದು ಹೇಳಿದ್ದರು. ಅವರ ಈ ಹೇಳಿಕೆ ವಿರುದ್ಧ ರಾಜ್ಯ ರಾಜಕೀಯ ವಲಯದಲ್ಲಿ ವ್ಯಾಪಕ ಆಕ್ರೋಶ ಉಂಟಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಶಿವಕುಮಾರ್‌ ಅವರು, “ನಮ್ಮ ಪಕ್ಷದ ನಾಯಕರೊಬ್ಬರು ರಾಜ್ಯದ ಹಿರಿಯ ರಾಜಕಾರಣಿಯ ಪರಿಸ್ಥಿತಿಯ ಬಗ್ಗೆ ಆಡಿರುವ ಮಾತು ಇಡೀ ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಪಕ್ಷದ ನಾಯಕನಾಗಿ ಹಾಗೂ ವ್ಯಯಕ್ತಿಕವಾಗಿಯೂ ಇದನ್ನು ನಾನು ಖಂಡಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿ.ಗೆ ಗುಂಡಿಕ್ಕಿ ಕೊಲ್ಲುವ ಬೆದರಿಕೆ: ಪಬ್ಲಿಕ್‌ ಟಿವಿ ವಿರುದ್ಧ ಕಾಂಗ್ರೆಸ್‌ ದೂರು

“ಪಕ್ಷದ ನಾಯಕರು ಮೊದಲಿಗೆ ಮಾನವೀಯತೆಯನ್ನು ಮೆರೆಯಬೇಕು. ಅವರು ಸಮಾಜಕ್ಕೆ, ರಾಷ್ಟ್ರಕ್ಕೆ ಸೇವೆ ಮಾಡಿದಂತಹ ಒಬ್ಬ ನಾಯಕರಾಗಿದ್ದಾರೆ. ದೇವೇಗೌಡರು ಪ್ರಧಾನಿಯಾಗಲು ಪಕ್ಷ ಬೆಂಬಲ ನೀಡಿತ್ತು. ಇಡೀ ರಾಷ್ಟ್ರ ಅವರನ್ನು ಗೌರವದಿಂದ ಕಾಣುತ್ತಿದೆ. ಅಂತಹ ವ್ಯಕ್ತಿಯ ಆರೋಗ್ಯದ ಬಗ್ಗೆ ಮಾತನಾಡುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾನು ಕೂಡಲೇ ರಾಜಣ್ಣ ಅವರಿಗೆ ಕರೆ ಮಾಡಿ, ಅವರು ಕೂಡಲೇ ಕ್ಷಮಾಪಣೆ ಕೇಳಬೇಕು ಎಂದು ಸೂಚಿಸುತ್ತೇನೆ. ನಾನು ಕೂಡಾ ಈ ಸಂದಂರ್ಭದಲ್ಲಿ ಇದನ್ನು ಖಂಡಿಸುತ್ತೇನೆ. ಪಕ್ಷದಲ್ಲಿ ಇದರ ಬಗ್ಗೆ ಆಂತರಿಕವಾಗಿ ಚರ್ಚೆ ಮಾಡುತ್ತೇನೆ. ಸಮಾಜ ಕೂಡಾ ಈ ವಿವಾದದ ಬಗ್ಗೆ ತಾಳ್ಮೆಯಿಂದ ಇರಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ರೀತಿಯ ಹೇಳಿಕೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಪೂಜ್ಯರಾದ ದೇವೇಗೌಡರಿಗೆ ಉತ್ತಮ ಆರೋಗ್ಯ ಮತ್ತು ಇನ್ನಷ್ಟು ಸೇವೆ ಮಾಡುವ ಅವಕಾಶವನ್ನು ದೇವರು ಕರುಣಿಸಲಿ. ಅವರು ನಮ್ಮ ರಾಜ್ಯಕ್ಕೆ ಆಸ್ತಿ ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದೇನು?

ಮಧುಗಿರಿ ತಾಲ್ಲೂಕಿನ ಕಾವಣದಾಲ ಗ್ರಾಮದಲ್ಲಿ ಮಾತನಾಡುತ್ತಿದ್ದ ಅವರು, “ಇದು ನನ್ನ‌ ಕೊನೇ ಚುನಾವಣೆ. ಶೋಕಿಗೆ, ಮುಖಸ್ತುತಿಗೆ ರಾಜಕಾರಣ ಮಾಡೋದು ಬೇಡ. ನಾನು ಶಾಸಕನಾದರೆ ನೀವೆಲ್ಲರೂ ಆದಂತೆ. ನೀವು ಹೋರಾಟ ಮಾಡಿ, ನಾನು ಶಾಸಕನಾದರೆ ನಾಮಕಾವಸ್ಥೆಗೆ ಇರ್ತೀನಿ. ಏನಾದರೂ ಕೆಲಸ ಆಗಬೇಕಾದ್ರೆ ನೀವೇ ಅಧಿಕಾರಿಗಳನ್ನ ಕೇಳೋ ಶಕ್ತಿ ಬರುತ್ತೆ” ಎಂದು ಹೇಳಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ಮುಂದಿನ ದಿನಗಳಲ್ಲಿ ಪ್ರತಿ ಮನೆ ಬಾಗಿಲಿಗೂ ಬಂದು ಓಟ್ ಕೇಳ್ತೀನಿ. ಮುಂದೆ ನೀವು ನಿಂತ್ಕೋ ಅಂದ್ರೂ ನಿಲ್ಲಲ್ಲಾ… ನನಗೆ ಆಗಲೇ 72 ವರ್ಷ, 77 ಆದ್ರೆ ಕೈಕಾಲು ಅಲಾಡ್ತಿರುತ್ತೆ. ನಮ್ಮ ಸರ್ಕಾರ ಬಂದ್ರೆ ನೂರಕ್ಕೆ ನೂರರಷ್ಟು ಮಂತ್ರಿ ಆಗ್ತೀನಿ. ದೇವೇಗೌಡರು ಇಬ್ಬರು ಮೇಲೆ ಹಾಕ್ಕೊಂಡು ಹೋಗ್ತಾವ್ರೇ.. ಹತ್ತಿರದಲ್ಲೇ ಇದೇ ನಾಲ್ಕರ ಮೇಲೆ ಹೋಗೋದು” ಎಂದು ರಾಜಣ್ಣ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಕ್ಷ ಸಿದ್ದಾಂತಗಳೇನಾದರು ಇರಲಿ ಈ ಅಯ್ಯೊಗ್ಯ ರಾಜಕಾರಣಿಗಳಲ್ಲಿ ನಿಜವಾಗಿಯೂ ಮಾನವೀಯ ಮೌಲ್ಯ ಸೌಜನ್ಯ ಇದೆಯೇ?

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....