Homeಮುಖಪುಟರೈತ ಹೋರಾಟದ ಕುರಿತು ವಿವಾದಾತ್ಮಕ ಹೇಳಿಕೆಯ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ FIR

ರೈತ ಹೋರಾಟದ ಕುರಿತು ವಿವಾದಾತ್ಮಕ ಹೇಳಿಕೆಯ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ FIR

ರೈತರ ಈ ನಿರಂತರ ಪ್ರತಿಭಟನೆ ಕೊನೆಗೊಳ್ಳುವುದಿಲ್ಲ. ನಾವು ದೇಹಗಳನ್ನು ರಾಶಿ ಮಾಡಬೇಕಾಗಬಹುದು. ನಾವು ರಕ್ತ ಚೆಲ್ಲುತ್ತೇವೆ. ನಮ್ಮ ಗುರಿಯನ್ನು ಸಾಧಿಸಲು ಯಾವ ಮಟ್ಟಕ್ಕೆ ಬೇಕಾದರೂ ಹೋಗಬಹುದು ಎಂದು ಸಂಸದರು ಹೇಳಿದ್ದರು.

- Advertisement -
- Advertisement -

ಕಾಂಗ್ರೆಸ್ ಸಂಸದ ರವ್ನೀತ್ ಸಿಂಗ್ ರೈತ ಹೋರಾಟದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ದೆಹಲಿಯ ಜಂತರ್‌ ಮಂತರ್‌ನಲ್ಲಿ ಕೆಲವು ದಿನಗಳ ಹಿಂದೆ ರವ್ನೀತ್ ಸಿಂಗ್ ಮಾಡಿದ ಭಾಷಣವು ಪೂರ್ವಗ್ರಹಪೀಡಿತವಾಗಿದ್ದು, ಇದು ರಾಷ್ಟ್ರೀಯ ಏಕತೆಗೆ ಧಕ್ಕೆಯುಂಟುಮಾಡುತ್ತದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಶಾಂತಿ ಕದಡುವ ಉದ್ದೇಶದಿಂದ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 504 ಮತ್ತು 506 ರ ಅಡಿಯಲ್ಲಿ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಕನ್ನಡ ಧ್ವಜ ವಿವಾದ; ಕನ್ನಡಿಗರಿಗೇ ಎಚ್ಚರಿಕೆ ನೀಡುವವರಿಗೆ ತಕ್ಕ ಶಾಸ್ತಿಯಾಗಬೇಕು- ಎಚ್‌.ಡಿ.ಕೆ

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ಮಾಡುತ್ತಿರುವ ಪ್ರತಿಭಟನೆಯ ಕುರಿತ ಟಿವಿ ಚರ್ಚೆಯಲ್ಲಿ, ಡಿಸೆಂಬರ್ 25 ರಂದು ಸಂಸದರು ನೀಡಿದ ಹೇಳಿಕೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.

“ಸಂಸದರ ಹೇಳಿಕೆಯು ಸಾರ್ವಜನಿಕರಲ್ಲಿ ಭಯವನ್ನುಂಟುಮಾಡುವ ಸಾಧ್ಯತೆಯಿದೆ. ಇದು ಯಾವುದೇ ವ್ಯಕ್ತಿಯನ್ನು ರಾಜ್ಯ ಅಥವಾ ಸಾರ್ವಜನಿಕ ಶಾಂತಿಯ ವಿರುದ್ಧ ಅಪರಾಧ ಮಾಡಲು ಪ್ರೇರೇಪಿಸಬಹುದು” ಎಂದು ನವೀನ್‌ಕುಮಾರ್ ಎಂಬುವವರು ದೂರಿನಲ್ಲಿ ಆರೋಪಿಸಿದ್ದಾರೆ.

ಚರ್ಚೆಯಲ್ಲಿ, “ರೈತರ ಈ ನಿರಂತರ ಪ್ರತಿಭಟನೆ ಕೊನೆಗೊಳ್ಳುವುದಿಲ್ಲ. ನಾವು ದೇಹಗಳನ್ನು ರಾಶಿ ಮಾಡಬೇಕಾಗಬಹುದು. ನಾವು ರಕ್ತ ಚೆಲ್ಲುತ್ತೇವೆ. ನಮ್ಮ ಗುರಿಯನ್ನು ಸಾಧಿಸಲು ಯಾವ ಮಟ್ಟಕ್ಕೆ ಬೇಕಾದರೂ ಹೋಗಬಹುದು” ಎಂದು ಹೇಳಿದ್ದರು. ಈ ಹೇಳಿಕೆಯ ವಿರುದ್ಧ ಡಿಸಂಬರ್ 31 ರಂದು ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ನನ್ನ ಅಂತ್ಯಕ್ರಿಯೆ ಮಾಡಿ: ಡೆತ್‌ನೋಟ್ ಬರೆದಿಟ್ಟು ಪ್ರಾಣಬಿಟ್ಟ ಹೋರಾಟನಿರತ ರೈತ

ತಮ್ಮ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದರು, ಜನವರಿ 1 ರಂದು ಫೇಸ್‌ಬುಕ್ ಲೈವ್ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ತಮ್ಮ ವಿರುದ್ಧದ ಎಫ್‌ಐಆರ್‌ ಅನ್ನು, ತಮಗೆ ಸಿಕ್ಕಿದ ‘ಪದಕ’ ಎಂದು ಪರಿಗಣಿಸಿರುವುದಾಗಿ ಹೇಳಿದ್ದಾರೆ.

“ನಾನು ಇಡೀ ದಿನ ಇಲ್ಲಿಯೇ ಕುಳಿತಿರುತ್ತೇನೆ. ದಯವಿಟ್ಟು ನನ್ನನ್ನು ಬಂಧಿಸಿ. ಆದರೆ ನನ್ನನ್ನು ಬಂಧಿಸುವ ಧೈರ್ಯ ನಿಮ್ಮಲ್ಲಿಲ್ಲ. ನಾನೇ ಬಂದು ಶರಣಾಗುತ್ತೇನೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಉದ್ದೇಶಿಸಿ ಹೇಳಿದ್ದಾರೆ.


ಇದನ್ನೂ ಓದಿ: ರಾಷ್ಟ್ರಪತಿ ಪದಕ ವಿಜೇತ ಐಪಿಎಸ್ ಡಿ. ರೂಪಾ: 20 ವರ್ಷದಲ್ಲಿ 40 ಸಲ ವರ್ಗಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....