Homeಮುಖಪುಟಮಮತಾ ಬ್ಯಾನರ್ಜಿ ವಿರುದ್ಧ ವಿವಾದಿತ ಹೇಳಿಕೆ; ಬಿಜೆಪಿ ನಾಯಕನ ವಿರುದ್ಧ FIR

ಮಮತಾ ಬ್ಯಾನರ್ಜಿ ವಿರುದ್ಧ ವಿವಾದಿತ ಹೇಳಿಕೆ; ಬಿಜೆಪಿ ನಾಯಕನ ವಿರುದ್ಧ FIR

ಇದು ಕೇಸರಿ ಪಕ್ಷದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಇಂತಹ ಮಾತುಗಳು ಮತ್ತು ಹೇಳಿಕೆಗಳು ಬಿಜೆಪಿ ಮುಖಂಡರಿಂದ ಮಾತ್ರ ಬರಬಹುದು ಎಂದು ಟಿಎಂಸಿಯ ಹಿರಿಯ ಮುಖಂಡ ಸುಗತೊ ರಾಯ್ ಹೇಳಿದ್ದಾರೆ

- Advertisement -
- Advertisement -

ನಾನು ಕೊರೊನಾ ಸೋಂಕಿಗೆ ಒಳಗಾಗಿದ್ದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವುದಾಗಿ ಹೇಳಿಕೆ ನೀಡಿದ್ದ ನೂತನ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಝ್ರಾ  ವಿರುದ್ಧ ತೃಣಮೂಲ ಕಾಂಗ್ರೆಸ್ ದೂರು ದಾಖಲಿಸಿದೆ.

ದಕ್ಷಿಣ 24 ಪರಗಣಗಳಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಹಜ್ರಾ, ನಾನು ಕೊರೊನಾ ಸೋಂಕಿಗೆ ಒಳಗಾಗಿದ್ದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಅಪ್ಪಿಕೊಳ್ಳುವ ಮೂಲಕ, ಅವರಿಗೆ ಕೊರೊನಾ ಸೋಂಕಿನಿಂದ ಬಳಲುವ ಕುಟುಂಬದವರ ನೋವನ್ನು ಅರ್ಥ ಮಾಡಿಸುತ್ತಿದ್ದೆ ಎಂದಿದ್ದರು. ಹಜ್ರಾ ವಿರುದ್ಧ ಸಿಲಿಗುರಿ ಠಾಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪ್ರಕರಣ ದಾಖಲಿಸಿದೆ.

ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

ನಮ್ಮ ಕಾರ್ಯಕರ್ತರು ಕೊರೊನಾಕ್ಕಿಂತ ದೊಡ್ಡ ಶತ್ರು ಮಮತಾ ಬ್ಯಾನರ್ಜಿ ವಿರುದ್ಧ ಹೋರಾಡುತ್ತಿದ್ದಾರೆ. ಅವರು (ಬಿಜೆಪಿ ಕಾರ್ಯಕರ್ತರು) ಮಾಸ್ಕ್ ಧರಿಸದೆ ಮಮತಾ ಬ್ಯಾನರ್ಜಿ ವಿರುದ್ಧ ಹೋರಾಡುವುದಾದರೆ ಮಾಸ್ಕ್ ಧರಿಸದೆಯೇ ಕೋವಿಡ್ 19 ವಿರುದ್ಧವೂ ಹೋರಾಡಬಹುದು ಎಂದು ಅವರು ಭಾವಿಸುತ್ತಾರೆಎಂದು ಹಝ್ರಾ ಹೇಳಿದ್ದಾರೆ.

ಕಳೆದ ವರ್ಷ ಬಿಜೆಪಿಗೆ ಸೇರ್ಪಡೆಯಾದ ಮಾಜಿ ತೃಣಮೂಲ ಕಾಂಗ್ರೆಸ್ ಸಂಸದ ಹಜ್ರಾ ಅವರು ರಾಜ್ಯದಲ್ಲಿ ಕೋವಿಡ್ -19 ರೋಗಿಗಳ ಶವಗಳನ್ನು ಅಂತ್ಯಕ್ರಿಯೆ ನಡೆಸುತ್ತಿರುವ ವಿಧಾನದ ಬಗ್ಗೆ ಮಮತಾ ಬ್ಯಾನರ್ಜಿ ಅವರ ಆಡಳಿತವನ್ನು ಟೀಕಿಸಿದ್ದಾರೆ.

ಸೋಂಕಿನಿಂದ ಮೃತಪಟ್ಟವರ ಶವಸಂಸ್ಕಾರಕ್ಕೆ ಸೀಮೆ ಎಣ್ಣೆ ಬಳಸುತ್ತಾರೆ. ಹೆತ್ತವರ ಮುಖವನ್ನು ನೋಡಲು ಮಕ್ಕಳಿಗೆ ಅವಕಾಶವಿರಲಿಲ್ಲ. ನಾವು ಸತ್ತ ನಾಯಿ, ಬೆಕ್ಕುಗಳಿಗೂ ಹೀಗೆ ಮಾಡುವುದಿಲ್ಲಎಂದಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ಹಝ್ರಾ ಅವರ ಹೇಳಿಕೆಯನ್ನು ಖಂಡಿಸಿರುವ ಟಿಎಂಸಿಯ ಹಿರಿಯ ಮುಖಂಡ ಸುಗತೊ ರಾಯ್ ಇದು ಕೇಸರಿ ಪಕ್ಷದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಇಂತಹ ಮಾತುಗಳು ಮತ್ತು ಹೇಳಿಕೆಗಳು ಬಿಜೆಪಿ ಮುಖಂಡರಿಂದ ಮಾತ್ರ ಬರಬಹುದು. ಅಂತಹ ಹುಚ್ಚು ಹೇಳಿಕೆಗಳನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಸಿಲಿಗುರಿ ಘಟಕವೂ ಬಿಜೆಪಿ ನಾಯಕ ಹಝ್ರಾ ವಿರುದ್ಧ ರ್‍ಯಾಲಿ ನಡೆಸಿದೆ.

ದೂರು ದಾಖಲಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಹಝ್ರಾ ’ನನ್ನ ಹೇಳಿಕೆ ಕೀಳಾಗಿ ಕಾಣುತ್ತಿದ್ದರೆ, ಮಮತಾ ಬ್ಯಾನರ್ಜಿ ಕೂಡ ಪ್ರಧಾನ ಮಂತ್ರಿಯ ಬಗ್ಗೆ ಇಂತಹ ಟೀಕೆಗಳನ್ನು ಮಾಡಿದ್ದಾರೆ. ಎರಡನೆಯದಾಗಿ, ನನ್ನ ವಿರುದ್ಧ ಒಂದು ಎಫ್‌ಐಆರ್ ದಾಖಲಾಗಿದ್ದರೆ, ಟಿಎಂಸಿ ನಾಯಕರ ವಿರುದ್ಧ ಕನಿಷ್ಠ 10 ಎಫ್‌ಐಆರ್ ದಾಖಲಿಸಬೇಕು ’ಎಂದಿದ್ದಾರೆ. ಆದರೆ ಈ ವಿವಾದದಿಂದ ರಾಜ್ಯ ಬಿಜೆಪಿ ಘಟಕ ದೂರ ಉಳಿದಿದೆ.


ಇದನ್ನೂ ಓದಿ: ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...