Homeಮುಖಪುಟಮಮತಾ ಬ್ಯಾನರ್ಜಿ ವಿರುದ್ಧ ವಿವಾದಿತ ಹೇಳಿಕೆ; ಬಿಜೆಪಿ ನಾಯಕನ ವಿರುದ್ಧ FIR

ಮಮತಾ ಬ್ಯಾನರ್ಜಿ ವಿರುದ್ಧ ವಿವಾದಿತ ಹೇಳಿಕೆ; ಬಿಜೆಪಿ ನಾಯಕನ ವಿರುದ್ಧ FIR

ಇದು ಕೇಸರಿ ಪಕ್ಷದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಇಂತಹ ಮಾತುಗಳು ಮತ್ತು ಹೇಳಿಕೆಗಳು ಬಿಜೆಪಿ ಮುಖಂಡರಿಂದ ಮಾತ್ರ ಬರಬಹುದು ಎಂದು ಟಿಎಂಸಿಯ ಹಿರಿಯ ಮುಖಂಡ ಸುಗತೊ ರಾಯ್ ಹೇಳಿದ್ದಾರೆ

- Advertisement -
- Advertisement -

ನಾನು ಕೊರೊನಾ ಸೋಂಕಿಗೆ ಒಳಗಾಗಿದ್ದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವುದಾಗಿ ಹೇಳಿಕೆ ನೀಡಿದ್ದ ನೂತನ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಝ್ರಾ  ವಿರುದ್ಧ ತೃಣಮೂಲ ಕಾಂಗ್ರೆಸ್ ದೂರು ದಾಖಲಿಸಿದೆ.

ದಕ್ಷಿಣ 24 ಪರಗಣಗಳಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಹಜ್ರಾ, ನಾನು ಕೊರೊನಾ ಸೋಂಕಿಗೆ ಒಳಗಾಗಿದ್ದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಅಪ್ಪಿಕೊಳ್ಳುವ ಮೂಲಕ, ಅವರಿಗೆ ಕೊರೊನಾ ಸೋಂಕಿನಿಂದ ಬಳಲುವ ಕುಟುಂಬದವರ ನೋವನ್ನು ಅರ್ಥ ಮಾಡಿಸುತ್ತಿದ್ದೆ ಎಂದಿದ್ದರು. ಹಜ್ರಾ ವಿರುದ್ಧ ಸಿಲಿಗುರಿ ಠಾಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪ್ರಕರಣ ದಾಖಲಿಸಿದೆ.

ಇದನ್ನೂ ಓದಿ: ಜಿಎಸ್‌ಟಿ ಪರಿಹಾರ: ಸಾಲ ಪಡೆಯುವಂತೆ ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಸಲಹೆ

ನಮ್ಮ ಕಾರ್ಯಕರ್ತರು ಕೊರೊನಾಕ್ಕಿಂತ ದೊಡ್ಡ ಶತ್ರು ಮಮತಾ ಬ್ಯಾನರ್ಜಿ ವಿರುದ್ಧ ಹೋರಾಡುತ್ತಿದ್ದಾರೆ. ಅವರು (ಬಿಜೆಪಿ ಕಾರ್ಯಕರ್ತರು) ಮಾಸ್ಕ್ ಧರಿಸದೆ ಮಮತಾ ಬ್ಯಾನರ್ಜಿ ವಿರುದ್ಧ ಹೋರಾಡುವುದಾದರೆ ಮಾಸ್ಕ್ ಧರಿಸದೆಯೇ ಕೋವಿಡ್ 19 ವಿರುದ್ಧವೂ ಹೋರಾಡಬಹುದು ಎಂದು ಅವರು ಭಾವಿಸುತ್ತಾರೆಎಂದು ಹಝ್ರಾ ಹೇಳಿದ್ದಾರೆ.

ಕಳೆದ ವರ್ಷ ಬಿಜೆಪಿಗೆ ಸೇರ್ಪಡೆಯಾದ ಮಾಜಿ ತೃಣಮೂಲ ಕಾಂಗ್ರೆಸ್ ಸಂಸದ ಹಜ್ರಾ ಅವರು ರಾಜ್ಯದಲ್ಲಿ ಕೋವಿಡ್ -19 ರೋಗಿಗಳ ಶವಗಳನ್ನು ಅಂತ್ಯಕ್ರಿಯೆ ನಡೆಸುತ್ತಿರುವ ವಿಧಾನದ ಬಗ್ಗೆ ಮಮತಾ ಬ್ಯಾನರ್ಜಿ ಅವರ ಆಡಳಿತವನ್ನು ಟೀಕಿಸಿದ್ದಾರೆ.

ಸೋಂಕಿನಿಂದ ಮೃತಪಟ್ಟವರ ಶವಸಂಸ್ಕಾರಕ್ಕೆ ಸೀಮೆ ಎಣ್ಣೆ ಬಳಸುತ್ತಾರೆ. ಹೆತ್ತವರ ಮುಖವನ್ನು ನೋಡಲು ಮಕ್ಕಳಿಗೆ ಅವಕಾಶವಿರಲಿಲ್ಲ. ನಾವು ಸತ್ತ ನಾಯಿ, ಬೆಕ್ಕುಗಳಿಗೂ ಹೀಗೆ ಮಾಡುವುದಿಲ್ಲಎಂದಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ನಿರುದ್ಯೋಗ ದರ, ದೇಶದ ಒಟ್ಟು ನಿರುದ್ಯೋಗ ದರಕ್ಕಿಂತ ಉತ್ತಮ: ಮಮತಾ ಬ್ಯಾನರ್ಜಿ

ಹಝ್ರಾ ಅವರ ಹೇಳಿಕೆಯನ್ನು ಖಂಡಿಸಿರುವ ಟಿಎಂಸಿಯ ಹಿರಿಯ ಮುಖಂಡ ಸುಗತೊ ರಾಯ್ ಇದು ಕೇಸರಿ ಪಕ್ಷದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಇಂತಹ ಮಾತುಗಳು ಮತ್ತು ಹೇಳಿಕೆಗಳು ಬಿಜೆಪಿ ಮುಖಂಡರಿಂದ ಮಾತ್ರ ಬರಬಹುದು. ಅಂತಹ ಹುಚ್ಚು ಹೇಳಿಕೆಗಳನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ.

ತೃಣಮೂಲ ಕಾಂಗ್ರೆಸ್‌ನ ಸಿಲಿಗುರಿ ಘಟಕವೂ ಬಿಜೆಪಿ ನಾಯಕ ಹಝ್ರಾ ವಿರುದ್ಧ ರ್‍ಯಾಲಿ ನಡೆಸಿದೆ.

ದೂರು ದಾಖಲಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಹಝ್ರಾ ’ನನ್ನ ಹೇಳಿಕೆ ಕೀಳಾಗಿ ಕಾಣುತ್ತಿದ್ದರೆ, ಮಮತಾ ಬ್ಯಾನರ್ಜಿ ಕೂಡ ಪ್ರಧಾನ ಮಂತ್ರಿಯ ಬಗ್ಗೆ ಇಂತಹ ಟೀಕೆಗಳನ್ನು ಮಾಡಿದ್ದಾರೆ. ಎರಡನೆಯದಾಗಿ, ನನ್ನ ವಿರುದ್ಧ ಒಂದು ಎಫ್‌ಐಆರ್ ದಾಖಲಾಗಿದ್ದರೆ, ಟಿಎಂಸಿ ನಾಯಕರ ವಿರುದ್ಧ ಕನಿಷ್ಠ 10 ಎಫ್‌ಐಆರ್ ದಾಖಲಿಸಬೇಕು ’ಎಂದಿದ್ದಾರೆ. ಆದರೆ ಈ ವಿವಾದದಿಂದ ರಾಜ್ಯ ಬಿಜೆಪಿ ಘಟಕ ದೂರ ಉಳಿದಿದೆ.


ಇದನ್ನೂ ಓದಿ: ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...